MUDA Case: ಮಧ್ಯರಾತ್ರಿವರೆಗೆ ಕಡತ ವಿಲೇವಾರಿ ಮಾಡಿದ ಸಿಎಂ ಸಿದ್ದರಾಮಯ್ಯ?
ವರ್ಗಾವಣೆ ಸೇರಿದಂತೆ ಪ್ರಮುಖ ಕಡತಗಳಿಗೆ ಸಹಿ
Team Udayavani, Oct 3, 2024, 7:45 AM IST
ಬೆಂಗಳೂರು: ಮುಡಾ ಹಗರಣ ಹೊರಬಂದ ಬಳಿಕ ತಮ್ಮ ಮುಂದಿರುವ ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳವಾರ ತಡರಾತ್ರಿವರೆಗೆ ಕುಳಿತು ವರ್ಗಾವಣೆ ಸೇರಿದಂತೆ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.
ಬುಧವಾರ ಇಡೀ ದಿನ ಗಾಂಧಿ ಜಯಂತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಗುರುವಾರ ದಸರಾ ಕಾರ್ಯಕ್ರಮದ ನಿಮಿತ್ತ ಮೈಸೂರಿನಲ್ಲಿ ಇರಲಿದ್ದಾರೆ. ಶುಕ್ರವಾರ ಹಾಗೂ ಶನಿವಾರ ರಾಯಚೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ, ಮಂಗಳವಾರ ರಾತ್ರಿಯೇ ಹಲವು ಮಹತ್ವದ ಕಡತಗಳಿಗೆ ಸಹಿ ಮಾಡಿದ್ದಾರೆ.
ಮಂಗಳವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಲ್ಲದ ಮನಸ್ಸಿನಿಂದಲೇ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು, ಸಂಜೆ ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಸಭೆಯಲ್ಲೂ ಹೆಚ್ಚು ಆಸಕ್ತಿ ವಹಿಸಿರಲಿಲ್ಲ. ವಿಧಾನಸೌಧದಿಂದ ತಮ್ಮ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ರಾತ್ರಿವರೆಗೆ ಮುಡಾ ಪ್ರಕರಣದ ಆಗು-ಹೋಗುಗಳ ಕುರಿತು ಅಧಿಕಾರಿಗಳು ಹಾಗೂ ಆಪ್ತರೊಂದಿಗೆ ಚರ್ಚಿಸಿದ್ದಾರೆ.
ರಾತ್ರಿ ಊಟ ಮುಗಿಸಿದ ಅನಂತರ ಕಡತ ವಿಲೇವಾರಿ ಯಜ್ಞ ಕೈಗೊಂಡ ಸಿಎಂ, ಮಧ್ಯರಾತ್ರಿ 2 ಗಂಟೆವರೆಗೆ ತಮ್ಮ ಮುಂದಿದ್ದ ಕಡತಗಳಿಗೆ ಸಹಿ ಮಾಡಿದ್ದಾರೆ. ಈ ಪೈಕಿ ಬಹುತೇಕ ವರ್ಗಾವಣೆಗೆ ಸಂಬಂಧಿಸಿದ ಕಡತಗಳೇ ಇದ್ದವು. ಅದಲ್ಲದೆ ಇನ್ನೂ ಕೆಲ ಪ್ರಮುಖ ಕಡತಗಳಿಗೂ ಸಹಿ ಮಾಡಿದ್ದಾರೆ ಎಂದು ಸಿಎಂ ಆಪ್ತಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Congress session: ಡಿಸೆಂಬರ್ನಲ್ಲಿ ಬೆಳಗಾವಿಗೆ ಬರಾಕ್ ಒಬಾಮಾ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…
Contract Carriage: ಬೈಕ್ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ
Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್ ಈಗ ಸ್ಫೋಟ!
World War 3…?: ಇಸ್ರೇಲ್ ಮೇಲೆ ಇರಾನ್ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.