![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 26, 2021, 10:00 AM IST
ನವದೆಹಲಿ: ದೇಶದಲ್ಲಿ ಇದುವರೆಗೆ ಕೊರೊನಾದಿಂದ ಸಂಭವಿಸಿದ ಸಾವುಗಳ ಅರ್ಧದಷ್ಟು ಪ್ರಕರಣಗಳು ಏಪ್ರಿಲ್ -ಮೇನಲ್ಲಿಯೇ ದೃಢಪಟ್ಟಿವೆ. ಈ ಬಗ್ಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ವರದಿಯಲ್ಲೇ ಉಲ್ಲೇಖಿಸಲಾಗಿದೆ.
ಕರ್ನಾಟಕ, ಮಹಾರಾಷ್ಟ್ರ, ದೆಹಲಿ ರಾಜ್ಯಗಳಿಂದ ಈ ಅವಧಿಯಲ್ಲಿ ದೇಶದಲ್ಲಿ ದೃಢಪಟ್ಟ ಹತ್ತು ಸಾವುಗಳ ಪೈಕಿ 4 ಈ ರಾಜ್ಯಗಳಿಂದಲೇ ವರದಿಯಾಗಿದೆ. ಹೀಗಾಗಿ, ಆ ಎರಡು ತಿಂಗಳು ಎಷ್ಟು ಭಯಾನಕವಾಗಿದ್ದವು ಎಂಬುದನ್ನು ತೋರಿಸಿದೆ. ಮೂರು ರಾಜ್ಯಗಳು ಏಪ್ರಿಲ್-ಮೇನಲ್ಲಿ ಶೇ.41ರಷ್ಟು ಸಾವಿನ ಪ್ರಕರಣಗಳನ್ನು ದಾಖಲಿಸಿವೆ.
2020ರ ಏಪ್ರಿಲ್ ಮತ್ತು 2021ರ ಮೇ ಅವಧಿಯಲ್ಲಿ 3,29,065 ಸೋಂಕಿನಿಂದ ಸಾವು ಉಂಟಾಗಿದೆ. 1,66,632 ಸಾವಿನ ಪ್ರಕರಣಗಳು ಈ ಅವಧಿಯಲ್ಲಿಯೇ ದೃಢಪಟ್ಟಿವೆ ಎಂದು ಕೇಂದ್ರ ಹೇಳಿದೆ. ಇದೇ ವೇಳೆ, ಕೇರಳದಲ್ಲಿ ಭಾನುವಾರ ಒಂದೇ ದಿನ 17,466 ಹೊಸ ಪ್ರಕರಣಗಳು ದೃಢಪಟ್ಟಿವೆ. 66 ಮಂದಿ ಸೋಂಕಿನಿಂದ ಸಾವಿ ಗೀಡಾಗಿದ್ದಾರೆ. ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.12 ಆಗಿದೆ. ಜು.24 ರಂದು ಅದು ಶೇ.11.91ಕ್ಕೆ ಇಳಿಕೆಯಾಗಿತ್ತು.
ಇನ್ನೊಂದೆಡೆ, ಶನಿವಾರದಿಂದ ಭಾನುವಾರದ ಅವಧಿಯಲ್ಲಿ ದೇಶದಲ್ಲಿ 39,742 ಸೋಂಕು ಪ್ರಕರಣ ಮತ್ತು 535 ಮಂದಿ ಅಸುನೀಗಿದ್ದಾರೆ. ಸಕ್ರಿಯ ಸೋಂಕು ಪ್ರಕರಣ 4,08,212ಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ 97.36% ಆಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.