Navarathri Holiday: ಸರಣಿ ರಜೆ: ಮಲ್ಪೆ ಬೀಚ್, ಸೈಂಟ್ಮೇರೀಸ್ನಲ್ಲಿ ಜನಸಾಗರ
Team Udayavani, Oct 13, 2024, 7:20 AM IST
ಮಲ್ಪೆ: ನವರಾತ್ರಿ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ, ಇನ್ನೊಂದಡೆ ಸರಕಾರಿ, ಖಾಸಗಿ ಸಂಸ್ಥೆಗೆ ನವಮಿ, ವಿಜಯದಶಮಿ, ಎರಡನೇ ಶನಿವಾರ, ರವಿವಾರ ಸರಣಿ ರಜೆ ಇರುವುದರಿಂದಾಗಿ ಜನರು ಕುಟುಂಬ ಸಮೇತರಾಗಿ ಪ್ರವಾಸ ಕೈಗೊಂಡಿದ್ದು, ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಕಂಡು ಬರುತ್ತಿದೆ.
3 ದಿನಗಳಿಂದ ಅಪಾರ ಸಂಖ್ಯೆಯಲ್ಲಿ ಮಲ್ಪೆ ಬೀಚ್ ಮತ್ತು ಸೈಂಟ್ಮೇರಿಸ್ ದ್ವೀಪಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ಮುಂಜಾನೆ 6 ಗಂಟೆಯಿಂದ ನೂರಾರು ಪ್ರವಾಸಿ ವಾಹನಗಳು ಮಲ್ಪೆ ಕಡೆಗೆ ಆಗಮಿಸುತ್ತಿದ್ದು, ಜನದಟ್ಟಣೆ ಕಂಡು ಬರುತ್ತಿತ್ತು. ಇದರಿಂದಾಗಿ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗಿತ್ತು. ಮುಖ್ಯ ಬೀಚ್ನ ರಸ್ತೆ ಬದಿಗಳಲ್ಲಿ ಅಲ್ಲದೆ, ದಕ್ಷಿಣ ದಿಕ್ಕಿನ ಶಿವಪಂಚಾಕ್ಷರಿ ಭಜನ ಮಂದಿರ ಕಡಲತೀರದ ಇಂಟರ್ಲಾಕ್ ರಸ್ತೆಯಿಂದ ಹನುಮಾನ್ ವಿಠೊಬ ಭಜನ ಮಂದಿರದ ರಸ್ತೆಯ ಎರಡೂ ಕಡೆ ಪಾರ್ಕ್ ಮಾಡಲಾಗಿತ್ತು.
ವಸತಿ ಗೃಹಗಳಿಗೆ ಭಾರೀ ಬೇಡಿಕೆ
ಸಾಲು ರಜೆಯ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ಧಾರ್ಮಿಕ ಕೇಂದ್ರ, ಪ್ರವಾಸಿತಾಣಗಳ ನಗರಗಳಲ್ಲಿ ವಸತಿ ಗೃಹಗಳ ಸಮಸ್ಯೆ ಎದುರಾಗಿತ್ತು. ಕೆಲವರು ತಿಂಗಳ ಮೊದಲೇ ಹೋಮ್ ಸ್ಟೇ ವಸತಿಗೃಹ, ರೆಸಾರ್ಟ್ಗಳಲ್ಲಿ ಕೊಠಡಿಯನ್ನು ಕಾದಿರಿಸಿಕೊಂಡಿದ್ದರೆ, ಕೆಲವರು ರೂಮಿಗಾಗಿ ಪರದಾಡುವ ಸ್ಥಿತಿ ಎದುರಾಗಿತ್ತು.
ಟ್ರಾಫಿಕ್ ಜಾಮ್
ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಎದುರಿಸುತ್ತಿರುವ ಮಲ್ಪೆ ರಸ್ತೆಯಲ್ಲಿ ಈಗ ಪ್ರವಾಸಿ ಸಂಚಾರದ ವಾಹನದಿಂದಾಗಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗಿ ಸಮಸ್ಯೆ ಮತ್ತಷ್ಟು ಉಲ್ಬಣಿಸಿತ್ತು. 3 -4 ದಿನಗಳಿಂದ ಆಗಾಗ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.
ಜಿಟಿ ಜಿಟಿ ಮಳೆಗೂ ಪ್ರವಾಸಿಗರ ದಂಡು
ಶನಿವಾರ ಬೆಳಗ್ಗೆ ಇದ್ದ ಬಿಸಿಲಿನೊಂದಿಗಿನ ಶುಭ್ರ ವಾತವಾರಣ ಮಧ್ಯಾಹ್ನ 12ರ ಬಳಿಕ ಮಳೆಗೆ ಪರಿವರ್ತನೆಗೊಂಡಿದೆ. ಸಂಜೆಯ ವರೆಗೂ ನಿರಂತರವಾಗಿ ಜಿಟಿ ಜಿಟಿ ಮಳೆ ಬಂದರೂ ಮಲ್ಪೆ ಬೀಚ್ಗೆ ಒಂದೇ ಸವನೆ ಹರಿದು ಬರುತ್ತಿರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿಲ್ಲ. ಕೆಲವರು ಸುರಿಯುವ ಮಳೆಗೂ ಮರಳ ದಂಡೆಯಲ್ಲಿ ಕುಳಿತು ಸಮುದ್ರದ ಸೌಂದರ್ಯವನ್ನು ವೀಕ್ಷಿಸಿದರೆ, ಬಹುತೇಕ ಮಂದಿ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Martin Movie Review: ಆ್ಯಕ್ಷನ್ ಅಬ್ಬರದಲ್ಲಿ ಮಾರ್ಟಿನ್ ಮಿಂಚು
Baba Siddique Case: ಲಾರೆನ್ಸ್ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್ ಗಳ ಬಂಧನ
Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?
Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ
Women’s T20 World Cup: ಭಾರತಕ್ಕಿಂದು ಆಸೀಸ್ವಿರುದ್ಧ ನಿರ್ಣಾಯಕ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.