Manipal ಪಾರ್ಟ್ಟೈಮ್ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ
Team Udayavani, May 12, 2024, 9:56 PM IST
ಮಣಿಪಾಲ: ಪಾರ್ಟ್ಟೈಮ್ ಉದ್ಯೋಗದ ಆಮಿಷಕ್ಕೆ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಅವರ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಒಂದು ಸಂದೇಶ ಬಂದಿತ್ತು. ಅನಂತರ ಅಪರಿಚಿತ ವ್ಯಕ್ತಿಯು ವಾಟ್ಸಾಪ್ ಮೂಲಕ ಲಿಂಕ್ ಕಳಿಸಿ ಟೆಲಿಗ್ರಾಮ್ ಆಫ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದು, ಅದರಂತೆ ಜೆನಿಫರ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ಅನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಅನಂತರ ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದಂತೆ ಜೆನಿಫರ್ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು. ಆದರೆ ಆ ವ್ಯಕ್ತಿಯು ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.