ಬ್ರಿಮ್ಸ್ ನಲ್ಲಿ 10 ಕಪ್ಪು ಶಿಲೀಂದ್ರ ಸೋಂಕಿತರಿಗೆ ಔಷಧ ಕೊರತೆ : ಈಶ್ವರ ಖಂಡ್ರೆ ವಿಷಾದ
Team Udayavani, Jun 1, 2021, 10:27 PM IST
ಬೀದರ್ : ರಾಜ್ಯದವರೇ ಆದ ಡಿ.ವಿ. ಸದಾನಂದ ಗೌಡ, ಕೇಂದ್ರದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದರೂ ಕರ್ನಾಟಕಕ್ಕೆ ಸೂಕ್ತ ಪ್ರಮಾಣದಲ್ಲಿ ಕೋವಿಡ್-19 ಮತ್ತು ಶೀಲೀಂದ್ರ ಸೋಂಕಿನಿಂದ ನರಳುತ್ತಿರುವವರಿಗೆ ಅತ್ಯಾವಶ್ಯಕ ಚುಚ್ಚುಮದ್ದು, ಔಷಧ ದೊರಕದಿರುವುದು ನಿಜಕ್ಕೂ ದೌರ್ಭಾಗ್ಯವೇ ಸರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ.
ಸಮುದ್ರದ ನಂಟು ಉಪ್ಪಿಗೆ ಬರ ಎನ್ನುವ ಸ್ಥಿತಿ ಕರ್ನಾಟಕದ್ದಾಗಿದೆ, ರಾಜ್ಯದ ಸಂಸದರಾದ ಸದಾನಂದ ಗೌಡರೇ ರಾಸಾಯನಿಕ ಸಚಿವರಾಗಿದ್ದರೂ, ರಾಜ್ಯದಲ್ಲಿ ಅತಿ ಹೆಚ್ಚು ಜನರು ಕೋವಿಡ್ ಸೋಂಕಿನಿಂದ ಬಳಲಿ, ಹಾಸಿಗೆಯಲ್ಲೇ ನರಳಿ ಸಾಯುತ್ತಿದ್ದಾಗ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್, ರೆಮಿಡಿಸಿವೀರ್ ಸಿಗಲಿಲ್ಲ, ಇತರ ರಾಜ್ಯಗಳಿಗೆ ಯತೇಚ್ಛವಾಗಿ ಹಂಚಿಕೆ ಮಾಡಿದರೂ ರಾಜ್ಯಕ್ಕೆ ಮಾತ್ರ ಅತ್ಯಲ್ಪ ಪ್ರಮಾಣದಲ್ಲಿ ಹಂಚಿಕೆ ಮಾಡಲಾಯಿತು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಈಗ ಕಪ್ಪು ಶಿಲೀಂಧ್ರ ಸೋಂಕು ಅಥವಾ ಮ್ಯೂಕೋರ್ಮೈಕೋಸಿಸ್ ನಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರ ಪ್ರಕಟಿಸಿದ್ದರೂ, ಅವರ ಜೀವ ಉಳಿಸಲು ಅಗತ್ಯವಾದ ಆಂಪೋಟೆರಿಸಿನ್ ಬಿ ಲಭ್ಯವಾಗುತ್ತಿಲ್ಲ.
ಇದನ್ನೂ ಓದಿ :ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಎಎಸ್ ಐ ಮೇಲೆ ಯುವಕನಿಂದ ಹಲ್ಲೆ : ಪ್ರಕರಣ ದಾಖಲು
ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ 10 ಮಂದಿ ಮ್ಯೂಕೋರ್ಮೈಕೋಸಿಸ್ ಸೋಂಕಿನಿಂದ ಬಳಲುತ್ತಿದ್ದು, ಇವರ ಚಿಕಿತ್ಸೆಗೆ ಪ್ರತಿನಿತ್ಯ 70 ವಯಲ್ ಆಂಪೋಟರಿಸಿನ್ ಬಿ ಚುಚ್ಚುಮದ್ದಿನ ಅಗತ್ಯವಿದೆ. ಆದರೆ ಇಲ್ಲಿ ಇಂದು ಲಭ್ಯವಿದ್ದಿದ್ದು ಕೇವಲ 16 ವಯಲ್ ಹೀಗಾಗಿ 3 ಜನರಿಗೆ ಮಾತ್ರವೇ ಇದು ಸಾಕಾಯಿತು. ಉಳಿದವರ ಪಾಡೇನು.
ಈಗಾಗಲೇ ಹಲವು ವೈದ್ಯರು ಚುಚ್ಚುಮದ್ದಿನ ಕೊರತೆಯಿಂದ ಕಪ್ಪು ಶಿಲೀಂಧ್ರ ಸೋಂಕಿತರ ಕಣ್ಣು ತೆಗೆಯಬೇಕಾಗಿ ಬರುತ್ತಿದೆ. ಹಲವರು ಪ್ರಾಣ ಬಿಡುತ್ತಿದ್ದಾರೆ. ನಾವೂ ಏನೂ ಮಾಡುವ ಸ್ಥಿತಿಯಲ್ಲಿ ಇಲ್ಲದೆ ಕೈಚೆಲ್ಲಿ ಕುಳಿತಿದ್ದೇವೆ ಎಂದು ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರಕ್ಕೆ ಇದು ಕಾಣುತ್ತಿಲ್ಲವೇ.
ಕೂಡಲೇ ರಾಜ್ಯ ಆರೋಗ್ಯ ಸಚಿವರು ಕೇಂದ್ರ ಸಚಿವರೊಂದಿಗೆ ಮಾತನಾಡಿ, ತಕ್ಷಣವೇ ರಾಜ್ಯದಲ್ಲಿರುವ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದಷ್ಟು ಚುಚ್ಚುಮದ್ದು ತರಿಸಿಕೊಳ್ಳಬೇಕು. ಕೂಡಲೇ ಬೀದರ ಬ್ರಿಮ್ಸ್ ಗೆ ಅಗತ್ಯ ಪ್ರಮಾಣದ ವಯಲ್ ಚುಚ್ಚುಮದ್ದು ಪೂರೈಸಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.