MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
ಹಗರಣದ ದಾಖಲೆ ಹೊತ್ತೂಯ್ದ ಸಚಿವ ಭೈರತಿ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ
Team Udayavani, Jul 7, 2024, 7:40 AM IST
ಬೆಂಗಳೂರು: “ಮುಡಾ ಹಗರಣವೇ ನಡೆದಿಲ್ಲ ಎಂದಾದರೆ ತನಿಖೆಯನ್ನು ಯಾವ ಕಾರಣಕ್ಕಾಗಿ ನಡೆಸಲಾಗುತ್ತಿದೆ? ಹೆಲಿಕಾಪ್ಟರ್ನಲ್ಲಿ ಬಂದು ಸಚಿವ ಭೈರತಿ ಸುರೇಶ್ ದಾಖಲಾತಿಗಳನ್ನು ತುಂಬಿಕೊಂಡು ಹೋಗಿದ್ದಾರೆ. ಇದರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವೇ ಇದೆ’ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಈ ಪ್ರಶ್ನೆ ಎತ್ತಿದರು. ಹಿಂದೆ ಸಿದ್ದರಾಮಯ್ಯ ಅವರ ಮೇಲೆ ರೀ ಡೂ ಆರೋಪ ಬಂದಾಗ ಅದರ ತನಿಖೆಗೆ ನೇಮಿಸಿದ್ದ ನ್ಯಾ.ಕೆಂಪಣ್ಣ ಆಯೋಗದ ವರದಿ ಎಲ್ಲಿ ಹೋಯಿತು? ರೀ ಡೂ ಪ್ರಕರಣಕ್ಕಿಂತಲೂ ಹೆಚ್ಚಿನ ಬಲವಾದ ಸಾಕ್ಷ್ಯಗಳು ಈ ಪ್ರಕರಣದಲ್ಲಿವೆ. ಮುಖ್ಯಮಂತ್ರಿಗಳು ತಾವು ತಪ್ಪೇ ಮಾಡಿಲ್ಲ, ನಮಗೆ ಮುಡಾದವರೇ 62 ಕೋಟಿ ರೂ. ಕೊಡಬೇಕು ಎಂಬುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು. ಈ ಹಗರಣ ನನಗೆ ಕಳೆದ ವರ್ಷವೇ ಗಮನಕ್ಕೆ ಬಂದಿತ್ತು ಎಂದು ಕುಮಾರಸ್ವಾಮಿ ಹೇಳಿದರು.
ಈಗಾಗಲೇ ಚಿಕಿತ್ಸೆ ಪಡೆದಿದ್ದೇನೆ
“ನನ್ನ ಬಗ್ಗೆ ಯಾರೋ ಒಬ್ಬರು ಹುಚ್ಚ ಅಂದಿದ್ದಾರಲ್ಲ, ನಾನು ಯಾವುದೋ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬರುವ ಆವಶ್ಯಕತೆ ಇಲ್ಲ. ಈಗಾಗಲೇ ಹೃದಯ ಚಿಕಿತ್ಸೆ ಪಡೆದು ಬಂದಿದ್ದೇನೆ, ನಾನು ಚೆನ್ನಾಗಿಯೇ ಇದ್ದೇನೆ’ ಎಂದು ಡಿ.ಕೆ. ಶಿವಕುಮಾರ್ ಅವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದರು.
2013ರಲ್ಲಿ ಘೋಷಣೆ ಮಾಡಿದ್ದೀರಾ: ಸಿಎಂಗೆ ಪ್ರಶ್ನೆ
ಮುಡಾ ಹಗರಣದ ಬಗ್ಗೆ ಜಿ.ಟಿ. ದೇವೇಗೌಡರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮುಡಾದ ದಾಖಲೆಗಳು ಬೀದಿ ಬೀದಿಯಲ್ಲಿ ರವಾನೆ ಆಗುತ್ತಿವೆ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿದ್ದಾರೆ. ನನ್ನ ಜಮೀನು, ಹೇಳದೆ ಕೇಳದೆ ಸೈಟ್ ಮಾಡಿಬಿಟ್ಟಿದ್ದೀರಿ ಎಂದು ಅವರು ಹೇಳುತ್ತಿದ್ದಾರೆ. ಆ ಜಮೀನಿನ ವಾರಸುದಾರರು ಯಾರು? ಯಾರ ಹೆಸರಿನಲ್ಲಿ ಜಮೀನು ಇದೆ? ಲಿಂಗ ಅಲಿಯಾಸ್ ಜವರ ಅನ್ನುವವರ ಜಮೀನು ಅದು. ಈಗಾಗಲೇ ಆ ದಾಖಲೆಗಳನ್ನು ಎಲ್ಲೆಲ್ಲಿ ಇಡಬೇಕೋ ಅಲ್ಲಿ ಇಟ್ಟಿದ್ದಾರೆ. 2004ರಲ್ಲಿ ಏನಾಯಿತು? 2005ರಲ್ಲಿ ಏನಾಯಿತು? ಎಲ್ಲದರ ಇತಿಹಾಸವೂ ನನ್ನ ಬಳಿ ಇದೆ. ತಮ್ಮ ಧರ್ಮಪತ್ನಿಗೆ ಅವರ ಅಣ್ಣ ನೀಡಿದ ಅರಿಶಿನ ಕುಂಕುಮದ ಜಮೀನು ಅದು ಎಂಬುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರಲ್ಲ, 2013ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾಗ ಈ ಆಸ್ತಿಯ ಬಗ್ಗೆ ಘೋಷಣೆ ಮಾಡಿಕೊಂಡಿ¨ªಾರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.