Mudhola: ನಗರಸಭೆ ಚುನಾವಣೆ; ಒಂದು ಮತದಿಂದ ಅಧಿಕಾರ ಕಳೆದುಕೊಂಡ ಬಿಜೆಪಿ!

ಕಾಂಗ್ರೆಸ್ -ಬಿಜೆಪಿಯಿಂದ ಸದಸ್ಯರ ಆಪರೇಷನ್‌, ರಿವರ್ಸ್‌ ಆಪರೇಷನ್‌ ತಂತ್ರ, ಪಕ್ಷದಿಂದ 7 ಮಂದಿಯ ಉಚ್ಚಾಟಿಸಿದ ಬಿಜೆಪಿ

Team Udayavani, Aug 26, 2024, 7:11 PM IST

Mudhola

ಮುಧೋಳ: ಅಧಿಕಾರ ಹಿಡಿಯಲು ಬಿಜೆಪಿ -ಕಾಂಗ್ರೆಸ್‌ ನಡುವಿನ ತೀವ್ರ ಪೈಪೋಟಿಯ ನಡುವೆ ನಡೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸುನಂದಾ ಹನಮಂತ ತೇಲಿ ಅಧ್ಯಕ್ಷ ಹಾಗೂ ಮೆಹಬೂಬಸಾಬ ಮುಕ್ತುಮ್ ಸಾಬ ಬಾಗವಾನ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿ ಸ್ವಲ್ಪದರಲ್ಲಿ ಅಧಿಕಾರದಿಂದ ವಂಚಿತವಾಗಿದೆ

ಸೋಮವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ  ಸುನಂದಾ ತೇಲಿ ಹಾಗೂ ಬಿಜೆಪಿ ವತಿಯಿಂದ ಗಾಯತ್ರಿ ಸಿಂಗಾಡಿ  ನಾಮಪತ್ರ ಸಲ್ಲಿಸಿದ್ದರು. ಕೈ ಎತ್ತುವ ಮೂಲಕ ನಡೆದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಂದಾ ತೇಲಿ 17ಮತಗಳ  ಪಡೆದರೆ ಪ್ರತಿಸ್ಪರ್ಧಿ ಗಾಯತ್ರಿ ಸಿಂಗಾಡಿ ಅವರು 16ಮತಗಳ ಪಡೆದು ಕೇವಲ‌ ಒಂದು ಮತದ ಅಂತರದಿಂದ ಸುನಂದಾ ತೇಲಿ ಅಧ್ಯಕ್ಷರಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಮೆಹಬೂಬಸಾಬ್ ಮುಕ್ತುಮ್  ಹಾಗೂ ಬಿಜೆಪಿಯಿಂದ ರಾಜೇಸಾಬ ದಸ್ತಗೀರಸಾಬ ರಫುಗಾರ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನದಲ್ಲೂ ಒಂದು ಮತದಿಂದ ಕಾಂಗ್ರೆಸ್ ಅಭ್ಯರ್ಥಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಕುತೂಹಲ ಮೂಡಿಸಿದ್ದ ಸದಸ್ಯರ ನಡೆ :
ಚುನಾವಣೆ ಕೊನೆಯವರೆಗೂ ಮತದಾನದ ಗುಟ್ಟುಬಿಟ್ಟುಕೊಡದ ಸದಸ್ಯರು ಕೊನೆಯಲ್ಲಿ ತಮ್ಮ ತಮ್ಮ ಅಭ್ಯರ್ಥಿ ಪರ‌ ಕೈ ಎತ್ತಿ ಚುನಾವಣೆಯ ಕುತೂಹಲ ಹಂತಕ್ಕೆ ಕೊಂಡೊಯ್ದರು. ಚುನಾವಣೆ ಪೂರ್ವದಲ್ಲೇ  ಬಿಜೆಪಿಯ ನಾಲ್ವರು ಸದಸ್ಯರು‌ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದರು.

