Nature: ಸಮತೋಲಿತ ಅಭಿವೃದ್ಧಿಯೇ ಪ್ರಕೃತಿ ಉಳಿವಿಗೆ ಮುನ್ನುಡಿ

ಆಹಾರ ಸರಪಳಿಯ ಕೊಂಡಿ ಕಳಚುವ ಸ್ಥಿತಿ ನಿರ್ಮಾಣವಾಗಿದೆ

Team Udayavani, Oct 12, 2024, 4:17 PM IST

Nature: ಸಮತೋಲಿತ ಅಭಿವೃದ್ಧಿಯೇ ಪ್ರಕೃತಿ ಉಳಿವಿಗೆ ಮುನ್ನುಡಿ

ಇತ್ತೀಚಿನ ದಿನಗಳಲ್ಲಿ ಆಧುನಿಕತೆ ಬೆಳೆದಂತೆ, ತಂತ್ರಜ್ಞಾನ ಮುಂದುವರಿದಂತೆ ಮನುಷ್ಯ ಪರಿಸರದ ನಾಶಕ್ಕೆ ನೇರ ಕಾರಣವಾಗುತ್ತಿದ್ದಾನೆ. ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ, ನಾವು ಪ್ರಕೃತಿಯ ಒಂದು ಭಾಗ ಎಂಬ ಪೂರ್ಣಚಂದ್ರ ತೇಜಸ್ವಿ ಅವರ ಮಾತಿನಂತೆ, ಮಾನವ ಪ್ರಕೃತಿ ಮತ್ತು ಪರಿಸರದ ಅವಿಭಾಜ್ಯ ಅಂಗವಾಗಿದ್ದಾನೆ. ಇವುಗಳ ನಾಶದಿಂದ ಮಾತ್ರವೇ ಮಾನವ ಅಭಿವೃದ್ಧಿ ಸಾಧ್ಯ ಎಂದು ಭ್ರಮಿಸಿ ಕಳೆದ ಒಂದು ಶತಮಾನದಿಂದಲೂ ಮಾನವನ ಪರಿಸರದ ಮೇಲಿನ ಆಕ್ರಮಣದಿಂದ ಸಂಪತ½ರಿತವಾಗಿದ್ದ ನಾಡು ಕ್ರಮೇಣ ಮರುಭೂಮಿಯಾಗುವ ಹಂತಕ್ಕೆ ತಲುಪಿದೆ.

ಮಾನವ ಅರಣ್ಯವನ್ನು ಕೈಗಾರೀಕರಣ, ರಸ್ತೆ, ಅಣೆಕಟ್ಟು ನಿರ್ಮಾಣ, ರೆಸಾರ್ಟ್‌ ಸೇರಿದಂತೆ ಇನ್ನಿತರ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿಕೊಂಡ ಪರಿಣಾಮ ಮಾನವ-ವನ್ಯಜೀವಿ ಸಂಘರ್ಷ, ಗುಡ್ಡ ಕುಸಿತ, ಪ್ರವಾಹ, ಅತಿವೃಷ್ಟಿ, ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳಿಗೆ ತುತ್ತಾಗುತ್ತಿದ್ದಾನೆ. ಪರಿಸರವನ್ನು ನಾಶ ಮಾಡದೆ ಸುಸ್ಥಿರ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇಂದಿನ ದಿನಗಳಲ್ಲಿ ಅಗತ್ಯವಿದೆ. ಸರಕಾರಗಳು ಜಾರಿಗೆ ತಂದ ಪ್ರಕೃತಿಗೆ ಪೂರಕವಾದ ಯೋಜನೆಗಳ ಸದ್ಭಳಕೆ ಹಾಗೂ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಿವೆ.

