Manipal: ಅಭಿವೃದ್ಧಿ ಹೆಸರಲ್ಲಿ ಪ್ರಕೃತಿಗೆ ಧಕ್ಕೆ ಸಲ್ಲದು: ಸ್ಪೀಕರ್ ಯು. ಟಿ. ಖಾದರ್
Team Udayavani, Aug 1, 2024, 12:37 AM IST
ಮಣಿಪಾಲ: ಕೇರಳದಲ್ಲಿ ಸಂಭವಿಸಿದ ದುರಂತ ತೀವ್ರ ನೋವು ತಂದಿದೆ. ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಗೆ ಸಮಸ್ಯೆ ತಂದೊಡ್ಡದಂತೆ ಎಚ್ಚರ ವಹಿಸುವುದು ಅಗತ್ಯವಿದೆ ಮತ್ತು ದುರ್ಘಟನೆಗಳ ತಡೆಗೆ ಅಗತ್ಯ ಮುನ್ನೆಚ್ಚರಿಕೆಯೂ ಬೇಕು ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಹೇಳಿದ್ದಾರೆ.
ಮಣಿಪಾಲದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕೃತಿಗೆ ಪೂರಕವಾಗಿ ಮನುಷ್ಯರು ಬದುಕಬೇಕು. ನಿಸರ್ಗಕ್ಕೆ ವಿರುದ್ಧವಾಗಿ ಸರಕಾರದ ರೀತಿನೀತಿಗಳು ಇರಬಾರದು ಎಂದರು.
ಅಧಿಕೃತ ಸ್ಥಾನಮಾನಕ್ಕಾಗಿ ಕ್ರಮ : ತುಳುವಿಗೆ ರಾಜ್ಯದ ಎರಡನೇ ಅಧಿ ಕೃತ ಭಾಷಾ ಸ್ಥಾನಮಾನ ಸಿಗುವ ನಿಟ್ಟಿನಲ್ಲಿ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ತುಳುನಾಡಿನ ಸಂಸ್ಕೃತಿ, ಭಾಷೆ, ಜನರ ಪ್ರೀತಿ ವಿಶ್ವಾಸ ಜಗದಗಲ ವಿಸ್ತರಿಸಬೇಕು ಎಂದರು. ಪಡುಬಿದ್ರಿಯಲ್ಲಿ ಕೈಗಾರಿಕೆಗಳ ಸ್ಥಾಪನೆಯಿಂದ ಒಂದಿಷ್ಟು ಉದ್ಯೋಗ, ಅಭಿವೃದ್ಧಿ ಸಾಧ್ಯವಾಗಿದೆ. ಪರಿಸರ ಮಾಲಿನ್ಯವಾಗದಂತೆ ಉದ್ಯಮ, ಪ್ರಗತಿ ಸಾಧನೆಯಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.