ತೂಗುಗತ್ತಿಯಲ್ಲಿ ಮಧ್ಯಪ್ರಾಚ್ಯದ ವಲಸೆ ಕಾರ್ಮಿಕರು : ವೇತನವೂ ಅನುಮಾನ


Team Udayavani, Apr 18, 2020, 7:04 PM IST

ತೂಗುಗತ್ತಿಯಲ್ಲಿ ಮಧ್ಯಪ್ರಾಚ್ಯದ ವಲಸೆ ಕಾರ್ಮಿಕರು : ವೇತನವೂ ಅನುಮಾನ

ಮಣಿಪಾಲ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಕೋವಿಡ್‌ 19 ಸಂಬಂಧ ಲಾಕ್‌ಡೌನ್‌ ಜಾರಿಯಾಗಿದ್ದು ಬಹುತೇಕ ವ್ಯವಹಾರಗಳು ಸ್ತಬ್ಧವಾಗಿವೆ. ಈ ರಾಷ್ಟ್ರಗಳಿಗೆ ಉದ್ಯೋಗ ಕಾರಣಕ್ಕೆ ತೆರಳಿದ ಬಹುತೇಕರು ಬರೀ ಕೈಯಲ್ಲಿ ಕುಳಿತಿದ್ದಾರೆ. ಈ ಕುರಿತಂತೆ ಸಿರಿಯಾ ದೇಶದ ಪಕ್ಕದಲ್ಲಿರುವ ಲೆಬನಾನ್‌ ಕಾರ್ಮಿಕರ ರಕ್ಷಣೆ ಮುಂದಾಗಬೇಕು ಎಂದು ಎನ್‌ಜಿಒಗಳು ಮನವಿ ಮಾಡಿವೆ. ಮಧ್ಯಪ್ರಾಚ್ಯಾದ್ಯಂತ ವಲಸೆ ಕಾರ್ಮಿಕರು ಉದ್ಯೋಗ ಕಳೆದು ಕೊಳ್ಳುವ ಭೀತಿಯಲ್ಲಿದ್ದಾರೆ.

ಕೊಲ್ಲಿ ರಾಜ್ಯಗಳು ಮತ್ತು ಸೌದಿ ಅರೇಬಿಯಾದ ಕೆಲವು ಭಾಗಗಳಲ್ಲಿ ದಕ್ಷಿಣ ಏಷ್ಯಾ ಮತ್ತು ಆಗ್ನೇಯ ಏಷ್ಯಾದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಚ್ಚಿದ ವಿಮಾನ ನಿಲ್ದಾಣಗಳು ಕಾರ್ಮಿಕರನ್ನು ಕಟ್ಟಿಹಾಕಿವೆ. ಅತ್ತ ತಾಯ್ನಾಡಿಗೆ ತೆರಳಲು ಸಾಧ್ಯವಾಗುತ್ತಿಲ್ಲ, ಇತ್ತ ದುಡಿಯಲೂ ಸಾಧ್ಯವಾಗುತ್ತಿಲ್ಲ. ಲಾಕ್‌ಡೌನ್‌ ಪ್ರಾರಂಭವಾಗುವ ಮೊದಲೇ ಲೆಬನಾನ್‌ನ ಆರ್ಥಿಕ ಪರಿಸ್ಥಿತಿ ಕುಸಿದಿತ್ತು. ಬಹುತೇಕ ಆದಾಯದ ಮೂಲಗಳನ್ನು ಛಿದ್ರಗೊಳಿಸಿದ್ದವು.

ಇದರ ಜತೆಗೆ ಈಗ ಕೋವಿಡ್‌-19 ವೈರಸ್‌ ಹಾನಿಯೂ ಬಹುದೊಡ್ಡ ಸಮಸ್ಯೆಯಾಗಿದೆ. ಮನೆಯಲ್ಲಿ ಕೆಲಸ ಮಾಡುವ ಹೊರ ದೇಶದ ಕಾರ್ಮಿಕರಿಗೆ ಸಂಬಳ ಸಿಗಲಾರದೆಂಬ ಭಯ ಆರಂಭವಾಗಿದೆ.