ಪರಿಸರ ಮತ್ತು ಅಭಿವೃದ್ಧಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸಮತೋಲನ ನಿರ್ವಹಣೆಯೆಡೆಗೆ ಗಮನವಹಿಸಿ ಅಭಿವೃದ್ಧಿ ಚಟುವಟಿಕೆಗಳನ್ನು ಆರಂಭಿಸಿದಾಗ ಮಾತ್ರ ಮುಂದಿನ ಪೀಳಿಗೆಯ ಅಳಿವು ಉಳಿವು ಸಾಧ್ಯ. ಮುಂದಿನ ಪೀಳಿಗೆಗಳಿಗೆ ಸಂಪನ್ಮೂಲಗಳ ಕೊರತೆಯಾಗದ ರೀತಿಯಲ್ಲಿ ಪ್ರಸ್ತುತ ಮತ್ತು ಭವಿಷ್ಯದ ಅಗತ್ಯಗಳನ್ನು ಪೂರೈಸಲು ಮುಂದಾಗುವುದನ್ನೆ ಸುಸ್ಥಿರ ಅಭಿವೃದ್ಧಿ ಎನ್ನಲಾಗುತ್ತದೆ. ಇದರಲ್ಲಿ ಪರಿಸರ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಸಮಾನ ಪ್ರಮಾಣದಲ್ಲಿ ಒತ್ತು ನೀಡಲಾಗುತ್ತದೆ.

ಪ್ರಕೃತಿಯ ಸಂಪತ್ತನ್ನು ಬಳಸುವಾಗ, ಅಗತ್ಯವಿರುವಷ್ಟೇ ಬಳಸಬೇಕು. ಸಂರಕ್ಷಣೆಯ ಕಡೆಗೆ ಗಮನ ನೀಡಬೇಕು. ನವೀಕರಿಸಬಹುದಾದ ಶಕ್ತಿಗಳ ಬಳಕೆ, ಜೀವವೈವಿಧ್ಯತೆಯ ಸಂರಕ್ಷಣ ಮತ್ತು ನೀರಿನ ಸಂರಕ್ಷಣೆ ವಿಧಾನಗಳು ಸುಸ್ಥಿರ ಅಭಿವೃದ್ಧಿಯ ಪ್ರಮುಖ ಭಾಗವಾಗಿವೆ. ಈ ಎಲ್ಲ ಅಂಶಗಳು ಸರಕಾರ ಭಾಗವಾದರೆ ಪ್ರಕೃತಿ ಕಾಪಾಡುವ ನಿಟ್ಟಿನಲ್ಲಿ ಮಾನವನ ಪಾತ್ರವೇನು ಎಂಬುದು ಸಹಜ ಪ್ರಶ್ನೆ.

ಬದಲಾವಣೆಯ ನನ್ನಿಂದಲೇ ಪ್ರಾರಂಭವಾಗಲಿ ಎಂಬ ಆಲೋಚನೆಯಿಂದ ಪರಿಸರ ಸಂರಕ್ಷಣ ಕಾರ್ಯದಲ್ಲಿ ತೊಡಗಿದಾಗಲೇ ಇನ್ನೊಬ್ಬರು ಅದರಿಂದ ಸ್ಫೂರ್ತಿ ಪಡೆದು ತಾವು ತೊಡಗಿಸಿಕೊಳ್ಳಲು ಸಾಧ್ಯ. ಪರಿಶುದ್ಧ ಗಾಳಿ, ನೀರು, ಬೆಳಕು, ಆಹಾರ, ಗೊಬ್ಬರ, ಪೀಠೊಪಕರಣ ನೀಡುವ ಹಾಗೂ ಭೂ, ಜಲ ಸಂರಕ್ಷಣೆ ಮಾಡುವ ಮತ್ತು ದಿನೇದಿನೇ ಹೆಚ್ಚುತ್ತಿರುವ ತಾಪಮಾನದ ಪ್ರಮಾಣ ತಗ್ಗಿಸಲು ಸಹಾಯಕಾರಿಯಾಗಿರುವ ಗಿಡಮರಗಳು ಮಾನವನಗಿಂತ ಹೆಚ್ಚು ಉಪಯುಕ್ತವಾಗಿವೆ. ನಮ್ಮ ತಪ್ಪನ್ನು ನಾವೇ ಸರಿಪಡಿಸಿಕೊಳ್ಳಬೇಕಾಗಿದೆ. ನಾಶಪಡಿಸಿರುವ ಅರಣ್ಯವನ್ನು ಮತ್ತದೆ ಸ್ಥಿತಿಗೆ ತರುವಲ್ಲಿ ಸಮಾಜದ ಪ್ರತಿಯೊಬ್ಬರೂ ಮನೆಗೊಂದು ಮರ ಎಂಬಂತೆ ಸಸಿ ನೆಡಬೇಕು.

