Kudremukha ವಲಯದಲ್ಲಿ ಇನ್ನಷ್ಟು ಸೂಕ್ಷ್ಮ ಪ್ರದೇಶಗಳು ಚಾರಣಕ್ಕೆ ಮುಕ್ತ?

ಸ್ಥಳೀಯರ ಆಗ್ರಹ ನೆಪ ; ಆರ್ಥಿಕ ಲಾಭದ ಉದ್ದೇಶ ಎಂಬುದು ಪರಿಸರಪ್ರೇಮಿಗಳ ಆರೋಪ

Team Udayavani, Jun 24, 2024, 7:10 AM IST

Kudremukha ವಲಯದಲ್ಲಿ ಇನ್ನಷ್ಟು ಸೂಕ್ಷ್ಮ ಪ್ರದೇಶಗಳು ಚಾರಣಕ್ಕೆ ಮುಕ್ತ?

ಮಂಗಳೂರು: ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ತಾಣಗಳನ್ನು ಚಾರಣಕ್ಕೆ ತೆರೆದಿರಿಸಿದ ದುಷ್ಪರಿಣಾಮವನ್ನು ಅರಿತಿರುವ ಹೊರತಾಗಿಯೂ ಅರಣ್ಯ ಇಲಾಖೆ ಕುದುರೆಮುಖ ವಲಯದ ಅನೇಕ ಸ್ಥಳಗಳನ್ನು ಚಾರಣಕ್ಕೆ ಮುಕ್ತಗೊಳಿಸಲು ಹೊರಟಂತಿದೆ.

ಕೆಲವು ಸ್ಥಳೀಯ ಜನಪ್ರತಿನಿಧಿಗಳು ತಮ್ಮ ವೈಯುಕ್ತಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಚಾರಣಗಳನ್ನು ಆರಂಭಿಸಲು ಒತ್ತಾಸೆ ಹೂಡಿರುವುದು ತಿಳಿದುಬಂದಿದೆ.

ಪ್ರಸ್ತುತ ಇದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ಪರಿಸರ ಸೂಕ್ಷ್ಮ ತಾಣಗಳಿಗೆ ಅನುಮತಿ ನೀಡಬಾರದು ಎನ್ನುವ ಮನವಿಯನ್ನು ರಾಜ್ಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ.

ಕಳೆದ ಜನವರಿಯಲ್ಲಿ ಕುಮಾರ ಪರ್ವತಕ್ಕೆ ಒಂದೇ ದಿನ 4,000ಕ್ಕೂ ಅಧಿಕ ಮಂದಿ ಚಾರಣಿಗರು ಹೋಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಅದನ್ನು ಮಾಧ್ಯಮಗಳಲ್ಲಿ ನೋಡಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತಾತ್ಕಾಲಿಕವಾಗಿ ಚಾರಣವನ್ನೇ ಸ್ಥಗಿತಗೊಳಿಸಿದ್ದರು.