ಕೆಲವು ಮನೆಗಳಲ್ಲಿ ಕಾರ್ಮಿಕರನ್ನು ತೀವ್ರವಾಗಿ ಹಿಂಸಿಸ ಲಾಗುತ್ತಿದ್ದು, ಅಪಾಯಕಾರಿ ಕೆಲಸಕ್ಕೆ ಒತ್ತಾಯಿಸಲಾಗುತ್ತಿದೆ. ಮನೆಗಳ ಒಳಗೆ ಸ್ವತ್ಛಗೊಳಿಸುವಿಕೆಗೆ ಬಳಸುತ್ತಿದ್ದಾರೆ. ಈಗ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೇ ಇರುವ ಕಾರಣ ವೇತನವೂ ಸಿಗುವುದು ಅನುಮಾನವಾಗಿದ್ದು, ಅವರ ಭವಿಷ್ಯ ಕತ್ತಲೆಯಲ್ಲಿದೆ.

ಲೆಬನಾನ್‌ನಲ್ಲಿ 2.50 ಲಕ್ಷ ವಲಸೆ ಕಾರ್ಮಿಕರಿದ್ದಾರೆ. ಇವರಲ್ಲಿ ಮುಖ್ಯವಾಗಿ ಗೃಹ ಕಾರ್ಮಿಕರು ಹೆಚ್ಚಿದ್ದಾರೆ. ತಮ್ಮ ಉದ್ಯೋಗದಾತರ ಮನೆಗಳಲ್ಲಿ ಕೆಲಸ ಮಾಡಿ ಸಾಮಾನ್ಯವಾಗಿ ಅಲ್ಲೇ ವಾಸಿಸುತ್ತಾರೆ.

ಕೋವಿಡ್‌ 19 ಪೀಡಿತ ರಾಷ್ಟ್ರವಾದ ಇರಾನ್‌ನ ಸಮೀಪದಲ್ಲೇ ಈ ರಾಷ್ಟ್ರ ಇದೆ. ಅದಕ್ಕೆ ಹೋಲಿಸಿದರೆ ಕೊಲ್ಲಿ ರಾಜ್ಯಗಳಲ್ಲಿನ ಅಧಿಕೃತ ಕೊರೊನಾ ವೈರಸ್‌ ಸಂಖ್ಯೆಗಳು ತುಲನಾತ್ಮಕವಾಗಿ ಕಡಿಮೆ ಇದೆ. ಮೇ ತಿಂಗಳ ಕೊನೆಯಲ್ಲಿ ರಂಜಾನ್‌ ಅಂತ್ಯದ ವೇಳೆಗೆ ಈ ಪ್ರದೇಶದ ವಿಮಾನ ನಿಲ್ದಾಣಗಳು ತೆರೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಒಂದಿಷ್ಟು ಮಂದಿ ತಮ್ಮ ದೇಶಗಳಿಗೆ ತೆರಳುವ ಸಾಧ್ಯತೆ ಇದೆ. ಕೋವಿಡ್‌ 19 ಬಿಕ್ಕಟ್ಟು ಕೊಲ್ಲಿಯಾದ್ಯಂತ ಉದ್ಯೋಗವನ್ನು ಕುಂಠಿತಗೊಳಿಸಿದೆ. ಇದರಿಂದ ನಿರ್ಮಾಣ ವಲಯ, ಚಿಲ್ಲರೆ ವ್ಯಾಪಾರ ಮತ್ತು ಇತರ ಕ್ಷೇತ್ರಗಳಿಗೆ ಸಮಸ್ಯೆ ಆಗಿದೆ. ದೇಶಗಳ ಆರ್ಥಿಕ ಸ್ಥಿತಿಯ ಮೇಲೂ ಹೊಡೆತ ಬೀಳುವ ಆತಂಕ ಎದುರಾಗಿದೆ.

ಟೀಕೆಗೆ ಗುರಿ
ಲೆಬನಾನ್‌ಗೆ ವಲಸೆ ಬಂದ ಗೃಹ ಕಾರ್ಮಿಕರನ್ನು ಶೋಷಿಸುವ ಅಥವಾ ನಿಂದಿಸುವ ಉದ್ಯೋಗದಾತರರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಸರಕಾರ ಸ್ಪಷ್ಟವಾಗಿ ಎಚ್ಚ ರಿಸದಿರುವುದು ಟೀಕೆಗೆ ಗುರಿಯಾಗಿದೆ. ಕೋವಿಡ್‌-19ನಂತಹ ಸಾಂಕ್ರಾಮಿಕ ರೋಗ ಹರಡುವ ಸಮಯದಲ್ಲಿ ಕಾರ್ಮಿಕರಿಗೂ ಆರೋಗ್ಯ ಸೇವೆಗೆ ಅವಕಾಶವಿದೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ ಘಟಕ ಮಾಧ್ಯಮಗಳಿಗೆ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.