MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
ಸಿದ್ದರಾಮಯ್ಯ ಮಾತುಗಳು ಅವರ ಪ್ರಾಮಾಣಿಕತೆಯನ್ನೇ ಸುಳ್ಳಾಗಿಸಿದವು: ಮಾಜಿ ಸಂಸದ
Team Udayavani, Sep 30, 2024, 6:20 AM IST
ದಾವಣಗೆರೆ: ಯಾವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 62 ಕೋಟಿ ರೂ. ಕೊಟ್ಟರೆ ಮುಡಾದ 14 ನಿವೇಶನಗಳನ್ನು ವಾಪಸ್ ಕೊಡುತ್ತೇನೆ ಎಂಬ ಮಾತು ಬಂತೋ ಆಗಲೇ ಅವರ 45 ವರ್ಷದ ರಾಜಕೀಯ ಜೀವನವೇ ಅಂತ್ಯವಾಯಿತು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನೀವು 14 ನಿವೇಶನಗಳನ್ನು ವಾಪಸ್ ಕೊಟ್ಟರೆ ಇಡೀ ಪ್ರಕರಣ ತಾರ್ಕಿಕ ಅಂತ್ಯ ಕಾಣುತ್ತದೆ. ಯಾರೆಲ್ಲ ಅಕ್ರಮವಾಗಿ ನಿವೇಶನ ಪಡೆದಿದ್ದಾರೋ ಎಲ್ಲವೂ ಹೊರಗೆ ಬರುತ್ತವೆ ಎಂಬುದಾಗಿ ನಾನು ಸಿಎಂಗೆ ಹೇಳಿದ್ದೆ. ಅದಕ್ಕೆ 62 ಕೋಟಿ ಕೊಟ್ಟರೆ ವಾಪಸ್ ಕೊಡುತ್ತೇನೆ ಎಂದಿದ್ದರು. ಯಾವಾಗ ಅವರ ಬಾಯಿಂದ ಆ ಮಾತು ಬಂತೋ ಆಗಲೇ ಅವರ ರಾಜಕೀಯ ಜೀವನ ಅಂತ್ಯವಾಯಿತು ಎಂದರು.
ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಬೇಕು
ಸಿದ್ದರಾಮಯ್ಯ ಮಾತುಗಳು ಅವರ ಪ್ರಾಮಾಣಿಕತೆಯನ್ನೇ ಸುಳ್ಳಾಗಿಸಿದವು. ಈಗ ಕೇಸ್ಗೆ ಕೌಂಟರ್ ಕೇಸ್ ಎಂದು ಹೇಳುತ್ತಿದ್ದಾರೆ. ಈಗ ಭ್ರಷ್ಟಾಚಾರದ ಆರೋಪ ಸಿದ್ದರಾಮಯ್ಯ ಕುತ್ತಿಗೆಗೇ ಬಂದಿದೆ. ಸಿಎಂ ಕುರ್ಚಿಯೇ ಹೋಗುವ ಪರಿಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿಯಲ್ಲೂ ಅವರು ಧಮ್ಕಿ ಹಾಕುತ್ತಿದ್ದಾರೆ. ಯಾರ್ಯಾರ ಮೇಲೆ ಕೇಸ್ ಹಾಕುತ್ತೀರೋ ಹಾಕಿ ನೋಡೋಣ. ರಾಜ್ಯದ ಜನ ಎಲ್ಲವನ್ನೂ ಬಹಳ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !
State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.