Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

5 ವರ್ಷಗಳ ಬಳಿಕ ದ್ವಿಪಕ್ಷೀಯ ಮಾತುಕತೆ ನಡೆಸಿದ  ಮೋದಿ, ಕ್ಸಿ ಜಿನ್‌ಪಿಂಗ್‌ , ಚೀನ-ಭಾರತ ಗಡಿಯಲ್ಲಿ ಶಾಂತಿ, ಭದ್ರತೆಗೆ ಒತ್ತು ನೀಡಲು ಒಪ್ಪಿಗೆ

Team Udayavani, Oct 24, 2024, 8:05 AM IST

PM-Xi

ಕಜಾನ್‌: ಪೂರ್ವ ಲಡಾಖ್‌ ಬಿಕ್ಕಟ್ಟು, ಭಾರತದ ಗಡಿಯಲ್ಲಿ ಚೀನದ ವಸಾಹತು ನಿರ್ಮಾಣದಂಥ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಪರಸ್ಪರ ಮಾತುಕತೆ ನಡೆಸಿದ್ದಾರೆ. ಭಾರತ ಮತ್ತು ಚೀನ ಗಡಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಎರಡೂ ದೇಶಗಳ ಗುರಿ ಎಂದು ಉಭಯ ನಾಯಕರು ಹೇಳಿದ್ದಾರೆ. ಜಗತ್ತಿನಲ್ಲಿ ಶಾಂತಿಯುತ ಪರಿಸ್ಥಿತಿ ನೆಲೆಸಲು ನಮ್ಮ ನಡುವೆ ಉತ್ತಮ ಬಾಂಧವ್ಯ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗಿಯಾಗಲು ರಷ್ಯಾದ ಕಜಾನ್‌ಗೆ ತೆರಳಿರುವ ಪ್ರಧಾನಿ ಮೋದಿ ಅವರು ಚೀನದ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ಚೀನ ಗಡಿಯಲ್ಲಿ ಗಸ್ತು ತಿರುಗಲು ಒಪ್ಪಂದ ಮಾಡಿಕೊಂಡ ಎರಡು ದಿನಗಳ ಬಳಿಕ ಹಲವು ವಿಷಯಗಳ ಬಗ್ಗೆ ಉಭಯ ನಾಯಕರು ಮಾತನಾಡಿದ್ದಾರೆ. ಈ ಹಿಂದೆ 2019ರಲ್ಲಿ ಮಾತುಕತೆ ನಡೆಸಿದ್ದ ಉಭಯ ದೇಶಗಳ ನಾಯಕರು ಬಳಿಕ ಹಲವು ಸಭೆಗಳಲ್ಲಿ ಮುಖಾಮುಖೀಯಾದರೂ ದ್ವಿಪಕ್ಷೀಯ ಮಾತುಕತೆ ನಡೆಸಿರಲಿಲ್ಲ.

