ಮುರುಗೇಶ್ ನಿರಾಣಿ ದಿಢೀರ್ ದೆಹಲಿ ಭೇಟಿ : ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಕುತೂಹಲ
Team Udayavani, Jul 6, 2021, 8:02 PM IST
![ಮುರುಗೇಶ್ ನಿರಾಣಿ ದಿಢೀರ್ ದೆಹಲಿ ಭೇಟಿ : ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಕುತೂಹಲ](https://www.udayavani.com/wp-content/uploads/2021/07/murugesh-nirani-620x453.jpg)
![ಮುರುಗೇಶ್ ನಿರಾಣಿ ದಿಢೀರ್ ದೆಹಲಿ ಭೇಟಿ : ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಕುತೂಹಲ](https://www.udayavani.com/wp-content/uploads/2021/07/murugesh-nirani-620x453.jpg)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ.
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಿರಾಣಿ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತ್ ಶಾ ಅವರೊಂದಿಗೆ ಮುರುಗೇಶ್ ನಿರಾಣಿ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದು, ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡುವ ವಿಚಾರದಲ್ಲಿ ಅಮಿತ್ ಶಾ ಮುರುಗೇಶ್ ನಿರಾಣಿ ಅವರ ಪರ ಒಲವು ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ, ಸಚಿವ ಮರುಗೇಶ್ ನಿರಾಣಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ತಾವು ವಯಕ್ತಿಕ ಕಾರಣಕ್ಕೆ ದೆಹಲಿಗೆ ಆಗಮಿಸಿದ್ದು, ಯಾವುದೇ ನಾಯಕರ ಭೇಟಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರ ಆಪ್ತ ಮೂಲಗಳ ಪ್ರಕಾರ ಸಂಜೆ ಪಕ್ಷದ ಹೈಕಮಾಂಡ್ ನಾಯಕರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಐಟಿ ಪೋರ್ಟಲ್ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವ ಅನುರಾಗ್ ಠಾಕೂರ್
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆಯಾದರೆ, ಲಿಂಗಾಯತ ಸಮುದಾಯದವರಿಗೆ ವಿಶೇಷವಾಗಿ ಪಂಚಮಸಾಲಿ ಸಮುದಾಯದವರಿಗೆ ನೀಡಬೇಕೆಂಬ ಒತ್ತಡ ಹೆಚ್ಚಿರುವುದರಿಂದ ಪಂಚಮಸಾಲಿ ಸಮುದಾಯದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಸಚಿವ ಮುರುಗೇಶ್ ನಿರಾಣಿ ವರ ಹೆಸರೂ ಕೇಳಿ ಬರುತ್ತಿರುವುದರಿಂದ ಅವರ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವುದರಿಂದ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಯಾವ ಸಂಸದರಿಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವದರ ಮೇಲೆಯೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗೆ ಪ್ರಾಧಾನ್ಯತೆ ದೊರೆಯಲಿದೆ ಎಂಬ ಮಾತುಗಳು ರಾಜ್ಯ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
![Instagram provides clues to finding suspect who had been on the run for 9 years](https://www.udayavani.com/wp-content/uploads/2025/02/inst-150x82.jpg)
![Instagram provides clues to finding suspect who had been on the run for 9 years](https://www.udayavani.com/wp-content/uploads/2025/02/inst-150x82.jpg)
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
![Devegowda](https://www.udayavani.com/wp-content/uploads/2025/02/Devegowda-150x90.jpg)
![Devegowda](https://www.udayavani.com/wp-content/uploads/2025/02/Devegowda-150x90.jpg)
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
![Sathish-rajanna-mahadevappa](https://www.udayavani.com/wp-content/uploads/2025/02/Sathish-rajanna-mahadevappa-150x90.jpg)
![Sathish-rajanna-mahadevappa](https://www.udayavani.com/wp-content/uploads/2025/02/Sathish-rajanna-mahadevappa-150x90.jpg)
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