Mumbai: ಉದ್ಯೋಗದ ನೆಪದಲ್ಲಿ ಕಾಂಬೋಡಿಯಾಕ್ಕೆ ಮಾನವ ಕಳ್ಳಸಾಗಣೆ; ಮುಂಬೈ ಮಹಿಳೆ ಸೆರೆ!
ಉದ್ಯೋಗಾಕಾಂಕ್ಷಿಗಳಿಗೆ ಕಾನೂನುಬದ್ಧ ಉದ್ಯೋಗ ವೀಸಾ ನೀಡುವ ಭರವಸೆ ನೀಡುತ್ತಿದ್ದಳು
Team Udayavani, Sep 14, 2024, 4:29 PM IST
ಮಹಾರಾಷ್ಟ್ರ: ಅಂತಾರಾಷ್ಟ್ರೀಯ ಉದ್ಯೋಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಸೈಬರ್ ಕ್ರೈಂ ಪೊಲೀಸರು ಮುಂಬೈನ ಮಹಿಳೆಯೊಬ್ಬಳನ್ನು ಬಂಧಿಸಿರುವ ಘಟನೆ ನಡೆದಿದೆ.
ಉದ್ಯೋಗ ನೀಡುವ ಆಮೀಷದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಕಾಂಬೋಡಿಯಾಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ಚೆಂಬೂರ್ ನ ಪ್ರಿಯಾಂಕಾ ಶಿವಕುಮಾರ್ ಸಿದ್ಧು (30ವರ್ಷ) ಎಂಬಾಕೆಯನ್ನು ಬಂಧಿಸಲಾಗಿದೆ.
ತೆಲಂಗಾಣ ಸೈಬರ್ ಸೆಕ್ಯೂರಿಟಿ ಬ್ಯುರೋದ ಮಾಹಿತಿ ಪ್ರಕಾರ, ಪ್ರಿಯಾಂಕಾ ಉದ್ಯೋಗಾಕಾಂಕ್ಷಿಗಳಿಗೆ ಕಠಿನ ಷರತ್ತು ವಿಧಿಸುವ ಮೂಲಕ ಉದ್ಯೋಗ ನೀಡುವ ಭರವಸೆ ನೀಡುತ್ತಿದ್ದಳು ಎಂದು ತಿಳಿಸಿದೆ.
ಈಕೆ ಪರವಾನಿಗೆ ರಹಿತ ಏಜೆನ್ಸಿಯನ್ನು ಆರಂಭಿಸಿ, ಇದರ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಾನೂನುಬದ್ಧ ಉದ್ಯೋಗ ವೀಸಾ ನೀಡುವ ಭರವಸೆ ನೀಡುತ್ತಿದ್ದಳು ಎಂದು ವರದಿ ವಿವರಿಸಿದೆ.
ವರದಿಯ ಪ್ರಕಾರ, ಪ್ರಿಯಾಂಕಾ ವಂಚನೆ ಜಾಲದಲ್ಲಿ ಜಿತೇಂದ್ರ ಶಾ, ನಾರಾಯಣ ಹಾಗೂ ಕಾಂಬೋಡಿಯಾದಲ್ಲಿನ ಚೀನಾ ಮೂಲದ ಕಂಪನಿಯ ನಿರ್ದೇಶಕ ಶಾ ಪ್ರಮುಖ ರೂವಾರಿಯಾಗಿದ್ದಾರೆ ಎಂದು ತಿಳಿಸಿದೆ.
ಉದ್ಯೋಗಾವಕಾಶದ ವಿವರಕ್ಕಾಗಿ ಪ್ರಿಯಾಂಕಾ ಕಾಂಬೋಡಿಯಾಕ್ಕೆ ತೆರಳುತ್ತಿದ್ದು, ಪ್ರತಿ ಒಂದು ಉದ್ಯೋಗದ ಆಫರ್ ಗಾಗಿ ಆಕೆಗೆ 42,000 ರೂಪಾಯಿ ಕಮಿಷನ್ ನೀಡಲಾಗುತ್ತಿತ್ತು. ಹೀಗೆ ವಂಚನೆಗೈದಿರುವ ಈಕೆ ವಿರುದ್ಧ ತೆಲಂಗಾಣ ಸೈಬರ್ ಕ್ರೈಂ ಪೊಲೀಸರು, ಮಾನವ ಕಳ್ಳಸಾಗಣೆ ಮತ್ತು ಸೈಬರ್ ಕ್ರೈಂ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.