ದೇಶದ ಸೇನಾ ಸಾಮರ್ಥ್ಯ ಹೆಚ್ಚಲಿ : ಸರ್ಜಿಕಲ್‌ ದಾಳಿಯಲ್ಲಿ ಯೋಧರ ಪಾತ್ರಕ್ಕೆ ಮೋದಿ ಶ್ಲಾಘನೆ


Team Udayavani, Nov 4, 2021, 10:00 PM IST

ದೇಶದ ಸೇನಾ ಸಾಮರ್ಥ್ಯ ಹೆಚ್ಚಲಿ : ಸರ್ಜಿಕಲ್‌ ದಾಳಿಯಲ್ಲಿ ಯೋಧರ ಪಾತ್ರಕ್ಕೆ ಮೋದಿ ಶ್ಲಾಘನೆ

ನೌಶೇರಾ/ನವದೆಹಲಿ : ಗಡಿ ಪ್ರದೇಶದಲ್ಲಿ ಮಿಲಿಟರಿ ಸೌಕರ್ಯ ಮೇಲ್ದರ್ಜೆಗೆ ಏರಿಸಿದ್ದರಿಂದ ದೇಶದ ವೀರ ಯೋಧರಿಗೆ ಅನುಕೂಲವಾಗಲಿದೆ. ಬದಲಾಗುತ್ತಿರುವ ಜಗತ್ತು ಹಾಗೂ ಯುದ್ಧ ಕೌಶಲ್ಯಗಳಿಗೆ ಅನುಗುಣವಾಗಿ ದೇಶವೂ ಕೂಡ ರಣತಂತ್ರಗಳನ್ನು ಬದಲು ಮಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಗುರುವಾರ ಯೋಧರ ಜತೆಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ಯೋಧರನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ.

ಹಿಂದಿನ ಸಂದರ್ಭಗಳಲ್ಲಿ ಬೇರೆ ಬೇರೆ ಸ್ಥಳಗಳ ನಡುವೆ ಸಂಪರ್ಕ ಸಾಧಿಸುವುದು ಕಷ್ಟವಾಗುತ್ತಿತ್ತು. ಸದ್ಯ ಲಡಾಖ್‌ನಿಂದ ಅರುಣಾಚಲ ಪ್ರದೇಶದ ವರೆಗೆ, ಜೈಸಲ್ಮೇರ್‌ನಿಂದ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಸಮೂಹದವರೆಗೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲಾಗಿದೆ ಎಂದು ಅವರು ಹೇಳಿ ದ್ದಾರೆ. 2016ರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಲಾಗಿದ್ದ ಸರ್ಜಿಕಲ್‌ ದಾಳಿಯಲ್ಲಿ ದೇಶದ ವೀರ ಯೋಧರು ವಹಿಸಿದ ಪಾತ್ರವನ್ನು ಪ್ರಸ್ತಾಪಿಸಿದ ಪ್ರಧಾನಿಯವರು ಅವರ ವೀರತ್ವವನ್ನು ಮುಕ್ತಕಂಠದಿಂದ ಶ್ಲಾ ಸಿದ್ದಾರೆ. ಸರ್ಜಿಕಲ್‌ ದಾಳಿಯ ಬಳಿಕ ಈ ಪ್ರದೇಶದಲ್ಲಿನ ಶಾಂತಿ-ನೆಮ್ಮದಿ ಕೆಡಿಸಲು ಪ್ರಯತ್ನಗಳು ನಡೆದರೂ, ವೀರ ಯೋಧರು ಅದಕ್ಕೆ ಅವಕಾಶ ಕೊಡಲಿಲ್ಲ ಎಂದಿದ್ದಾರೆ.

ಬೇಕು ಹೊಸ ಕೌಶಲ್ಯ :
ಜಗತ್ತಿನಲ್ಲಿ ಯುದ್ಧ ತಂತ್ರಗಳು ಬದಲಾವಣೆಯಾಗುತ್ತಿವೆ. ಅದಕ್ಕೆ ಪೂರಕವಾಗಿ ದೇಶದ ಸೇನಾಪಡೆಯೂ ಹೊಂದಿಕೊಂಡು ಅಂಥ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಅದಕ್ಕಾಗಿ ಗಡಿ ಪ್ರದೇಶಗಳಲ್ಲಿ ಬೇಕಾಗಿರುವ ಮೂಲ ಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲಾಗಿದೆ ಎಂದರು. “ಯೋಧರ ಹೋರಾಟ, ತ್ಯಾಗಕ್ಕೆ ಮೆಚ್ಚುಗೆ ಇದೆ. ನಿಮ್ಮ ಮೇಲೆ ಭಾರತ ಮಾತೆಯ ಸುರಕ್ಷಾ ಕವಚ ಇದೆ. ನೀವು ದೇಶದ ಗಡಿಗಳನ್ನು ಕಾಯುತ್ತಿರುವುದರಿಂದಲಾಗಿಯೇ ದೇಶದ ಜನರು ನೆಮ್ಮದಿಯಿಂದ ಇರುವಂತಾಗಿದೆ’ ಎಂದು ಹೇಳಿದರು.

