![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 12, 2024, 2:40 PM IST
ನಾಗಾಲ್ಯಾಂಡ್: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್ 28ರಂದು ಕೋಹಿಮಾದಲ್ಲಿ ನಡೆಸಲು ಉದ್ದೇಶಿಸಿದ್ದ “ಗೋ ಮಹಾಸಭಾ” ಸಭೆಗೆ ಅನುಮತಿ ನೀಡದಿರಲು ನಾಗಾಲ್ಯಾಂಡ್ ಸರ್ಕಾರ ನಿರ್ಧರಿಸಿರುವುದಾಗಿ ಹಿರಿಯ ಸಚಿವರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಜ್ಯೋರ್ತಿಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಅಧ್ಯಕ್ಷತೆಯಲ್ಲಿ ಸೆ.28ರಂದು ಗೋ ಮಹಾಸಭಾ ನಡೆಸಲು ನಿಗದಿಯಾಗಿಯಾಗಿತ್ತು. ನಾಗಾಲ್ಯಾಂಡ್ ನಲ್ಲಿ ಕ್ರಿಶ್ಚಿಯನ್ ಸಮುದಾಯ ಬಹುಸಂಖ್ಯೆಯಲ್ಲಿದ್ದು, ಬಹುತೇಕರು ಇಲ್ಲಿ ಗೋ ಮಾಂಸ ಸೇವಿಸುತ್ತಾರೆ.
ಮುಖ್ಯಮಂತ್ರಿ ನೈಫಿಯ್ಯು ರಿಯೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಕ್ತಾರ, ಸಚಿವ ಸಿಎಲ್ ಜಾನ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಸಂವಿಧಾನದ ಆರ್ಟಿಕಲ್ 371ಎ ಪ್ರಕಾರ ನಾಗಾಸ್ ಹಾಗೂ ನಾಗಾ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ ಆಚರಿಸಲು ಅವಕಾಶ ನೀಡಿರುವ ಅಂಶವನ್ನು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಜನರ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಗೋ ಮಹಾಸಭಾ ನಡೆಸಲು ಕ್ಯಾಬಿನೆಟ್ ಅನುಮತಿ ನೀಡಿಲ್ಲ. ಅಲ್ಲದೇ ಸಂಘಟಕರು ಕೂಡಾ ನಾಗಾಲ್ಯಾಂಡ್ ಗೆ ಬಂದು ಈ ಕಾರ್ಯಕ್ರಮ ಮಾಡದಿರುವಂತೆ ಸರ್ಕಾರ ಮುಂಚಿತವಾಗಿಯೇ ತನ್ನ ನಿರ್ಧಾರ ಪ್ರಕಟಿಸಿರುವುದಾಗಿ ವರದಿ ತಿಳಿಸಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.