ನೀಟ್ ಪಿಜಿ 2021ರ ಕೌನ್ಸೆಲಿಂಗ್ ವಿಳಂಬ : ರಸ್ತೆಗಿಳಿದು ಪ್ರತಿಭಟನೆಗೆ ಮುಂದಾದ ವೈದ್ಯರು
Team Udayavani, Dec 28, 2021, 11:15 PM IST
ನವದೆಹಲಿ: ನೀಟ್ ಪಿಜಿ 2021ರ ಕೌನ್ಸೆಲಿಂಗ್ ವಿಳಂಬವಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಸತಿ ವೈದ್ಯರು ರಸ್ತೆಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದ್ದಾರೆ. ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಪ್ರತಿಭಟನಾನಿರತ ವೈದ್ಯರೊಂದಿಗೆ ಸಂಧಾನಕ್ಕೆ ಯತ್ನಿಸಿದರಾದರೂ ಅದು ತೃಪ್ತಿ ತಂದಿಲ್ಲ ಎಂದು ವಸತಿ ವೈದ್ಯರ ಅಸೋಸಿಯೇಷನ್(ಎಫ್ಒಆರ್ಡಿಎ) ತಿಳಿಸಿದೆ.
ಎಫ್ಒಆರ್ಡಿಎ ಸದಸ್ಯರೊಂದಿಗೆ ಮಾತನಾಡಿರುವ ಸಚಿವರು, “ಸುಪ್ರೀಂ ಕೋರ್ಟ್ನ ವಿಚಾರಣೆಯಲ್ಲಿರುವ ಕಾರಣ ಕೌನ್ಸೆಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಕೌನ್ಸೆಲಿಂಗ್ ನಡೆಸಲಿದ್ದೇವೆ. ಹಾಗಾಗಿ ಈಗ ಹೋರಾಟ ಕೈಬಿಡಿ’ ಎಂದು ಮನವಿ ಮಾಡಿದ್ದಾರೆ.
ಆದರೆ ಸೋಮವಾರ ಪ್ರತಿಭಟನಾನಿರತ ವೈದ್ಯರನ್ನು ಬಂಧಿಸಿರುವ ವಿಚಾರದಲ್ಲಿ ಪೊಲೀಸರು ಲಿಖೀತ ಕ್ಷಮೆ ಕೇಳಬೇಕು ಹಾಗೂ ನೀಟ್ ಕೌನ್ಸೆಲಿಂಗ್ ಶೀಘ್ರವೇ ಮಾಡುವ ಬಗ್ಗೆಯೂ ಲಿಖೀತ ಭರವಸೆ ಕೊಡಬೇಕು ಎಂದು ಎಫ್ಒಆರ್ಡಿಎ ಒತ್ತಾಯಿಸಿದೆ.
ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. “ಒಂದೆಡೆ ಒಮಿಕ್ರಾನ್ ಹೆಚ್ಚಾಗುತ್ತಿದೆ, ಇನ್ನೊಂದೆಡೆ ವೈದ್ಯರು ಹೋರಾಟದಲ್ಲಿದ್ದಾರೆ. ವೈದ್ಯರು ಆಸ್ಪತ್ರೆಯಲ್ಲಿರಬೇಕೇ ಹೊರತು ರಸ್ತೆಯಲ್ಲಲ್ಲ. ಹಾಗಾಗಿ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ’ ಎಂದು ಪತ್ರದಲ್ಲಿ ಕೋರಿದ್ದಾರೆ.
ಇದನ್ನೂ ಓದಿ : ಎಸ್ಪಿಯದ್ದು ಭ್ರಷ್ಟಾಚಾರದ “ಸುಗಂಧ’! ಎಸ್ಪಿ ವಿರುದ್ಧ ಮೋದಿ ವಾಗ್ಧಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Hagga movie review: ರೋಚಕ ರಹಸ್ಯದ ಕಥಾನಕ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.