Petrol pump; 1.7 ಕೋಟಿ ರೂಪಾಯಿ ವಂಚಿಸಿದ ಪೆಟ್ರೋಲ್‌ ಬಂಕ್‌ ಕ್ಲರ್ಕ್!‌ ಏನಿದು ಪ್ರಕರಣ

ಕಲಂ 420ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ

Team Udayavani, May 2, 2023, 12:16 PM IST

Petrol pump; 1.7 ಕೋಟಿ ರೂಪಾಯಿ ವಂಚಿಸಿದ ಪೆಟ್ರೋಲ್‌ ಬಂಕ್‌ ಕ್ಲರ್ಕ್!‌ ಏನಿದು ಪ್ರಕರಣ

ಮುಂಬೈ: ಪೆಟ್ರೋಲ್‌ ಬಂಕ್‌ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿಯೊಬ್ಬ ಮುಂಗಡ ತೆರಿಗೆ, ಜಿಎಸ್‌ ಟಿ, ವ್ಯಾಟ್‌, ಟಿಡಿಎಸ್‌ ಹಣದ ವಹಿವಾಟಿನಲ್ಲಿ ಸುಮಾರು 1.7 ಕೋಟಿ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ʼದಿ ಕೇರಳ ಸ್ಟೋರಿʼಗೆ ʼಎʼ ಸರ್ಟಿಫಿಕೇಟ್:‌10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

ಅಂಧೇರಿ ಪೆಟ್ರೋಲ್‌ ಬಂಕ್‌ ನಲ್ಲಿ ಕ್ಲರ್ಕ್‌ ಆಗಿ ಕೆಲಸ ಮಾಡುತ್ತಿದ್ದ ಅರುಣ್‌ ಮುದಲಿಯಾರ್‌ ಎಂಬ ವ್ಯಕ್ತಿ ಭಾರೀ ಮೊತ್ತದ ಹಣವನ್ನು ವಂಚಿಸಿರುವುದಾಗಿ ಪೆಟ್ರೋಲ್‌ ಬಂಕ್‌ ಮಾಲೀಕ ಸುರೇಶ್‌ ನಂದಾ (64ವರ್ಷ) ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿ ಅರುಣ್‌ ಮುದಲಿಯಾರ್‌ (35ವರ್ಷ) ಕಳೆದ ಎಂಟು ವರ್ಷಗಳಿಂದ ಪೆಟ್ರೋಲ್‌ ಬಂಕ್‌ ನಲ್ಲಿ ಕ್ಲರ್ಕ್‌ ಆಗಿ ದುಡಿಯುತ್ತಿದ್ದು, ಬಂಕ್‌ ಪಾಲುದಾರ ಎಂ.ವಂಕಾರ್‌ ರಾವ್‌ ಅವರಿಗೆ ಆನ್‌ ಲೈನ್‌ ಹಣಕಾಸು ವಹಿವಾಟಿನಲ್ಲಿ ನೆರವು ನೀಡುತ್ತಿದ್ದರು ಎಂದು ವರದಿ ತಿಳಿಸಿದೆ.

2017ರ ಸೆಪ್ಟೆಂಬರ್‌ ನಿಂದ 2022ರ ಮಾರ್ಚ್‌ ವರೆಗಿನ ಆನ್‌ ಲೈನ್‌ ವಹಿವಾಟಿನಲ್ಲಿ ಆರೋಪಿ ಮುದಲಿಯಾರ್‌, ತನ್ನ ಪತ್ನಿ ಮತ್ತು ಸಹೋದರಿಯ ಬ್ಯಾಂಕ್‌ ಖಾತೆಗಳಿಗೆ ಹಣವನ್ನು ವರ್ಗಾಯಿಸಿದ್ದ. ಏತನ್ಮಧ್ಯೆ ಪೆಟ್ರೋಲ್‌ ಬಂಕ್‌ ವಹಿವಾಟಿನ ಆಡಿಟ್‌ ಸಂದರ್ಭದಲ್ಲಿ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿರುವುದಾಗಿ ವರದಿ ವಿವರಿಸಿದೆ.

ಆರೋಪಿ ಅರುಣ್‌ ಮುದಲಿಯಾರ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 408 (ವಂಚನೆ) ಮತ್ತು ಕಲಂ 420ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

Another suspected monkeypox case detected in Kerala: 2nd case in the country

Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್‌ ಪತ್ತೆ: ದೇಶದಲ್ಲಿ 2ನೇ ಪ್ರಕರಣ

Kolkata incident; CBI Report Concerned: Supreme court

Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

Wholesale inflation at 4-month low: 1.31 per cent in August

Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್‌ನಲ್ಲಿ ಶೇ.1.31

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.