![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 28, 2021, 6:50 AM IST
ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯ ಪಠ್ಯಕ್ರಮ ಸೆಪ್ಟಂಬರ್ ಮೊದಲ ವಾರದಲ್ಲಿ ಸಿದ್ಧವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಹೇಳಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಪತ್ರಿಕಾ ಸಂಪಾದಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ನಮ್ಮ ರಾಜ್ಯದಲ್ಲೇ ಮೊದಲು ಎನ್ಇಪಿ ಅನುಷ್ಠಾನ ಆಗಬೇಕು ಎಂಬ ತರಾತುರಿ ಇಲ್ಲ. ಕೋವಿಡ್ ಸವಾಲುಗಳ ಮಧ್ಯೆ ಅನುಷ್ಠಾನ ಕಾರ್ಯ ಸದ್ದಿಲ್ಲದೆ ನಡೆದಿದೆ. ಎನ್ಇಪಿ ಅನುಷ್ಠಾನಕ್ಕೆ 15 ವರ್ಷಗಳ ಕಾಲಾವಕಾಶವಿದೆ. ಆದರೆ ರಾಜ್ಯ ದಲ್ಲಿ 10 ವರ್ಷಗಳೊಳಗೆ ಇದನ್ನು ಅನುಷ್ಠಾನಗೊಳಿಸಬೇಕು ಎಂಬ ಗುರಿ ನಮ್ಮದು. ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರೀಕರಿಸಿ ಹೊಸ ಶೈಕ್ಷಣಿಕ ನೀತಿ ರೂಪಿಸಲಾಗಿದೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆ
ಎನ್ಇಪಿ ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆಗಳನ್ನು ನೀಡಲಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದರು.
ಪೂರ್ವ ಪ್ರಾಥಮಿಕ ಹಂತದಲ್ಲಿ ಎನ್ಇಪಿ ಅನುಷ್ಠಾನ ಸಂಬಂಧ ಕಲಬುರಗಿಯಲ್ಲಿ ಪ್ರಾಯೋಗಿಕ ತರಗತಿ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.
ಅತಿಥಿ ಉಪನ್ಯಾಸಕರ ನೇಮಕ
ರಾಜ್ಯದಲ್ಲಿ ಈಗಾಗಲೇ ಸ್ಮಾರ್ಟ್ ಕ್ಲಾಸ್ ರೂಮ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 8 ಸಾವಿರ ಶಿಕ್ಷಕರ ಅಗತ್ಯವಿದೆ. 17 ಸಾವಿರ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ನಡೆಯಲಿದೆ. ಶಿಕ್ಷಣ ವ್ಯವಸ್ಥೆಯನ್ನು ತರಗತಿಯ ಕೋಣೆಯಾಚೆ ಒಯ್ಯಬೇಕು ಎಂಬುದು ನಮ್ಮ ಆಶಯ. ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ತರಬೇತಿ ನೀಡಲಾಗುತ್ತಿದ್ದು, ವಿ.ವಿ. ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ನೇಮಿಸಲಾಗಿದೆ ಎಂದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.