Mudhola: ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ; ಬೃಹತ್‌ ಪ್ರತಿಭಟನೆ, ಬಂದ್‌

ಸ್ಥಳಕ್ಕೆ ಡಿಸಿ ಭೇಟಿ,  ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಆ.14ರಂದು ಸಭೆ, ಪ್ರತಿಭಟನೆ ಹಿಂಪಡೆದ‌ ರೈತರು

Team Udayavani, Aug 12, 2024, 7:02 PM IST

Mudhola

ಮುಧೋಳ (ಬಾಗಲಕೋಟೆ ಜಿಲ್ಲೆ): ಘಟಪ್ರಭಾ ನದಿ‌ ಪ್ರವಾಹಕ್ಕೆ ಹಾನಿಗೊಳಗಾದ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ನಡೆದ ಸ್ವಯಂ ಪ್ರೇರಿತ ಬಂದ್‌, ಪ್ರತಿಭಟನೆ ಯಶಸ್ವಿಯಾಯಿತು.

ಬೆಳಗ್ಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾದ  ಪ್ರತಿಭಟನಾ ಮೆರವಣಿಗೆ ಯಾದವಾಡ ವೃತ್ತಕ್ಕೆ ಆಗಮಿಸಿ ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿ ಸಂಪರ್ಕ‌ ಸ್ಥಗಿತಗೊಳಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.  ಈ ವೇಳೆ ಮಾತನಾಡಿದ ಬಸವಂತ ಕಾಂಬಳೆ, ಜನಪ್ರತಿನಿಧಿಗಳು ಜನರ ಸಮಸ್ಯೆ ಆಲಿಸುವ ಕೆಲಸ ಮಾಡಬೇಕು. ಪ್ರವಾಹದಿಂದ  ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರಿಗೆ ಎನ್‌ಡಿಆರ್‌ ಎಫ್‌   ಹಾಗೂ ಎಸ್‌ಡಿಆರ್‌ಎಫ್‌ ಪರಿಹಾರ ಪರಿಷ್ಕರಿಸಿ ಹೆಚ್ಚಿನ ಪರಿಹಾರ ಒದಗಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರವಾಹದಿಂದ ಜನರ ಬದುಕು ಬೀದಿಗೆ ಬಿದ್ದಿದೆ. ಜನಪ್ರತಿನಿಧಿಗಳು ನಮ್ಮ ಸಮಸ್ಯೆ ಬಗ್ಗೆ ವಿಧಾನಸೌಧದಲ್ಲಿ ಬೆಳಕು ಚೆಲ್ಲುವ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಸರ್ಕಾರ ಕೂಡಲೇ ನಮ್ಮ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ‌ ನಮ್ಮ ಹೋರಾಟ ಉಗ್ರರೂಪ‌ ಪಡೆಯಲಿದೆ ಎಂದು ಎಚ್ಚರಿಸಿದರು.

ರೈತ ಮುಖಂಡ ದುಂಡಪ್ಪ ಲಿಂಗರಡ್ಡಿ ಮಾತನಾಡಿ, ಮುಧೋಳ ತಾಲೂಕಿನಲ್ಲಿ‌ ಘಟಪ್ರಭಾ ಪ್ರವಾಹದಿಂದ ಪ್ರತಿವರ್ಷ ಬೆಳೆಹಾನಿಯುಂಟಾಗುತ್ತಿದೆ. ಸರ್ಕಾರ ನಮ್ಮ ತಾಲೂಕಿನ ಪ್ರವಾಹಪೀಡಿತ ಹಳ್ಳಿಗಳ ಮುಳುಗಡೆ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಪ್ರವಾಹದಲ್ಲಿ ಹಾನಿಯಾದ ಕಬ್ಬು ಬೆಳೆಗೆ ಎಕರೆಗೆ 1 ಲಕ್ಷ ರೂ. ಹಾಗೂ ಇತರೆ ಬೆಳೆಗೆ 50ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ವೆಂಕಣ್ಣ ಮಳಲಿ‌ ಮಾತನಾಡಿದರು.

