MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಇಷ್ಟೆಲ್ಲ ಆದರೂ 'ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ' ಎಂಬಂತೆ ನಡೆದು ಕೊಳ್ಳುತ್ತಿದ್ದೀರಿ: ಬಿಜೆಪಿ ರಾಜ್ಯಾಧ್ಯಕ್ಷ
Team Udayavani, Sep 25, 2024, 6:52 PM IST
ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramiah ) ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮೈಸೂರು ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸಬೇಕೆಂದು ಆದೇಶಿಸಿದ್ದು, ಈ ನಡುವೆ ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಹಗರಣದ ಆರೋಪ ಹೊತ್ತು ನ್ಯಾಯಾಲಯದಲ್ಲಿ ತನಿಖೆಗೆ ತೀರ್ಪು ಬಂದರೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತ ಭಂಡ ಮುಖ್ಯಮಂತ್ರಿ ಎಂಬ ಕಪ್ಪು ಚುಕ್ಕೆಯನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂಟಿಸಿದ ಐತಿಹಾಸಿಕ ಪ್ರಮಾದಕ್ಕೆ ಕಾರಣರಾಗಬೇಡಿ, ನಿಮ್ಮ ಭಂಡತನದ ನಡೆಯನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸಲಾರರು ಎಂದು ವಾಗ್ದಾಳಿ ನಡೆಸಿದರು.
‘ನೈತಿಕತೆಯ ರಾಜಕೀಯ’ ಎಂದೋ ಮೂಲೆಗೆ ಸರಿಸಿರುವ ಕಾಂಗ್ರೆಸ್ ಹೈಕಮಾಂಡ್ ತನ್ನ ಅಜೆಂಡಾ ಏನಿದ್ದರೂ ಭ್ರಷ್ಟರ ರಕ್ಷಿಸುವುದು, ದೇಶದ ಕಾನೂನನ್ನು ಉಲ್ಲಂಘಿಸುವವರನ್ನು ಉತ್ತೇಜಿಸುವುದೇ ತಮ್ಮ ಆದ್ಯತೆ ಎನ್ನುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕರಣದಲ್ಲೂ ತೋರಿಸಿಕೊಟ್ಟಿದೆ. ವಾಲ್ಮೀಕಿ ನಿಗಮದ ತನಿಖೆ ತಾರ್ಕಿಕ ಅಂತ್ಯಕ್ಕೆ ಹೋದರೆ ಹೈ ಕಮಾಂಡ್ ಬುಡಕ್ಕೆ ಬರುತ್ತದೆ ಅಂತಾ ಕಾಂಗ್ರೆಸ್ ಹೈಕಮಾಂಡ್ಗೆ ಗೊತ್ತಿದೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ಭ್ರಷ್ಟ ಸಿಎಂ ಬೆನ್ನಿಗೆ ನಿಲ್ಲುತ್ತಿದೆ ಎಂದು ಆರೋಪಿಸಿದರು.
ಘನತೆವೆತ್ತ ರಾಜ್ಯಪಾಲರನ್ನು ಪಕ್ಷಪಾತಿಗಳೆಂದು ಜರಿದಿರಿ, ಅದಕ್ಕೆ ಉಚ್ಚ ನ್ಯಾಯಾಲಯವೇ ನಿನ್ನೆ ಉತ್ತರಕೊಟ್ಟಿತು, ನಿಮ್ಮ ಮೇಲಿನ ಆರೋಪದಲ್ಲಿ ಹುರುಳಿದೆ ಎಂಬುದನ್ನೂ ಉಲ್ಲೇಖಿಸಿತು. ಇಂದು ನಿಮ್ಮನ್ನು ಆರೋಪಿಯನ್ನಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಎರಡೂ ನ್ಯಾಯಾಲಯಗಳ ಆದೇಶವು ನೀವು ತಪ್ಪಿತಸ್ಥರೆಂಬ ಭಾವ ರಾಜ್ಯದ ಜನತೆಯಲ್ಲಿ ಮೂಡಲು ಪೂರಕವಾಗಿವೆ. ಇಷ್ಟಾಗಿಯೂ ‘ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎಂಬಂತೆ ನಡೆದು ಕೊಳ್ಳುತ್ತಿದ್ದೀರಿ, ಈಗಾಗಲೇ ಕಳಂಕದ ಕಪ್ಪುಮಸಿ ನಿಮ್ಮನ್ನು ಆವರಿಸಿಕೊಂಡಿದೆ ಇನ್ನಾದರೂ ರಾಜ್ಯದ ನೈತಿಕ ರಾಜಕಾರಣದ ಪರಂಪರೆಯ ಘನತೆ ಕುಗ್ಗದಂತೆ ನಡೆದುಕೊಳ್ಳಿ ಎಂದು ಬಿವೈವಿ ಆಗ್ರಹಿಸಿದರು.
ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ. ಯಾವುದೇ ತನಿಖೆಗೆ ಸಿದ್ಧ ಎಂದು ಸಿಎಂ ಹೇಳಿದ್ದಾರೆ. ಸಿಎಂ ವಿರುದ್ಧ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಎಸ್ಪಿಗೆ ಆದೇಶಿಸಿದೆ. ತಕ್ಷಣ ಎಫ್ಐಆರ್ ದಾಖಲಿಸಿ ತನಿಖೆ ಮಾಡಬೇಕು. ಲೋಕಾಯುಕ್ತ ಪೊಲೀಸರಿಂದ ನ್ಯಾಯಯುತ ತನಿಖೆ ಅಸಾಧ್ಯ. ಹೀಗಾಗಿ ಸಿಬಿಐನಿಂದಲೇ ತನಿಖೆ ಆಗಬೇಕು. ಸಿಬಿಐ ತನಿಖೆಗೆ ಆದೇಶಿಸಿದರೆ ಗೌರವ ಮತ್ತಷ್ಟು ಹೆಚ್ಚಾಗುತ್ತೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.