ಇದನ್ನರಿತ ಬಿಜೆಪಿ‌ ಮುಖಂಡರು ಕಾಂಗ್ರೆಸ್ ನ ಮೂವರು ಸದಸ್ಯರ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾದರೂ ಗೆಲುವಿಗೆ ಬೇಕಾದ ಇನ್ನೊಂದು ಮತ ಪಡೆಯುವಲ್ಲಿ‌ ವಿಫಲಗೊಂಡು ಅಧಿಕಾರದಿಂದ ಬಿಜೆಪಿ  ವಂಚಿತವಾಗುವಂತಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಎರಡು ದಿನಗಳಿಂದ ನಗರದಲ್ಲಿಯೇ ವಾಸ್ತವ್ಯ ಹೂಡಿ ಅಧಿಕಾರವನ್ನುಕಾಂಗ್ರೆಸ್‌  ಪಕ್ಷದ ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾದರು.

ಎಲ್ಲರೂ ಒಂದಾಗಿ ಅಭಿವೃದ್ದಿಗೆ ಶ್ರಮಿಸಿ: ಸಚಿವ ತಿಮ್ಮಾಪುರ
ನಗರಸಭೆಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಬೆಂಬಲಿತ  ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಭಿನಂದಿಸಿ‌ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಚುನಾವಣೆಯಲ್ಲಿ‌ ನಮ್ಮ‌‌ ಪಕ್ಷದ‌ ಅಭ್ಯರ್ಥಿಗಳಿಗೆ ಪ್ರತ್ಯಕ್ಷ ಹಾಗೂ‌ ಪರೋಕ್ಷವಾಗಿ ಬೆಂಬಲಿಸಿದ ಸದಸ್ಯರಿಗೆ ಅಭಿನಂದನೆ ತಿಳಿಸಿದರು. ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೆರೆಸದೆ ಎಲ್ಲರೂ ಒಟ್ಟಾಗಿ ಶ್ರಮವಹಿಸಬೇಕು ಎಂದರು.

ನಗರಕ್ಕೆ ಮುಖ್ಯವಾಗಿ ಶೌಚಾಲಯ, ಕುಡಿವ ನೀರು, ಬೈಪಾಸ್ ಸೇರಿ ಹಲವಾರು ಸಮಸ್ಯೆಗಳಿದ್ದು ಅವುಗಳ ನಿವಾರಣೆಗೆ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಕೆಲಸ‌ ನಿರ್ವಹಿಸಬೇಕು ಎಂದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ನಗರಸಭೆ ಸದಸ್ಯರಾದ ಡಾ.ಸತೀಶ ಮಲಘಾಣ, ಸಂತೋಷ ಪಾಲೋಜಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಂಜಯ ತಳೇವಾಡ, ಸದುಗೌಡ ಪಾಟೀಲ ಸೇರಿದಂತೆ ಇತರರಿದ್ದರು.

ಬಿಜೆಪಿಯಿಂದ 7 ಮಂದಿಯ ಉಚ್ಚಾಟನೆ
ನಗರಸಭೆ ಚುನಾವಣೆಯಲ್ಲಿ‌ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ  ಹಿನ್ನೆಲೆ‌ಯಲ್ಲಿ ಬಿಜೆಪಿ‌ಯ 7 ಮಂದಿಯನ್ನು ಪಕ್ಷದ ಪ್ರಾಥಮಿಕ‌ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ ಹಾಗೂ ನಗರ ಘಟಕ ಅಧ್ಯಕ್ಷ ಕರಬಸಯ್ಯ ಹಿರೇಮಠ ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಮಣ್ಣ ತಳೇವಾಡ, ಪಕ್ಷದ ಮುಖಂಡರಾದ ಬಸವರಾಜ ಮಾನೆ, ಪುಂಡಲೀಕ ಭೋವಿ ಹಾಗೂ ಬಿಜೆಪಿ ಬೆಂಬಲಿತ ನಗರಸಭೆ ಸದಸ್ಯರಾದ ಪಾರ್ವತೆವ್ವ ಹರಗಿ, ಸುನಿತಾ ಭೋವಿ, ಸದಾಶಿವ ಜೋಶಿ ಹಾಗೂ ಸುರೇಶ್‌ ಕಾಂಬಳೆ‌ ಅವರನ್ನು ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.