Mescom: ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು

ವಸೂಲಿಗೆ ವಿದ್ಯುತ್‌ ಸರಬರಾಜು ಕಂಪೆನಿ ಕ್ರಮ ಮೆಸ್ಕಾಂಗೇ ಬರಬೇಕಿದೆ 458 ಕೋ.ರೂ.

Team Udayavani, Sep 13, 2024, 7:20 AM IST

Mescom

ಬೆಳ್ತಂಗಡಿ: ಸರಕಾರ ರಾಜ್ಯದ ಜನತೆಗೆ ಉಚಿತ ವಿದ್ಯುತ್‌ ಕೊಡುಗೆ ನೀಡಿರುವ ಮಧ್ಯೆ ಇತ್ತ ಸರಕಾರಿ ಸಾಮ್ಯದ ಸ್ಥಳೀಯಾಡಳಿತಗಳು ಲಕ್ಷಗಟ್ಟಲೆ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿದ್ದು, ಮೆಸ್ಕಾಂ ಒಂದರಲ್ಲೇ 458 ಕೋಟಿ ರೂ. ಹೊರ ಬಾಕಿ ಇದೆ. 280 ಕೋ.ರೂ.ಗೂ ಅಧಿಕ ನಷ್ಟದಲ್ಲಿರುವ ಮೆಸ್ಕಾಂ ಕಂಪೆನಿ ಈಗ ಸರಕಾರದ ಸೂಚನೆಯಂತೆ ಸ್ಥಳೀಯಾಡಳಿತ ಸಂಸ್ಥೆಗಳ ಬಾಕಿ ವಸೂಲಾತಿಗೆ ಮುಂದಾಗಿದೆ.

ಗ್ರಾ.ಪಂ. ಮತ್ತು ಸ್ಥಳೀಯ ಸಂಸ್ಥೆಗಳು ಲಕ್ಷಗಟ್ಟಲೆ ರೂ. ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡಿದೆ. ಇದರಿಂದಾಗಿ ವಿದ್ಯುತ್‌ ಸರಬರಾಜು ಕಂಪೆನಿಗಳು ಆರ್ಥಿಕ ನಷ್ಟ ಎದುರಿಸುತ್ತಿವೆ. ಈ ನೆಲೆಯಲ್ಲಿ ಪ್ರತಿ ತಿಂಗಳು ಶೇ. 100 ವಸೂಲಾತಿಗೆ ಉಪವಿಭಾಗ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಮೆಸ್ಕಾಂ ಅಧಿಕಾರಿಗಳ ವಿಭಾಗವಾರು ತಂಡವನ್ನು ರಚಿಸಿ ಕ್ರಮ ಕೈಗೊಳ್ಳುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.

ಎಲ್ಲ 6 ವಿದ್ಯುತ್‌ ಕಂಪೆನಿಯಿಂದಲೂ ಕ್ರಮ
ರಾಜ್ಯದ ಪ್ರಮುಖ 6 ವಿದ್ಯುತ್‌ ವಿತರಣ ಕಂಪೆನಿಗಳಾದ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ, (ಬೆಸ್ಕಾಂ) ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪೆನಿ (ಹೆಸ್ಕಾಂ), ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಮೈಸೂರು ಹಾಗೂ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘವೂ ಬಾಕಿ ವಸೂಲಾತಿಗೆ ಮುಂದಾಗಿದೆ.

ಇದರಲ್ಲಿ ಪ್ರಮುಖವಾಗಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ ಸಾರ್ವಜನಿಕ ಆಸ್ಪತ್ರೆ, ಸರಕಾರಿ ವಿದ್ಯಾರ್ಥಿ ನಿಲಯ, ಕುಡಿಯುವ ನೀರು ಸರಬರಾಜು, ಪೊಲೀಸ್‌ ಇಲಾಖೆ, ನ್ಯಾಯಾಲಯ, ತಾಲೂಕು ಕಚೇರಿ ಹೊರತುಪಡಿಸಿ ಉಳಿದೆಲ್ಲ ಸಂಸ್ಥೆಗಳಿಗೆ ತತ್‌ಕ್ಷಣ ಮೊತ್ತ ಪಾವತಿಸಲು 7 ದಿನಗಳ ನೋಟಿಸ್‌ ನೀಡಿ, ಬಳಿಕವೂ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ.

