ಈ ಶಾಲೆಯಲ್ಲಿ ಗರಿಷ್ಠ ಶುಲ್ಕ ವರ್ಷಕ್ಕೆ 1750 ರೂ.!


Team Udayavani, Jun 14, 2020, 11:00 AM IST

ಈ ಶಾಲೆಯಲ್ಲಿ ಗರಿಷ್ಠ ಶುಲ್ಕ ವರ್ಷಕ್ಕೆ 1750 ರೂ.!

ಚಾಮರಾಜನಗರ: ಕೋವಿಡ್ ನಿಂದಾಗಿ ಶಾಲೆಗಳು ತೆರೆದಿಲ್ಲ. ಆದರೆ ಆಗಲೇ ಕೆಲವು ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡುತ್ತಿವೆ ಎಂಬ ದೂರು ಕೇಳಿ ಬರುತ್ತಿದೆ. ಆದರೆ, ನಗರದ ಈ ಖಾಸಗಿ ಶಾಲೆ ಮಾತ್ರ, ತರಗತಿ ಆರಂಭವಾದಾಗಲಷ್ಟೇ ಶುಲ್ಕ ಪಡೆಯುವುದು ಎಂದು ನಿರ್ಧರಿಸಿದೆ. ಅಷ್ಟೇ ಅಲ್ಲ, ಇಲ್ಲಿ ಕನಿಷ್ಠ ಶುಲ್ಕ ವರ್ಷಕ್ಕೆ 500 ರೂ., ಗರಿಷ್ಠ ಶುಲ್ಕ ವರ್ಷಕ್ಕೆ 1750 ರೂ! ಮಾತ್ರವಲ್ಲ. ಮಧ್ಯಾಹ್ನದ ಊಟ ಉಚಿತ! ಈ ಶುಲ್ಕವನ್ನೂ ಕಂತುಗಳಲ್ಲಿ ಪಾವತಿ ಮಾಡಲು ಅವಕಾಶವಿದೆ!.

ಇವೆಲ್ಲಾ ಚಾಮರಾಜನಗರ ಪಟ್ಟಣದ ದೀನಬಂಧು ಶಾಲೆಯ ವಿಶೇಷ. ರಾಷ್ಟ್ರಕವಿ ಜಿ.ಎಸ್‌. ಶಿವರುದ್ರಪ್ಪನವರ ಪುತ್ರ ಪ್ರೊ.
ಜಿ.ಎಸ್‌.ಜಯದೇವ ಈ ಶಾಲೆಯ ಸಂಸ್ಥಾಪಕರು. ಈ ಶಾಲೆ ಆರಂಭವಾಗಿ 21 ವರ್ಷಗಳಾಗಿವೆ. ಯುಕೆಜಿಯಿಂದ 10ನೇ ತರಗತಿವರೆಗೆ ಶಾಲೆಯಲ್ಲಿ ಕಲಿಸಲಾಗುತ್ತದೆ. ಇನ್ನೊಂದು ವಿಶೇಷವೆಂದರೆ ಇದು ಕನ್ನಡ ಮಾಧ್ಯಮ ಶಾಲೆ.! ಖಾಸಗಿ
ಶಾಲೆಯೊಂದು ಇಂಗ್ಲಿಷ್‌ ಮಾಧ್ಯಮ ಶಾಲೆಗಳಷ್ಟೇ ಸಮರ್ಥವಾಗಿ ಕನ್ನಡ ಮಾಧ್ಯಮ ಶಾಲೆಯೊಂದನ್ನು ಎಷ್ಟು ಚೆನ್ನಾಗಿ ನಡೆಸ ಬಹುದು ಎಂಬುದಕ್ಕೆ ದೀನಬಂಧು ಶಾಲೆ ನಿದರ್ಶನ. ಉತ್ತಮ ಕಟ್ಟಡ, ಸುಸಜ್ಜಿತ ಪ್ರಯೋಗಾಲಯ, ಪ್ರತಿಭಾವಂತ ಶಿಕ್ಷಕರೂ ಇದ್ದಾರೆ.

ಕಳೆದ ಸಾಲಿನಲ್ಲಿ ಈ ಶಾಲೆಯಲ್ಲಿ 444 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಒಂದು ತರಗತಿಗೆ 35 ಮಕ್ಕಳಿಗಷ್ಟೇ ಅವಕಾಶ
ನೀಡಲಾಗಿದೆ.

ಕಡಿಮೆ ಶುಲ್ಕ ಪಾವತಿಸಲೂ 2-3 ಕಂತು
ದೀನಬಂಧು ಶಾಲೆ ಕೋವಿಡ್‌ ಸಂಕಷ್ಟ ಮುಗಿದು ತರಗತಿ ಆರಂಭವಾದಾಗಲೇ ಪೋಷಕರಿಂದ ಶುಲ್ಕ ಪಡೆಯುವುದು ಎಂದು ನಿರ್ಧರಿಸಿದೆ. ಎಲ್‌ ಕೆಜಿ-ಯುಕೆಜಿಗೆ ವಾರ್ಷಿಕ 500 ರೂ. ಶುಲ್ಕ. 1 ರಿಂದ 4ನೇ ತರಗತಿಗೆ 750 ರೂ. ವಾರ್ಷಿಕ ಶುಲ್ಕ.
5, 6, 7ನೇ ತರಗತಿಗಳಿಗೆ 1250 ರೂ., ಪ್ರೌಢಶಾಲೆಗೆ 1750 ರೂ. ವಾರ್ಷಿಕ ಶುಲ್ಕ. 2018-19ನೇ ಸಾಲಿನಿಂದಲೂ ಇದೇ ಶುಲ್ಕ ತೆಗೆದುಕೊಳ್ಳಲಾಗುತ್ತಿದೆ.ಆ ಹಿಂದಿನ ವರ್ಷಗಳಲ್ಲಿ ಇನ್ನೂ ಕಡಿಮೆ ಶುಲ್ಕ ಇತ್ತು!. ಈ ಶುಲ್ಕವನ್ನೂ ಪೋಷಕರು 2-3 ಕಂತುಗಳಲ್ಲಿ ಕೊಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಇನ್ನೊಂದು ವಿಶೇಷವೆಂದರೆ, ತಾಯಿ ಅಥವಾ ತಂದೆ ಮಾತ್ರ ಇರುವ ಮಕ್ಕಳಿಗೆ
ಶುಲ್ಕದಿಂದ ಸಂಪೂರ್ಣ ವಿನಾಯ್ತಿ ನೀಡಲಾಗಿದೆ.

ಅಲ್ಲದೇ ಎಲ್ಲಾ ಮಕ್ಕಳಿಗೂ ಮಧ್ಯಾಹ್ನದ ಊಟ ಉಚಿತ. ಶನಿವಾರ ಬೆಳಗ್ಗೆ ಉಪಾಹಾರದ ವ್ಯವಸ್ಥೆಯೂ ಇದೆ.

– ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.