ಎಲ್ಲರ ಹೊಣೆ:
ದೇಶ ಹೊಂದಿರುವ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ಎಲ್ಲರ ಹೊಣೆ. ನಾವು ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ದೇಶದ ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ (ಸ್ವಾವಲಂಬನೆ) ಹೊಂದುವುದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ ಪ್ರಧಾನಿ, ರಕ್ಷಣಾ ಬಜೆಟ್‌ನ ಶೇ.65ರಷ್ಟು ಪ್ರಮಾಣವನ್ನು ದೇಶದೊಳಗೆ ಬಳಕೆ ಮಾಡಲಾಗುತ್ತದೆ. ಸದ್ಯ ದೇಶದಲ್ಲಿಯೇ ರಕ್ಷಣೆಗೆ ಸಂಬಂಧಿಸಿದ 200 ವಸ್ತುಗಳನ್ನು ಉತ್ಪಾದಿಸಲಾಗುತ್ತದೆ ಎಂದರು. ಅದನ್ನು ಶೀಘ್ರವೇ ಇನ್ನ ಷ್ಟು ವಿಸ್ತರಿಸಲಾಗುತ್ತದೆ ಎಂದೂ ಹೇಳಿ ದ ರು. ಕಾರ್ಯಕ್ರಮದಲ್ಲಿ ಯೋಧರಿಗೆ ಪ್ರಧಾನಿಯವರೇ ಖುದ್ದಾಗಿ ಸಿಹಿ ವಿತರಿಸಿದರು. 2019ರ ಬಳಿಕ ಪ್ರಧಾನಿಯವರು ಗಡಿ ಭಾಗದಲ್ಲಿರುವ ಯೋಧರ ಜತೆಗೆ ದೀಪಾವಳಿ ಆಚರಿಸುತ್ತಿದ್ದಾರೆ.

ಯೋಧರ ಜತೆ ಹಬ್ಬ ಆಚರಿಸಿದ ಉತ್ತರಾಖಂಡ ರಾಜ್ಯಪಾಲ, ಸಿಎಂ
ಉತ್ತರಾಖಂಡದ ರಾಜ್ಯಪಾಲ ಲೆ.ಜ.(ನಿವೃತ್ತ) ಗುರ್ಮೀತ್‌ ಸಿಂಗ್‌ ಮತ್ತು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರೂ ಗಡಿಭಾಗದ ಗ್ರಾಮ ಮನಾದಲ್ಲಿರುವ ಯೋಧರ ಜತೆಗೆ ದೀಪಾವಳಿ ಆಚರಿಸಿಕೊಂಡಿದ್ದಾರೆ. ಚಮೋಲಿ ಜಿಲ್ಲೆಯಲ್ಲಿರುವ ಈ ಗ್ರಾಮ, ಚೀನಾ ಜತೆಗೆ ಗಡಿಯನ್ನು ಹೊಂದಿಕೊಂಡಿರುವ ದೇಶದ ಕೊನೆಯ ಭಾಗವಾಗಿದೆ. ಜತೆಗೆ ಬದರಿನಾಥ ಕ್ಷೇತ್ರದಿಂದ ಕೆಲವೇ ಕಿಲೋಮೀಟರ್‌ಗಳ ದೂರದಲ್ಲಿದೆ.

ಭಾರತ-ಪಾಕ್‌ ಸಿಹಿ ವಿನಿಮಯ
ಗುಜರಾತ್‌ ಮತ್ತು ರಾಜಸ್ಥಾನದ ಗಡಿ ಪ್ರದೇಶಗಳಲ್ಲಿ ಭಾರತದ ಬಿಎಸ್‌ಎಫ್ ಯೋಧರು ಮತ್ತು ಪಾಕಿಸ್ತಾನದ ರೇಂಜರ್‌ ಗಳು ದೀಪಾವಳಿ ನಿಮಿತ್ತ ಗುರುವಾರ ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ. ಹಬ್ಬಗಳ ಸಮಯದಲ್ಲಿ ಈ ರೀತಿ ಸಿಹಿ ವಿನಿಮಯ ಹಾಗೂ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಪರಸ್ಪರರ ನಡುವೆ ಸಾಮರಸ್ಯ, ಭಾತೃತ್ವ ಹೆಚ್ಚಿಸುತ್ತದೆ. ಅಲ್ಲದೇ, ಗಡಿಯುದ್ದಕ್ಕೂ ಸ್ನೇಹ ಪರ ಮತ್ತು ಶಾಂತಿಯುತ ವಾತಾವರಣ ನಿರ್ಮಾಣವಾಗುವುದಕ್ಕೂ ಸಹಾಯ ಮಾಡುತ್ತದೆ ಎಂದು ಬಿಎಸ್‌ಎಫ್ ಹೇಳಿದೆ.

ಇದನ್ನೂ ಓದಿ : ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಒತ್ತಾಯಿಸಿ ಮೌನ ಪ್ರತಿಭಟನೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.