ಅಭಿವೃದ್ಧಿ ಚಟುವಟಿಕೆಗಳಿಂದ ಕಾಡು ನಾಶವಾಗಿ ಅಗತ್ಯ ಸೌಕರ್ಯವಿಲ್ಲದೆ ಅಳಿವಿನಂಚಿಗೆ ಸರಿಯುತ್ತಿರುವ ಪ್ರಾಣಿ ಪಕ್ಷಿಗಳ ಪ್ರಭೇದಗಳ ಉಳಿವು ಅಗತ್ಯವಾಗಿದೆ. ಆಹಾರ ಸರಪಳಿಯ ಕೊಂಡಿ ಕಳಚುವ ಸ್ಥಿತಿ ನಿರ್ಮಾಣವಾಗಿದೆ. ಅವುಗಳಿದ್ದರೆ ನಾವು ಎಂಬ ಪರಿಜ್ಞಾನ ಪ್ರತಿಯೊಬ್ಬರಲ್ಲೂ ಮೂಡಬೇಕು. ಇಂಥ ಕ್ರಮಗಳನ್ನು ಅನುಸರಿಸುವ ಮೂಲಕ, ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಶುದ್ಧ ಪರಿಸರದ ವ್ಯವಸ್ಥೆಯನ್ನು ಒದಗಿಸಲು ಸಾಧ್ಯ.

*ವಿಜಯಕುಮಾರ ಹಿರೇಮಠ, ಗದಗ

ಟಾಪ್ ನ್ಯೂಸ್

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ

ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಗೆ ಹಲ್ಲೆ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಮೇಲೆ ಹಲ್ಲೆ

1-a-vishwa

Megastar Chiranjeevi;ವಿಶ್ವಂಭರ ಟೀಸರ್ ಬಿಡುಗಡೆ: ಸದ್ಯದ ಟ್ರೆಂಡ್ ಗೋಚರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ

Nawanagar: ಶ್ರೀಮಂತ ರಾಜಮನೆತನದ ಉತ್ತರಾಧಿಕಾರಿಯಾದ ಟೀಂ ಇಂಡಿಯಾ ಮಾಜಿ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life: ಇತರರನ್ನು ಮೆಚ್ಚಿಸುವ ವ್ಯರ್ಥ ಪ್ರಯತ್ನವೇಕೆ?

Life: ಇತರರನ್ನು ಮೆಚ್ಚಿಸುವ ವ್ಯರ್ಥ ಪ್ರಯತ್ನವೇಕೆ?

11-uv-fusion

Life: ಬಯಸಿದಂತೆಲ್ಲಾ ಇರುವುದಿಲ್ಲ ಬದುಕು

Life: ಅನುಭವಗಳು ಬದುಕನ್ನು ಬದಲಾಯಿಸಬಲ್ಲದು…ಒಂದು ಅಭ್ಯಂಜನದ ಕಥನ!

Life: ಅನುಭವಗಳು ಬದುಕನ್ನು ಬದಲಾಯಿಸಬಲ್ಲದು…ಒಂದು ಅಭ್ಯಂಜನದ ಕಥನ!

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Forest: ಕಾಡುದಾರಿ ಸೃಷ್ಟಿಸುವವರಾಗೋಣ ಕಾಲುದಾರಿಯಲ್ಲಿ ಸಾಗುವವರಲ್ಲ…

Forest: ಕಾಡುದಾರಿ ಸೃಷ್ಟಿಸುವವರಾಗೋಣ; ಕಾಲುದಾರಿಯಲ್ಲಿ ಸಾಗುವವರಲ್ಲ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Hiriydaka: ಹಿರಿಯಡಕ ನಿವಾಸಿ, ಬೆಂಗಳೂರು ಉದ್ಯಮಿ ತೀರ್ಥಳ್ಳಿಯಲ್ಲಿ ಆತ್ಮಹತ್ಯೆ

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ

ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.