MUDA Scam; ಸಿದ್ದರಾಮಯ್ಯಗೊಂದು ನ್ಯಾಯ, ನಮಗೊಂದು ನ್ಯಾಯವೇ: ವಿಶ್ವನಾಥ್
Team Udayavani, Jul 10, 2024, 7:00 AM IST
ಮೈಸೂರು: ಮುಡಾದಲ್ಲಿ ನಮಗೆ ನಿವೇಶನ ಸಿಕ್ಕ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿಗೂ ನಿವೇಶನ ನೀಡಲಾಗಿದ್ದು, ಬದಲಿಯಾಗಿ ವಿಜಯನಗರದಲ್ಲಿ ನಿವೇಶನ ನೀಡಲಾಗಿದೆ. ಸಿದ್ದರಾಮಯ್ಯ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪ್ರಶ್ನಿಸಿದರು.
ವಿಶ್ವನಾಥ್ ತಮ್ಮ ಪತ್ನಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದಿರುವ ಕುರಿತು ಮುಡಾ ಅಧ್ಯಕ್ಷ ಮರೀಗೌಡ ಆರೋಪಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ನಿವೇಶನ ಜಾಗದಲ್ಲಿ ನಾಲೆ ಹಾದುಹೋಗಿದ್ದು, ಬದಲಿ ನಿವೇಶನ ನೀಡಿದ್ದಾರೆ ಎಂದು ದಾಖಲೆ ಪ್ರದರ್ಶಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಕಾಂಗ್ರೆಸ್ ಶಾಸಕರು ಮುಡಾ ಹಗರಣದ ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.
ಬೈರತಿ ಬಳಿ ನಿವೇಶನ ಕೇಳಿದ್ದು ನಿಜ, ಆದರೆ ನನಗಲ್ಲ
ನಾನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಳಿ ನಿವೇ ಶನ ಕೇಳಿದ್ದು ನಿಜ. ಆದರೆ ನನಗಾಗಿ ಅಲ್ಲ; ಸ್ನೇಹಿತರಿಗೆ ನೀಡುವಂತೆ ಅವರ ಬಳಿ ಹೋಗಿದ್ದು ನಿಜ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಾನು ಮುಡಾ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೆ. ನಿವೇಶನ ಸಿಕ್ಕಿದೆ. ಜತೆಗೆ 2 ಬಾರಿ ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ನಾಗಿದ್ದೆ. ಹಾಗಿರುವಾಗ ಬೈರತಿ ಬಳಿ ನಿವೇಶನವನ್ನು ನಾನೇಕೆ ಕೇಳಲಿ? ಆತ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವುದರಿಂದ ಸ್ನೇಹಿತರಿಗೆ ನಿವೇಶನ ನೀಡುವಂತೆ ಕೇಳಲು ಹೋಗಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.