ಎಳನೀರು, ಬಂಗಾರ ಪಲ್ಕೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಎಳನೀರು ಜಲಪಾತ, ಬಂಗಾರಪಲ್ಕೆ ಹಾಗೂ ಸೂಜಿಕಲ್ಲು ಗುಡ್ಡಗಳನ್ನು ಸಾರ್ವಜನಿಕ ಪ್ರವೇಶಕ್ಕಾಗಿ ತೆರೆಯಲು ಯೋಜಿಸಲಾಗುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಸ್ಥಳಗಳು ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ ಹಾಟ್‌ಸ್ಪಾಟ್‌ಗೆ ಸೇರಿವೆ. ಅಲ್ಲದೆ ಆನೆ ಕಾರಿಡಾರ್‌ನ ಭಾಗವೂ ಆಗಿವೆ. ಒಮ್ಮೆ ಚಾರಣಿಗರನ್ನು ಒಳಗೆ ಬಿಟ್ಟಲ್ಲಿ ಕುಮಾರ ಪರ್ವತ, ಕುದುರೆಮುಖ, ನೇತ್ರಾವತಿ ಶಿಖರದಂತೆ ಇವೂ ಅನಗತ್ಯವಾಗಿ ಮಾನವನ ಒತ್ತಡಕ್ಕೆ ಒಳಗಾಗಲಿವೆ. ಮಾಲಿನ್ಯ ಒಂದೆಡೆಯಾದರೆ, ದೊಡ್ಡ ಸಂಖ್ಯೆಯಲ್ಲಿನ ಚಾರಣಿಗರಿಂದ ಪರಿಸರದ ಸಮತೋಲನವೂ ಹದಗೆಡಲಿದೆ ಎಂದು ಸ್ಥಳೀಯ ಪರಿಸರ ಸಂಘಟನೆಯಾದ “ಪರಿಸರ ತಪಸ್ಸು’ ಇದರ ಸಂಚಾಲಕ ಪವನ್‌ ಕಾಕತ್ಕರ್‌ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಬೇಡಿಕೆಯ ನೆಪ?
ಇಲ್ಲಿ ಚಾರಣ ಆರಂಭಿಸಲು ಸ್ಥಳೀಯರ ಒತ್ತಾಯ ಇದೆ ಎನ್ನುವ ನೆಪವನ್ನು ಮುಂದಿಡಲಾಗುತ್ತಿದ್ದು, ಉಳ್ಳವರಿಂದ ಹೋಮ್‌ಸ್ಟೇ ಉದ್ಯಮಕ್ಕೆ ಪೂರಕವಾಗಿ ಆರ್ಥಿಕ ಲಾಭಕ್ಕಾಗಿ ಮಾಡುತ್ತಿರುವ ಸಾಧ್ಯತೆಗಳಿವೆ ಎನ್ನುತ್ತಾರೆ ಪರಿಸರ ಪ್ರಿಯರು.

ಬಂಗಾರಪಲ್ಕೆ ಪ್ರದೇಶವು ಬಹಳ ಆಳವಾದ ಜಾಗವಾಗಿದ್ದು, ಇದಕ್ಕೆ ಸರಿಯಾದ ದಾರಿಗಳಿಲ್ಲ. ಇಲ್ಲಿ ಈ ಹಿಂದೆ ಮಣ್ಣು ಕುಸಿದು ಯುವಕನೊಬ್ಬ ಸಾವನ್ನಪ್ಪಿದ್ದ. ಇದು ಅಪಾಯಕಾರಿ ಎನ್ನುವ ಹಣೆಪಟ್ಟಿಯನ್ನೂ ಪಡೆದುಕೊಂಡಿದ್ದು, ಚಾರಣಕ್ಕೆ ಸೂಕ್ತವಲ್ಲ ಎನ್ನುವುದು ಅವರ ಅಭಿಪ್ರಾಯ.

ಹೊಸ ಸ್ಥಳಗಳ ಸೇರ್ಪಡೆ ಪರಿಶೀಲನೆಯಲ್ಲಿ
ಕುದುರೆಮುಖ ಅರಣ್ಯ ವ್ಯಾಪ್ತಿಯ 2-3 ಹೊಸ ಸ್ಥಳಗಳನ್ನು ಚಾರಣಕ್ಕೆ ಸೇರಿಸಲು ಸ್ಥಳೀಯರಿಂದ ಒತ್ತಾಯವಿದೆ. ಅದೇ ರೀತಿ ಹಲವರ ವಿರೋಧವೂ ಇದೆ. ಆದರೆ ಜವಾಬ್ದಾರಿಯುತರಿಗೆ ನಿಯಂತ್ರಿತ ವಾಗಿ ಚಾರಣಕ್ಕೆ ಅವಕಾಶ ಮಾಡಿಕೊಡಬೇಕು ಎನ್ನುವುದು ಇಲಾಖೆಯ ಅಭಿಪ್ರಾಯ. ಕುದುರೆಮುಖ ವಲಯದ ಧಾರಣಾ ಶಕ್ತಿಯ ಅನ್ವಯ ದಿನಕ್ಕೆ 300 ಮಂದಿಗೆ ಮಾತ್ರ ಗರಿಷ್ಠ ಅನುಮತಿ ನೀಡಲಾಗುತ್ತಿದೆ. ಇದೇಮಿತಿಯಲ್ಲಿ ಹೊಸ ಸ್ಥಳಗಳಿಗೂ ಅನುಮತಿ ಕೊಡುವ ಬಗ್ಗೆ ಸದ್ಯ ಚರ್ಚೆ ನಡೆಯು ತ್ತಿದ್ದು, ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕುದುರೆ ಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್‌ ಬಾಬು ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

1-mng-protest

Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.