ಜಿಲ್ಲಾಧಿಕಾರಿ ಭೇಟಿ; ಸರ್ವೇ ನಡೆಸಲು ಸೂಚನೆ: 
ರೈತರ ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ರೈತರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಶಾಶ್ವತ ಪರಿಹಾರಕ್ಕಾಗಿ ಮುಂದಿಟ್ಟರುವ ನಿಮ್ಮ‌ ಬೇಡಿಕೆ ಪರಿಗಣಿಸಿ ಮುಧೋಳ ತಾಲೂಕಿನ 34 ಹಳ್ಳಿಗಳ ಕುರಿತು ಸರ್ವೇ ನಡೆಸಿ ಯಾವ ಗ್ರಾಮಗಳು ಸ್ಥಳಾಂತರಕ್ಕೆ ಅರ್ಹವಾಗಿವೆ ಎಂಬ ಬಗ್ಗೆ ಸರ್ವೇ ನಡೆಸಿ ವರದಿ ಕೊಡಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು. ಇನ್ನು ಎನ್ ಡಿಆರ್ ಎಫ್ ಹಾಗೂ ಎಸ್ ಡಿಆರ್ ಎಫ್ ಪರಿಹಾರ ಪರಿಷ್ಕರಣೆ ಕಾರ್ಯ ಸರ್ಕಾರದ ಮಟ್ಟದಲ್ಲಾಗಬೇಕು. ಆದರೂ ನಿಮ್ಮ ಬೇಡಿಕೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಉಸ್ತುವಾರಿ ಸಚಿವರಿಗೆ ದೂರವಾಣಿ ಕರೆ: 
ಜಿಲ್ಲಾಧಿಕಾರಿಗಳ‌‌ ಮಾತಿಗೆ ತೃಪ್ತರಾಗದ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವರು ನಮ್ಮೊಂದಿಗೆ ಮಾತನಾಡಬೇಕು ಸಭೆ ನಡೆಸಿ‌ ನಮ್ಮ ಸಮಸ್ಯೆ ಆಲಿಸಬೇಕು ಎಂದು ಪಟ್ಟು‌ಹಿಡಿದರು. ಈ ವೇಳೆ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರೊಂದಿಗೆ ದೂರವಾಣಿ‌ ಮೂಲಕ‌ ಮಾತನಾಡಿ‌ ರೈತರ ಬೇಡಿಕೆ ಬಗ್ಗೆ ಮನವರಿಕೆ‌ ಮಾಡಿಕೊಟ್ಟರು.
ಸಚಿವರು ಆ.14ರಂದು ರೈತರೊಂದಿಗೆ ಸಭೆ ನಡೆಸುವ ಭರವಸೆ ನೀಡಿದರು. ಸಚಿವರ ಮಾತಿಗೆ ಒಪ್ಪಿಗೆ ನೀಡಿದ ಹೋರಾಟಗಾರರು ಆ.14ರವರೆಗೆ ಹೋರಾಟ ಮುಂದೂಡಿದರು.

ಸ್ವಯಂಪ್ರೇರಿತ ಬಂದ್ :
ನೆರೆ ಸಂತ್ರಸ್ತರ  ಪ್ರತಿಭಟನೆ ಹಿನ್ನೆಲೆ ನಗರದ ವ್ಯಾಪಾರಿಗಳು‌ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳ ಬಂದ್‌ ಮಾಡಿ‌  ಬೆಂಬಲ‌ ವ್ಯಕ್ತಪಡಿಸಿದರು. ರೈತರು ಹಾಗೂ ನೆರೆ ಸಂತ್ರಸ್ತರೊಂದಿಗೆ ವಿವಿಧ ಸಂಘಟನೆಗಳ‌ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

ಪಶು ವೈದ್ಯಾಧಿಕಾರಿ ವಿರುದ್ಧ ಆಕ್ರೋಶ :
ಜಿಲ್ಲಾಧಿಕಾರಿಗಳು ರೈತರ ಸಮಸ್ಯೆ ಆಲಿಸುವಾಗ ತಾಲೂಕು ಪಶು ವೈದ್ಯಾಧಿಕಾರಿ‌ ಗೋವಿಂದ ರಾಠೋಡ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಜಾನುವಾರುಗಳಿಗೆ ಸೂಕ್ತ ಮೇವು ನೀಡುವುದಿಲ್ಲ. ಹಲವಾರು ವರ್ಷಗಳಿಂದ ಮುಧೋಳದಲ್ಲಿಯೇ ಠಿಕಾಣಿ ಹೂಡಿರುವ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವೇ ಕ್ರಮಕ್ಕೆ‌ ಮುಂದಾಗುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ರಸ್ತೆಯಲ್ಲಿಯೇ ಅಡುಗೆ ತಯಾರಿ:
ಪ್ರತಿಭಟನೆಯಲ್ಲಿ‌ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಹೋರಾಟಗಾರರಿಗೆ ರಸ್ತೆಯಲ್ಲಿಯೇ ಅಡುಗೆ ತಯಾರಿಸಿ ಊಟಕ್ಕೆ‌ ಬಡಿಸಲಾಯಿತು. ನೂರಾರು ರೈತರು ಪ್ರತಿಭಟನಾ ಸ್ಥಳದಲ್ಲಿಯೇ ಊಟ ಮಾಡಿ ಮರಳಿ‌ ಪ್ರತಿಭಟನೆಯಲ್ಲಿ‌ ಪಾಲ್ಗೊಂಡರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ವಿನೋದ ಹತ್ತಳ್ಳಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಇದ್ದರು. ಸುಭಾಷ ಶಿರಬೂರ, ಹನಮಂತ ಅಡವಿ, ದುಂಡಪ್ಪ ಲಿಗರಡ್ಡಿ, ದುಂಡಪ್ಪ ಯರಗಟ್ಟಿ, ನಾಗಪ್ಪ ಅಂಬಿ, ಸದಪ್ಪ ತೇಲಿ, ಯಲ್ಲಪ್ಪ‌ ಲೋಗಾವಿ, ಮುತ್ತಪ್ಪ‌ ಕೋಮಾರ, ಸಂಗಣ್ಣ ಕಾತರಕಿ, ಪರಶು ನಿಗಡೆ, ಬಂಡು ಘಾಟಗೆ ಸೇರಿದಂತೆ ಇತರರು ಹೋರಾಟದಲ್ಲಿ‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.