Manipal ಮಾನಹಾನಿ, ಜೀವ ಬೆದರಿಕೆ: ಆರೋಪ
Team Udayavani, Dec 28, 2023, 12:26 AM IST
ಮಣಿಪಾಲ: ದಲಿತ ಮಹಿಳೆಯೋರ್ವರು ಪರಿಶಿಷ್ಟ ಜಾತಿ /ಪಂಗಡ ನಿಗಮದಿಂದ ಸಾಲ ಪಡೆದು ತನಗೆ ನೀಡಲಿಲ್ಲ ಎಂಬ ದ್ವೇಷದಿಂದ ಜಿಲ್ಲಾ ಕರವೇ ಸದಸ್ಯನೋರ್ವ ಮಹಿಳೆಯ ಬಗ್ಗೆ ಸುಳ್ಳು ಮೆಸೇಜ್ ಹರಿಯಬಿಟ್ಟು ಮಾನ ಹಾನಿ ಮಾಡಿದ್ದಾನೆ ಎಂದು ನೊಂದ ಮಹಿಳೆ ಮಣಿಪಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ನೊಂದ ಮಹಿಳೆಯು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯೆಯಾಗಿದ್ದು, ಆರೋಪಿ ಪ್ರಭಾಕರ ಕೂಡ ಇದರ ಸದಸ್ಯನಾಗಿದ್ದಾನೆ. ಮಹಿಳೆಗೆ ಪರಿಶಿಷ್ಟ ಜಾತಿ ನಿಗಮದಿಂದ ಸಾಲ ಪಡೆದು ನೀಡುವಂತೆ ಒತ್ತಾಯಿಸುತ್ತಿದ್ದನು ಎನ್ನಲಾಗಿದೆ. ಮಹಿಳೆಯೂ ಸಾಲ ನೀಡಲು ನಿರಾಕರಿಸಿದ್ದು, ಈ ದ್ವೇಷದಿಂದ ಆರೋಪಿ ಮಹಿಳೆಯ ನಡತೆಯ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಪ್ರಚಾರ ಮಾಡಿ ಮತ್ತೋರ್ವ ಕರವೇ ಸದಸ್ಯೆಯ ಮೊಬೈಲ್ಗೆ ದಲಿತ ಮಹಿಳೆಯ ಕುರಿತು ಅವಹೇಳನಕಾರಿ ವಾಯ್ಸ ಮೆಸೇಜ್ ಕಳುಹಿಸಿದ್ದಾನೆ. ಆ ಮೆಸೇಜ್ನಲ್ಲಿ ನೊಂದ ಮಹಿಳೆಯ ಮಾನಕ್ಕೆ ಕುಂದು ಬರುವಂತಹ ಅವಾಚ್ಯ ಮಾತುಗಳಿದ್ದು, ಆಕೆಯ ಮನೆಗೆ ಬೆಂಕಿ ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.