Mangaluru Visit: ಡಾ. ಸುಬ್ರಮಣಿಯನ್ ಸ್ವಾಮಿ ಸೆ.14, 15ರಂದು ಶೃಂಗೇರಿಗೆ ಆಗಮನ
Team Udayavani, Sep 13, 2024, 2:00 AM IST
ಮಂಗಳೂರು: ವಿರಾಟ್ ಹಿಂದೂಸ್ಥಾನ್ ಸಂಗಮ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಡಾ| ಸುಬ್ರಮಣಿಯನ್ ಸ್ವಾಮಿ ಅವರು ಸೆ.13ರಂದು ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಸಂಜೆ ದಿಲ್ಲಿಯಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.14ರಂದು ಬೆಳಗ್ಗೆ 8 ಗಂಟೆಗೆ ರಸ್ತೆ ಮಾರ್ಗವಾಗಿ ಶೃಂಗೇರಿಗೆ ತೆರಳಲಿದ್ದಾರೆ. ಸೆ. 14 ಮತ್ತು 15ರಂದು ಅವರ 85ನೇ ವರ್ಷದ ಜನ್ಮದಿನಾಚರಣೆ ಹಾಗೂ ವಿಎಚ್ಎಸ್ ಪ್ರತಿನಿಧಿಗಳ ಸಮಾವೇಶ ಶೃಂಗೇರಿಯ ಅಭಿನವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಡಾ| ಸ್ವಾಮಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಎರಡು ದಿನಗಳಲ್ಲಿ ಬೆಳಗ್ಗೆ ಡಾ| ಸ್ವಾಮಿ ಶೃಂಗೇರಿ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸೆ.15 ರಂದು ಮಧ್ಯಾಹ್ನ 3 ಗಂಟೆಗೆ ಶೃಂಗೇರಿಯಿಂದ ನಿರ್ಗಮಿಸಲಿದ್ದು, ರಾತ್ರಿ 8 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಿಲ್ಲಿಗೆ ಮರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.