Muda Case: ಪ್ರಾಸಿಕ್ಯೂಷನ್‌ ರದ್ದತಿ ಅರ್ಜಿ ವಿಚಾರಣೆ-ಸೆ.9ರವರೆಗೆ ಸಿದ್ದರಾಮಯ್ಯಗೆ ರಿಲೀಫ್

ವಿಚಾರಣಾ ನ್ಯಾಯಾಲಯದ ಕಲಾಪ ದೀರ್ಘಕಾಲ ಮುಂಡೂಡುವುದು ಸೂಕ್ತವಲ್ಲ

Team Udayavani, Sep 2, 2024, 5:17 PM IST

Muda Case: ಪ್ರಾಸಿಕ್ಯೂಷನ್‌ ರದ್ದತಿ ಅರ್ಜಿ ವಿಚಾರಣೆ-ಸೆ.9ರವರೆಗೆ ಸಿದ್ದರಾಮಯ್ಯಗೆ ರಿಲೀಫ್

ಬೆಂಗಳೂರು: ಮುಡಾ ಪ್ರಕರಣದ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ ಸೋಮವಾರ (ಸೆ.02) ದೂರುದಾರರ ಪರ ವಕೀಲರ ವಾದವನ್ನು ಆಲಿಸಿ, ಮತ್ತೆ ಸೆಪ್ಟೆಂಬರ್‌ 9ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯಗೆ ಸೆ.9ರವರೆಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

ರಾಜ್ಯಪಾಲರ ನಿರ್ಧಾರ ಸರಿ ಇದೆ: ವಕೀಲ ಕೆಜಿ ರಾಘವನ್

ಮುಡಾ ಪ್ರಕರಣದ ಕುರಿತು ಇಂದು ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಕೆಜಿ ರಾಘವನ್‌, 1998ರಲ್ಲಿ ಮುಡಾ ಭೂಸ್ವಾಧೀನವಾಗಿದ್ದು, 2017ರಲ್ಲಿ 50:50 ಅನುಪಾತದಲ್ಲಿ ಭೂಮಿ ಹಂಚಿಕೆಗೆ ಸರ್ಕಾರ ಸಮ್ಮತಿ ನೀಡಲು ನಿರ್ಣಯ ಅಂಗೀಕರಿಸಿತ್ತು. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು. 2022ರಲ್ಲಿ 50:50ರ ಅನುಪಾತದಲ್ಲಿ ಸಿಎಂ ಪತ್ನಿಗೆ 14 ಸೈಟ್‌ ಹಂಚಿಕೆ ಮಾಡಲಾಗಿದೆ. ಸಿಎಂ ಪತ್ನಿಗೆ ಬೇಕಾದಂತೆ ನಿಯಮ ಬದಲಾವಣೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಸಿಎಂಗೆ ಏನಾದರು ಸಂಬಂಧ ಇದೆಯಾ ಎಂಬ ಜಡ್ಜ್‌ ನಾಗಪ್ರಸನ್ನ ಅವರ ಪ್ರಶ್ನೆಗೆ, ಹೌದು ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದು ಸ್ಷಷ್ಟವಾಗಿದೆ. 1998ರ ಭೂಸ್ವಾಧೀನಕ್ಕೆ 2015ರ ಡಿನೋಟಿಫಿಕೇಶನ್‌ ಅನ್ವಯಿಸಲಾಗಿದೆ. ಮಾಲೀಕರೇ ಅಲ್ಲದವರಿಗೆ ಡಿನೋಟಿಫಿಕೇಶನ್‌ ಮಾಡಿಕೊಡಲಾಗಿದೆ. ತನಿಖೆ ನಡೆಸಲು ಇನ್ನೆಷ್ಟು ಸಂಗತಿ ಬೇಕು.. ಮುಡಾ ಹಗರಣ ಸಂಬಂಧ ಸರ್ಕಾರ ಆಯೋಗ ರಚನೆ ಮಾಡಿದೆ. ಆದರೆ ಸಿಎಂ ಪತ್ನಿಯ ವಿಚಾರಣೆ ನಡೆಸಿಲ್ಲ. ಹೀಗಾಗಿ ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾಗಿದೆ. ತನಿಖೆಯ ಅವಶ್ಯಕತೆ ಇದೆ ಎಂದು ಹೈಕೋರ್ಟ್‌ ಏಕಸದಸ್ಯ ಪೀಠದಲ್ಲಿ ವಾದ ಮಂಡಿಸಿದರು.

ಎಜಿ ಮನವಿ ಮೇರೆಗೆ ವಿಚಾರಣೆ ಮುಂಡೂಡಿಕೆ:

ವಾರಾಂತ್ಯದಲ್ಲಿ ಸಾಲು, ಸಾಲು ರಜೆ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲಾವಕಾಶ ನೀಡಬೇಕೆಂದು  ಎಜಿ ಶಶಿಕಿರಣ್‌ ಶೆಟ್ಟಿ ಹೈಕೋರ್ಟ್‌ ಪೀಠದಲ್ಲಿ ಮನವಿ ಮಾಡಿಕೊಂಡರು.

ವಿಚಾರಣಾ ನ್ಯಾಯಾಲಯದ ಕಲಾಪ ದೀರ್ಘಕಾಲ ಮುಂಡೂಡುವುದು ಸೂಕ್ತವಲ್ಲ. ನೀವು ಹಲವು ಸಂಪುಟಗಳ ದಾಖಲೆ ನೀಡಿದ್ದೀರಿ.‌ ನಾನು ಎಲ್ಲವನ್ನು ಪರಿಶೀಲಿಸಿಬೇಕಿದೆ. ಹೀಗಾಗಿ ನೀವು ಶೀಘ್ರ ವಾದ ಮಂಡನೆ ಮುಗಿಸಬೇಕು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದರು. ಸೆಪ್ಟೆಂಬರ್‌ 9ರಂದು ವಾದ ಮಂಡಿಸುವುದಾಗಿ ಎಜೆ ಶಶಿಕಿರಣ್‌ ಶೆಟ್ಟಿ ತಿಳಿಸಿದ್ದು, ಸೆ.12 ಅಥವಾ 21ರಂದು ವಾದಿಸುವುದಾಗಿ ಸಿದ್ದರಾಮಯ್ಯ ಪರ ವಕೀಲರಾದ ಸಿಂಘ್ವಿ ತಿಳಿಸಿದ್ದು, ಸೆಪ್ಟೆಂಬರ್‌ 9ರ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ನೀಡಿದೆ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.