ಮೋದಿ ಹೇಳಿದ್ದೇನು?
ಪರಸ್ಪರ ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ನಮ್ಮ ಸಂಬಂಧ ಇರಲಿದೆ. ಗಡಿಯಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವುದು ನಮ್ಮ ಮೊದಲ ಆದ್ಯತೆ. ಭಾರತ ಮತ್ತು ಚೀನ ಶಾಂತಿಯಿಂದ ಇರುವುದು ಈ ಎರಡು ದೇಶಗಳ ಜನರಿಗಷ್ಟೇ ಅಲ್ಲ; ಜಾಗತಿಕವಾಗಿಯೂ ಮಹತ್ತರವಾದುದಾಗಿದೆ. ಉಭಯ ದೇಶಗಳ ನಡುವೆ ಕಳೆದ ನಾಲ್ಕು ವರ್ಷಗಳಲ್ಲಿ ಮೂಡಿರುವ ಸಮಸ್ಯೆಗಳ ಪರಿಹಾರದ ಬಗ್ಗೆ ಈಗ ಒಮ್ಮತ ಮೂಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಜಿನ್‌ಪಿಂಗ್‌ ಹೇಳಿದ್ದೇನು?
ನಮ್ಮ ಭೇಟಿಯ ಮೇಲೆ ಉಭಯ ದೇಶಗಳ ಜನರು ಹಾಗೂ ಜಾಗತಿಕ ಸಮುದಾಯ ಕಣ್ಣಿಟ್ಟಿದೆ. ಉಭಯ ದೇಶಗಳು ಕೂಡ ಪ್ರಾಚೀನ ನಾಗರಿಕತೆಗಳನ್ನು ಹೊಂದಿವೆ. ಜಾಗತಿಕ ದಕ್ಷಿಣದಲ್ಲಿ ಈ ಎರಡು ದೇಶಗಳು ಪ್ರಮುಖವಾಗಿವೆ. ಹೀಗಾಗಿ ಉಭಯ ದೇಶಗಳು ಸಹಕಾರದಿಂದ ಇರುವುದು ಅಗತ್ಯ. ನಮ್ಮ ನಡುವೆ ಇರುವ ಭಿನ್ನತೆಗಳನ್ನು ಹೋಗಲಾಡಿಸಿಕೊಂಡು ಶಾಂತಿ ಕಾಪಾಡಬೇಕಿದೆ ಎಂದು ಜಿನ್‌ಪಿಂಗ್‌ ಹೇಳಿದರು.

ಗಡಿಗೆ ಸಂಬಂಧಿಸಿ ಹೊಸ ಮಾತುಕತೆ
2020ರ ಬಳಿಕ ಚೀನ ಹಾಗೂ ಭಾರತದ ನಡುವಣ ರಾಜ ತಾಂತ್ರಿಕ ಸಂಬಂಧ ಬಿಗಡಾಯಿಸಿತ್ತು. ಗಾಲ್ವನ್‌ನಲ್ಲಿ ನಡೆದ ದಾಳಿಯಲ್ಲಿ 20ಕ್ಕೂ ಹೆಚ್ಚು ಭಾರತೀಯ ಸೈನಿಕರು ಮೃತಪಟ್ಟಿದ್ದು ಇದಕ್ಕೆ ಕಾರಣವಾಗಿತ್ತು. ಮೋದಿಯವರ ರಷ್ಯಾ ಭೇಟಿಗೆ ಮುನ್ನ ಉಭಯ ದೇಶಗಳು ಗಡಿಯಲ್ಲಿ ಗಸ್ತು ತಿರುಗುವ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದವು. ಈಗ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಗಡಿಗೆ ಸಂಬಂಧಿಸಿ ಮತ್ತಷ್ಟು ಮಹತ್ವದ ಮಾತುಕತೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

“ಯುದ್ಧ ಹಾಗೂ ಸಂಘರ್ಷಮಯ ವಾತಾವರಣಕ್ಕೆ ಭಾರತ ಎಂದೂ ಬೆಂಬಲ ನೀಡುವುದಿಲ್ಲ. ಅಂಥ ಪರಿಸ್ಥಿತಿ ಎದುರಾದರೆ ಅದನ್ನು ರಾಜತಾಂತ್ರಿಕ ಮಾತುಕತೆಗಳ ಮೂಲಕವೇ ಪರಿಹರಿಸಿಕೊಳ್ಳಲು ಆದ್ಯತೆ ನೀಡಬೇಕು.” – ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

Threats To Airlines: ಬಾಂಬ್‌ ಬೆದರಿಕೆ… ಟ್ವಿಟರ್‌ಗೆ ಕೇಂದ್ರ ಸರಕಾರ ತರಾಟೆ !

Maharashtra: ಗಣಿತ, ವಿಜ್ಞಾನದಲ್ಲಿ ಫೇಲಾದರೂ 10ನೇ ಕ್ಲಾಸ್‌ ಪಾಸ್‌!

Maharashtra: ಗಣಿತ, ವಿಜ್ಞಾನದಲ್ಲಿ ಫೇಲಾದರೂ 10ನೇ ಕ್ಲಾಸ್‌ ಪಾಸ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.