MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆರೋಪ
Team Udayavani, Oct 1, 2024, 1:52 AM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿ ರಕ್ಷಣೆ ಪಡೆಯುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೀಶ್ ಖರ್ಬೀಕರ್ ಅವರನ್ನು ಲೋಕಾಯುಕ್ತದ ಎಡಿಜಿಪಿಯಾಗಿ ನೇಮಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜುಲೈನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಕೊನೆಯ ದಿನ ಸಿದ್ದರಾಮಯ್ಯನವರು ಖರ್ಬೀಕರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಮುಡಾ ಪ್ರಕರಣ ಲೋಕಾಯುಕ್ತ ವಿಚಾರಣೆಗೆ ಬರಬಹುದೆಂಬ ಕಾರಣಕ್ಕಾಗಿಯೇ ಈ ರೀತಿ ಮಾಡಿದ್ದಾರೆ. ಹೀಗಾಗಿ ಮುಡಾ ನಿವೇಶನ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಲೋಕಾಯುಕ್ತ ಪೊಲೀಸ್ ಅಧಿಕಾರಿಗೆ ಹೆಚ್ಚುವರಿಯಾಗಿ ಸರಕಾರದ ಅಧೀನ ಸಂಸ್ಥೆಗಳ ತನಿಖೆ ಜವಾಬ್ದಾರಿ ಕೊಟ್ಟ ಉದಾಹರಣೆ ಇಡೀ ದೇಶದಲ್ಲೇ ಇಲ್ಲ. ಇಂತಹ ಕೆಟ್ಟ ಪರಂಪರೆಗೆ ಸಿದ್ದರಾಮಯ್ಯ ನಾಂದಿ ಹಾಡಿದ್ದಾರೆ. ಎಸ್ಐಟಿ ಎಡಿಜಿಪಿಯಾಗಿ ಸಣ್ಣಪುಟ್ಟ ಅಧಿಕಾರಿಗಳನ್ನು ಬಂಧಿಸಿದ್ದಷ್ಟೇ ಖರ್ಬೀಕರ್ ಅವರ ಹೆಚ್ಚುಗಾರಿಕೆ. ತಮ್ಮನ್ನು ರಕ್ಷಿಸಿಕೊಳ್ಳಲು ಮುಖ್ಯಮಂತ್ರಿ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹಿಂದಿನ ಅವಧಿಯಲ್ಲಿ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ತನಿಖಾ ಹಂತದಲ್ಲಿ ಇರುವಾಗಲೇ ಲೋಕಾಯುಕ್ತದ ಶಕ್ತಿ ಕುಂದಿಸುವ ಕೆಲಸ ಮಾಡಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ
Gandhi Jayanthi: ನಾಳೆ ಕಾಂಗ್ರೆಸ್ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ
SSLC Exam: ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಸೋರಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.