National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಆಗಮಿಸಿದ ನಟನಿಂದ ಮೊದಲ ಪ್ರತಿಕ್ರಿಯೆ..
Team Udayavani, Oct 9, 2024, 10:22 PM IST
ಮಂಗಳೂರು: ದೈವಕ್ಕೆ, ದೈವ ನರ್ತಕರಿಗೆ ಹಾಗೂ ಪ್ರೋತ್ಸಾಹಿಸಿದ ಜನರಿಗೆ ಈ ಸಿನಿಮಾ ಪ್ರಶಸ್ತಿಯನ್ನು ಅರ್ಪಿಸುವೆ… ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪಡೆದ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಇದು.
ಹೊಸದಿಲ್ಲಿಯಲ್ಲಿ 70ನೇ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಮರಳಿದ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಂತಾರ ಈ ಭಾಗದಲ್ಲಿ ಮಾಡಿದ ಸಿನಿಮಾ, ದೈವದ ಬಗ್ಗೆ ಹಾಗೂ ದೈವ ನರ್ತಕರ ಬಗ್ಗೆ ಹೇಳುವ ಸಿನಿಮಾ ಆಗಿರುವುದರಿಂದ ಆ ಸಮುದಾಯಕ್ಕೆ ಸಿಗಬೇಕಾಗಿರುವ ಪ್ರಶಸ್ತಿ. ದೈವದ ಆಶೀರ್ವಾದ ಇಲ್ಲದಿದ್ದರೆ ಇಲ್ಲಿಯವರೆಗೆ ಬರುವುದು ಸಾಧ್ಯವಾಗುತ್ತಿರಲಿಲ್ಲ ಎಂದರು.
ರಾಷ್ಟ್ರೀಯ ಪ್ರಶಸ್ತಿ ಬರುವುದಾಗಿ ಅಂದುಕೊಂಡಿರಲಿಲ್ಲ. ಸಿನಿಮಾ ಜನರಿಗೆ ಇಷ್ಟವಾಗಲಿ ಎಂದು ಇಡೀ ತಂಡವಾಗಿ ಕೆಲಸ ಮಾಡಿದ್ದೇವೆ. ಜನರಿಗೆ ಇಷ್ಟವಾಗಿದ್ದೇ ನಮಗೆ ದೊಡ್ಡ ಪ್ರಶಸ್ತಿ. ಅದು ಜ್ಯೂರಿಗಳಿಗೂ ಇಷ್ಟವಾಗಿ, ಚಿತ್ರ ಪ್ರಶಸ್ತಿ ಹಂತಕ್ಕೆ ತಲುಪಿದ್ದು, ತಂಡವಾಗಿ ಕೆಲಸ ಮಾಡಿ ಇನ್ನಷ್ಟು ಉತ್ತಮ ಸಿನಿಮಾ ಮಾಡುವುದಕ್ಕೆ ಪ್ರೇರಣೆಯಾಗಲಿದೆ ಎಂದರು.
ಶ್ರದ್ಧೆಯಿಂದ ಚಿತ್ರ ನಿರ್ಮಿಸಿದ್ದೇನೆ:
ಕಾಂತಾರ -2 ಚಿತ್ರ ಶೂಟಿಂಗ್ ನಡೆಯುತ್ತಿದ್ದು, ಅತಿ ಶೀಘ್ರದಲ್ಲೇ ನಿರ್ಮಾಪಕರು ಸಿನಿಮಾ ಬಿಡುಗಡೆಯ ದಿನಾಂಕ ಪ್ರಕಟಿಸಲಿದ್ದಾರೆ ಎಂದರು. ದೈವಾರಾಧನೆಯ ಚಿತ್ರದ ವಸ್ತುವಾಗಿ ಬಳಸುವುದಕ್ಕೆ ಎದುರಾಗಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೆಯೂ ದೈವಾರಾಧನೆ ವಸ್ತುವಾಗಿರುವ ಚಿತ್ರಗಳು ಬಂದಿವೆ. ತುಳು ಸಿನಿಮಾಗಳಿಗೆ ಪ್ರಶಸ್ತಿ ಕೂಡ ಸಿಕ್ಕಿದೆ. ಕಾಂತಾರ ಜನಪ್ರಿಯತೆ ಪಡೆದಾಗ ದೈವಾರಾದನೆ ಅಪಹಾಸ್ಯ ಮಾಡುವ ರೀತಿಯ ಪ್ರಸಂಗಗಳು ವೇದಿಕೆಗಳಲ್ಲಿ ನಡೆದಾಗ ನನಗೂ ಬೇಸರವಾಗಿದೆ, ನಾನೂ ದೈವಾರಾಧನೆ ಮಾಡುವವನಾಗಿ ಶ್ರದ್ಧೆಯಿಂದ ಚಿತ್ರ ನಿರ್ಮಿಸಿದ್ದೇನೆ, ಅದನ್ನು ಚಿತ್ರದ ರೀತಿಯಲ್ಲಿ ನೋಡಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಲ್ವಿನ್ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Alakemajalu: ಹಗಲಲ್ಲೇ 2 ಮನೆಗಳಿಂದ ಕಳವು
Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್ ದೀಪದ ಕಂಬಕ್ಕೆ ಟಿಪ್ಪರ್ ಢಿಕ್ಕಿ
Vitla: ಸಾಲೆತ್ತೂರು; ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಜಖಂ
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Road Mishap: ಕಾಪು; ದಂಪತಿಗೆ ಬಸ್ ಢಿಕ್ಕಿ: ಪತಿ ಸಾವು
Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ!
Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ
UPI: ವಹಿವಾಟು ಮಿತಿ ಏರಿಕೆಗೆ ಆರ್ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.