ಮೆಸ್ಕಾಂನಲ್ಲೇ 458.97 ಕೋ.ರೂ. ಬಾಕಿ
ಮೆಸ್ಕಾಂ ವ್ಯಾಪ್ತಿಯ ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿ ಸರಕಾರಿ ಇಲಾಖೆ ಮತ್ತು ನೀರು ಸರಬರಾಜು ಹಾಗೂ ಬೀದಿದೀಪ ಸೇರಿ ಜಿಲ್ಲಾವಾರು ಒಟ್ಟು 58,657 ಸ್ಥಾವರಗಳ ಒಟ್ಟು 458.097 ಕೋ.ರೂ.ಗಳನ್ನು ಮೆಸ್ಕಾಂಗೆ ಭರಿಸಲು ಬಾಕಿಯಿದೆ. ಅದೇ ರೀತಿ 5 ಸಾ. ರೂ. ಗಿಂತ ಹೆಚ್ಚು ಬಾಕಿ ಇರಿಸಿಕೊಂಡಿರುವ ನಾಲ್ಕು ಜಿಲ್ಲೆಗಳ ವಾಣಿಜ್ಯ ಕೈಗಾರಿಕೋದ್ಯಮ ಸಹಿತ ಇತರ ಒಟ್ಟು 8,107 ಸ್ಥಾವರಗಳ 8.82 ಕೋ.ರೂ. ಬಾಕಿ ಬಿಲ್‌ ವಸೂಲಾತಿಗೆ ಈಗಾಗಲೇ ಅಭಿಯಾನ ಆರಂಭಿಸಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 6 ಕೋ.ರೂ. ಬಾಕಿ
ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಉಜಿರೆ ಉಪವಿಭಾಗಕ್ಕೆ ಸಂಬಂಧಿಸಿ ಉದಾಹರಣೆಗೆ 48 ಗ್ರಾ.ಪಂ.ಗಳ ಕುಡಿಯುವ ನೀರು, ಹಾಗೂ ದಾರಿ ದೀಪ ಸ್ಥಾವರಗಳ ಬಾಕಿ ಮೊತ್ತ ಒಟ್ಟು 6,82,24,726.6 ಕೋ.ರೂ. ಉಳಿಸಿಕೊಂಡಿದೆ. ಕೆಲವು ಗ್ರಾ.ಪಂ.ಗಳು 30 ಲಕ್ಷ ರೂ.ಗೂ ಅಧಿಕ ಮೊತ್ತ ಬಾಕಿ ಉಳಿಸಿವೆ. ಹೀಗಿರುವಾಗ ನಾಲ್ಕು ಜಿಲ್ಲೆಗಳಿಗೆ ಒಳಪಟ್ಟಂತೆ ಬಾಕಿ ಹೊರೆ ಮೆಸ್ಕಾಂಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.

“ಸೆ. 1ರಿಂದಲೇ ವಿಶೇಷ ಕಂದಾಯ ವಸೂಲಾತಿ ತಂಡ ರಚಿಸಿ ಅಭಿಯಾನ ಆರಂಭಿಸಿದೆ. ಮೆಸ್ಕಾಂ ಪ್ರತಿದಿನ ವಿದ್ಯುತ್‌ ಖರೀದಿಗಾಗಿ 40 ಕೋ.ರೂ. ಪಾವತಿಸುತ್ತಿದೆ. ಗಂಗಾಕಲ್ಯಾಣ ಯೋಜನೆಯಡಿ ಒಂದು ಘಟಕಕ್ಕೆ ಸರಕಾರ 75 ಸಾವಿರ ರೂ. ನೀಡಿದರೆ ನೈಜ ವೆಚ್ಚ 30 ಲಕ್ಷ ರೂ. ತಗಲುತ್ತದೆ. ಇವೆಲ್ಲವನ್ನು ಸರಿದೂಗಿಸಲು ಈ ಕ್ರಮ ಅನಿವಾರ್ಯವಾಗಿದೆ.” – ಪದ್ಮಾವತಿ, ವ್ಯವಸ್ಥಾಪಕ ನಿರ್ದೇಶಕಿ, ಮೆಸ್ಕಾಂ

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.