ಐಸಿಸಿ ಕ್ರಿಕೆಟ್‌ ಕೂಟಗಳಲ್ಲಿ ಹಲವು ಬದಲಾವಣೆ


Team Udayavani, Jun 3, 2021, 12:15 AM IST

ಐಸಿಸಿ ಕ್ರಿಕೆಟ್‌ ಕೂಟಗಳಲ್ಲಿ ಹಲವು ಬದಲಾವಣೆ

ದುಬಾೖ : ಐಸಿಸಿ ಮಂಡಳಿ ಸಭೆಯಲ್ಲಿ ಅನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮುಂದಿನ 2027 ಮತ್ತು 2031 ಆವೃತ್ತಿಗಳ ಪುರುಷರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಗಳಲ್ಲಿ ತಂಡಗಳ ಸಂಖ್ಯೆಯನ್ನು 14ಕ್ಕೆ ಏರಿಸಿದ್ದು, ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 20 ತಂಡಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದು ಇವುಗಳಲ್ಲಿ ಪ್ರಮುಖವಾದುದು. ಹಾಗೆಯೇ 2024ರಿಂದ 2030ರ ವರೆಗೆ ಪ್ರತೀ ಎರಡು ವರ್ಷಗಳಿಗೊಮ್ಮೆ ಟಿ20 ವಿಶ್ವಕಪ್‌ ಟೂರ್ನಿ ನಡೆಸುವ ಯೋಜನೆಯನ್ನೂ ಐಸಿಸಿ ಪ್ರಕಟಿಸಿದೆ.

2027 ಮತ್ತು 2031ರ ಏಕದಿನ ವಿಶ್ವಕಪ್‌ಗ್ಳಲ್ಲಿ ಆಡುವ ತಂಡಗಳ ಸಂಖ್ಯೆ 10ರಿಂದ 14ಕ್ಕೆ ಏರಿಕೆಯಾಗಲಿದೆ. ಇದರಿಂದ ಒಟ್ಟು ಪಂದ್ಯಗಳ ಸಂಖ್ಯೆ 54ಕ್ಕೆ ಏರಲಿವೆ. ಆದರೆ 2023ರ ವಿಶ್ವಕಪ್‌ನಲ್ಲಿ ಹತ್ತೇ ತಂಡಗಳು ಆಡಲಿವೆ. ಇನ್ನು 2024, 2026, 2028 ಮತ್ತು 2030ರ ಟಿ20 ವಿಶ್ವಕಪ್‌ಗ್ಳಲ್ಲಿ 20 ತಂಡಗಳು ಭಾಗವಹಿಸಲಿದ್ದು, ತಲಾ 55 ಪಂದ್ಯಗಳ ಟೂರ್ನಿ ಇದಾಗಿರಲಿದೆ.

8 ವರ್ಷ ಬಳಿಕ ಚಾಂಪಿಯನ್ಸ್‌ ಟ್ರೋಫಿ
ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯನ್ನು 8 ವರ್ಷಗಳ ಬಳಿಕ ಮರಳಿ ಆರಂಭಿಸಲು ನಿರ್ಧರಿಸಲಾಗಿದೆ. ಅದರಂತೆ 2025 ಮತ್ತು 2029ರಲ್ಲಿ ಮತ್ತೆ ಈ ಟೂರ್ನಿ ನಡೆಯಲಿದ್ದು, ಅಗ್ರ 8 ರ್‍ಯಾಂಕಿಂಗ್‌ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. 2017ರಲ್ಲಿ ಕೊನೆಯ ಬಾರಿ ಈ ಕೂಟ ನಡೆದಿತ್ತು. ಇದು 15 ಪಂದ್ಯಗಳ ಟೂರ್ನಿಯಾಗಿದೆ.

ಉಳಿದಂತೆ ಮುಂದಿನ 8 ವರ್ಷಗಳ ಆವೃತ್ತದಲ್ಲಿ ಇನ್ನೂ 4 ಟೆಸ್ಟ್‌ ಚಾಂಪಿಯನ್‌ಶಿಪ್‌ ನಡೆಯಲಿವೆ ಎಂದು ಐಸಿಸಿ ತಿಳಿಸಿದೆ. ಈ ಟೂರ್ನಿಗಳ ಆತಿಥೇಯ ದೇಶಗಳನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಐಸಿಸಿ ತಿಳಿಸಿದೆ.

ಐಸಿಸಿ ಸಭೆಯ ಮುಖ್ಯಾಂಶಗಳು
1. 2024ರಿಂದ 2030ರ ನಡುವೆ ಎರಡು ವರ್ಷಕ್ಕೊಮ್ಮೆ ಟಿ20 ವಿಶ್ವಕಪ್‌ ಆಯೋಜನೆ. ತಂಡಗಳ ಸಂಖ್ಯೆ 20ಕ್ಕೆ ಏರಿಕೆ.
2. 2025 ಮತ್ತು 2029ರಲ್ಲಿ 8 ತಂಡಗಳ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕೂಟದ ಆಯೋಜನೆ.
3. 2027 ಮತ್ತು 2031ರ ಏಕದಿನ ವಿಶ್ವಕಪ್‌ನಲ್ಲಿ ತಂಡಗಳ ಸಂಖ್ಯೆ 10ರಿಂದ 14ಕ್ಕೆ ಏರಿಕೆ.
4. 2023ರಿಂದ 2031ರ ವರೆಗೆ 8 ವರ್ಷಗಳಲ್ಲಿ 4 ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಆಯೋಜನೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.