MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು

ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಸ್ಥಳ ಪರಿಶೀಲಿಸಿದ ಅಧಿಕಾರಿಗಳು, ಲೋಕಾಯುಕ್ತ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳ ಒದಗಿಸಿದ ದೂರುದಾರ

Team Udayavani, Oct 2, 2024, 7:20 AM IST

loka

ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮದ ತನಿಖೆ ಚುರುಕುಗೊಳಿಸಿರುವ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಮೈಸೂರು ತಾಲೂಕಿನ ಕೆಸರೆ ಗ್ರಾಮದಲ್ಲಿರುವ ವಿವಾದಿತ ಜಾಗಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು.

6 ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ಎಫ್ಐಆರ್‌ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು, ಸೋಮವಾರ ದೂರುದಾರ ಸ್ನೇಹ ಮಯಿ ಕೃಷ್ಣ ಅವರಿಗೆ ನೋಟಿಸ್‌ ನೀಡಿ ಮಂಗಳವಾರ ಬೆಳಗ್ಗೆ 7.30ಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಕೆಸರೆಯ ಸರ್ವೇ ನಂ. 464 ಮಾತ್ರವಲ್ಲದೇ ಸಂಪೂರ್ಣ ಬೌಂಡರಿಯ ಸರ್ವೇ ಕಾರ್ಯ ನಡೆಯಿತು.

ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿಗೆ ವರ್ಗಾವಣೆಯಾದ ನಿವೇಶನ ವ್ಯವಹಾರದಲ್ಲಿ ಅಕ್ರಮವಾಗಿದೆಯೇ ಎಂಬ ಅಧಿಕಾರಿಗಳು ತನಿಖೆ ಕೈಗೊಂಡಿದ್ದು, ಮುಂದಿನ ಹಂತದಲ್ಲಿ 14 ನಿವೇಶನಗಳಿರುವ ಸ್ಥಳಕ್ಕೆ ತೆರಳಿ ಪರಿಶೀಲಿಸಲಿದ್ದಾರೆ. ಬಳಿಕ ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರಕ್ಕೆ ತೆರಳಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸುವ ಸಾಧ್ಯತೆಗಳಿವೆ.

ಮಹಜರು ತೃಪ್ತಿ ನೀಡಿದೆ: ಸ್ನೇಹಮಯಿ ಕೃಷ್ಣ
ಸ್ಥಳ ಮಹ ಜರು ಬಳಿಕ ಸ್ನೇಹಮಯಿ ಕೃಷ್ಣ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಪತ್ನಿ ಖರೀದಿಸಿರುವ ಜಮೀನಿನಲ್ಲಿ ನಿವೇಶನ ರಚನೆ ಕುರುಹು ಸ್ಪಷ್ಟವಾಗಿದೆ. ಮುಡಾ ಆಸ್ತಿಯನ್ನು ಕೃಷಿ ಭೂಮಿ ಮಾಡಿಕೊಂಡಿರುವುದು ನನ್ನ ಆರೋಪ. ಆ ಆರೋಪ ನಿಜ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪ್ರಕರಣದ ಹೇಳಿದರು. ಇವತ್ತಿನ ಸ್ಥಳ ಮಹಜರು ಪ್ರಕ್ರಿಯೆ ತೃಪ್ತಿ ನೀಡಿದೆ. ಸಿಎಂ ಪತ್ನಿಗೆ ಸೇರಿದೆ ಎನ್ನುತ್ತಿರುವ ಆಸ್ತಿ ಮುಡಾಕ್ಕೆ ಸೇರಿದ್ದು.

ಆ ಆಸ್ತಿಯನ್ನು ದೇವರಾಜು ಸುಳ್ಳು ದಾಖಲೆ ಸೃಷ್ಟಿಸಿ, ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮಾರಾಟ ಮಾಡಿದ್ದಾರೆ. ಅದನ್ನು ಸಿಎಂ ಪತ್ನಿಗೆ ಬರೆದಿರುವ ದಾಖಲಾತಿ ನನ್ನ ಬಳಿ ಇದೆ. 3 ಎಕರೆ 16 ಗುಂಟೆ ಜಾಗ ಮುಡಾಕ್ಕೆ ಸೇರಿಸಲಾಗಿದೆ. ಆದರೂ ಆ ಭೂಮಿ ಯನ್ನು ಮತ್ತೆ ಮುಡಾಕ್ಕೆ ಕೊಟ್ಟಿದ್ದೇವೆಂದು ಮುಡಾದಿಂದ ಬದಲಿ ನಿವೇಶನ ಪಡೆಯಲಾಗಿದೆ ಎಂದರು.

ನಾಳೆ ಮತ್ತೆ ಬರುವಂತೆ ನೋಟಿಸ್‌
ಅ. 3ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿ ರುವ ಜಾರಿ ನಿರ್ದೇಶನಾಲಯ ಕಚೇರಿಗೆ ಮತ್ತೆ ಬರುವಂತೆ ಸ್ನೇಹಮಯಿ ಅವರಿಗೆ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದಾರೆ.

ಮುಂದೇನು?
* ಮುಂದಿನ ಹಂತದಲ್ಲಿ 14 ನಿವೇಶನಗಳಿರುವ ಸ್ಥಳ ಪರಿಶೀಲನೆ ನಡೆಸಲಿರುವ ಲೋಕಾಯುಕ್ತ
* ಬಳಿಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತೆರಳಿ ಅಗತ್ಯ ದಾಖಲೆಗಳ ಸಂಗ್ರಹ ಸಾಧ್ಯತೆ

ಚೆಕ್‌ಬೌನ್ಸ್‌: ಸ್ನೇಹಮಯಿ ಕೃಷ್ಣಗೆ ವಾರಂಟ್‌!
ಮೈಸೂರು: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯ ಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ. ಎನ್‌. ಕುಮಾರ್‌ ಎಂಬವರು 2015ರ ಜೂನ್‌ 30ರಂದು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್‌ಬೌನ್ಸ್  ಪ್ರಕರಣ ದಾಖಲಿಸಿದ್ದರು.

ಟಾಪ್ ನ್ಯೂಸ್

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

HD-Kumaraswamy

D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

western-Ghat

Western Ghat: ಡಾ.ಕಸ್ತೂರಿ ರಂಗನ್‌ ವರದಿ ತಿರಸ್ಕಾರ: ನಿರ್ಣಯ ಕೇಂದ್ರ ಸರಕಾರಕ್ಕೆ ರವಾನೆ

MUDA Case: ಯಾವುದೇ ಕ್ಷಣ ಇ.ಡಿ. ದಾಳಿ? ಪಿಎಂಎಲ್‌ಎಯಡಿ ಹೇಗೆ ತನಿಖೆ: ಸಿಎಂ ಸಿದ್ದರಾಮಯ್ಯ

MUDA Case: ಯಾವುದೇ ಕ್ಷಣ ಇ.ಡಿ. ದಾಳಿ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.