Metro Train: ದೇಶದ ಮೊದಲ “ವಂದೇ ಭಾರತ್ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ
ಗುಜರಾತ್ನ ಅಹ್ಮದಾಬಾದ್-ಭುಜ್ಗೆ ಸಂಚಾರ, ರೈಲಿನ ವಿಶೇಷತೆಗಳೇನು ಗೊತ್ತಾ?
Team Udayavani, Sep 15, 2024, 7:43 PM IST
ಅಹ್ಮದಾಬಾದ್: ಎರಡು ನಗರಗಳ ನಡುವೆ ಸಂಪರ್ಕ ಸಾಧಿಸುವ ದೇಶದ “ಮೊದಲ ವಂದೇ ಭಾರತ್ ಮೆಟ್ರೋ’ ರೈಲಿನ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಅದು ಗುಜರಾತ್ನ ಭುಜ್ನಿಂದ ಅಹ್ಮದಾಬಾದ್ಗೆ ಸಂಚರಿಸಲಿದೆ.
ಟಿಕೆಟ್ಗಳನ್ನು ಕಾಯ್ದಿರಿಸದೆ ಜನರಿಗೆ ಈ ರೈಲಿನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ. ಅದು ವಾರದ 6 ದಿನಗಳಲ್ಲಿ “ವಂದೇ ಭಾರತ್ ಮೆಟ್ರೋ’ ಸಂಚರಿಸಲಿದೆ ಎಂದು ಪಶ್ಚಿಮ ರೈಲ್ವೇಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.
5 ಗಂಟೆ 45 ನಿಮಿಷಗಳ ಅವಧಿಯಲ್ಲಿ 360 ಕಿ.ಮೀ.ದೂರವನ್ನು ಅದು ಕ್ರಮಿಸಲಿದೆ ಎಂದು ಹೇಳಿದ್ದಾರೆ. ಈ ರೈಲು ತನ್ನ ಮಾರ್ಗದಲ್ಲಿ 9 ನಿಲುಗಡೆಗಳನ್ನು ಹೊಂದಿದೆ. ಸದ್ಯ 12 ಬೋಗಿಗಳ ಮೆಟ್ರೋ ರೈಲಿಗೆ ಚಾಲನೆ ನೀಡಲು ಚಿಂತಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ 16 ಬೋಗಿಗಳ ರೈಲಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮಾದರಿಯಲ್ಲಿಯೇ “ವಂದೇ ಭಾರತ್ ಮೆಟ್ರೋ’ವನ್ನು ನಿರ್ಮಿಸಲಾಗಿದೆ ಎಂದು ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಅದರಲ್ಲಿ ಸ್ವಯಂ ಚಾಲಿತ ಬಾಗಿಲುಗಳು ಇರಲಿವೆ. ಜತೆಗೆ ಕೋಚ್ನಲ್ಲಿ 4 ಸ್ವಯಂ ಚಾಲಿತ ಬಾಗಿಲುಗಳನ್ನು ಇರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೊಬೈಲ್ ಚಾರ್ಜ್ ಮಾಡುವ ವ್ಯವಸ್ಥೆಯನ್ನೂ ಭಾರತೀಯ ರೈಲ್ವೇ ಕಲ್ಪಿಸಿಕೊಡಲಿದೆ.
ಮೆಟ್ರೋ ವಿಶೇಷತೆಗಳು
* ಎಲ್ಲ ಬೋಗಿಗಳು ಹವಾನಿಯಂತ್ರಕ ವ್ಯವಸ್ಥೆ ಹೊಂದಿರುತ್ತವೆ.
* ಸ್ವಯಂಚಾಲಿತ ಬಾಗಿಲುಗಳು, ಪ್ರತಿ ವಂದೇ ಭಾರತ್ ಬೋಗಿಯಲ್ಲಿ ನಾಲ್ಕು ಸ್ವಯಂಚಾಲಿತ ಬಾಗಿಲುಗಳು ಹೊಂದಿವೆ.
* ಪ್ರಯಾಣಿಕರ ಲಗೇಜ್ ಇಡಲು ವ್ಯವಸ್ಥೆ
* ಮೊಬೈಲ್ ಚಾರ್ಜಿಂಗ್ ಸೌಲಭ್ಯ
* “ಕವಚ್’ರೈಲು ಅಪಘಾತ ತಡೆ ಸೌಲಭ್ಯ
* ವಂದೇ ಭಾರತ್ ಮೆಟ್ರೋದ 16 ಬೋಗಿಗಳಲ್ಲಿ 1,150 ಪ್ರಯಾಣಿಕರು ಕುಳಿತುಕೊಂಡು ಪ್ರಯಾಣಿಸಬಹುದು, ಹೆಚ್ಚುವರಿಯಾಗಿ 2,058 ಪ್ರಯಾಣಿಕರು ನಿಂತು ಪ್ರಯಾಣಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.