ಬಿಟ್ಟೆನೆಂದರೂ ಬಿಡದು, ಈ “ಅಘೋರ’ ಕರ್ಮಫ‌ಲ!

ಸಿನಿಮಾ ಆಡಿಯನ್ಸ್‌ಗೆ ಸಸ್ಪೆನ್ಸ್‌-ಥ್ರಿಲ್ಲರ್‌-ಹಾರರ್‌ ಜೊತೆಗೆ ಬೇರೊಂದು ಅನುಭವ ಕೊಡುತ್ತದೆ

Team Udayavani, Feb 18, 2022, 12:40 PM IST

ಬಿಟ್ಟೆನೆಂದರೂ ಬಿಡದು, ಈ “ಅಘೋರ’ ಕರ್ಮಫ‌ಲ!

ಕರ್ಮಫ‌ಲಗಳ ಬಗ್ಗೆ ನೀವೆಲ್ಲ ಪುರಾಣ-ಪುಣ್ಯಕಥೆಗಳಲ್ಲಿ ಕೇಳಿರುತ್ತೀರಿ. ಜಗತ್ತಿನಲ್ಲಿ ಹುಟ್ಟಿದ ಪ್ರತಿ ಜೀವಿಯೂ ಅದರ ಕರ್ಮಫ‌ಲವನ್ನು ಅನುಭವಿಸಲೇ ಬೇಕು ಎಂಬುದು ಕರ್ಮಫ‌ಲ ಸಿದ್ಧಾಂತ. ಈಗ ಇದೇ ಕರ್ಮಫ‌ಲ ವಿಷಯವನ್ನು ಸಿನಿಮಾ ರೂಪದಲ್ಲಿ ತೆರೆಮೇಲೆ ಹೇಳಲು ಹೊರಟಿದೆ “ಅಘೋರ’ ಚಿತ್ರತಂಡ.

ಸಾಮಾನ್ಯವಾರ “ಅಘೋರ’ ಅಂದ್ರೆ, ಬಹುತೇಕರಿಗೆ ಅದರ ಘೋರ ಕಲ್ಪನೆಗಳು ಕಣ್ಮುಂದೆ ಬರುತ್ತದೆ. ಅಂತೆಯೇ ಈ ಸಿನಿಮಾದಲ್ಲೂ ಕೂಡ ಚಿತ್ರತಂಡ, ಪ್ರೇಕ್ಷಕರಿಗೆ ತೆರೆಮೇಲೆ ಸಾವಿನ ಕೊನೆಯಲ್ಲಿ ಎದುರಾಗುವ ಅಂಥದ್ದೇ ಒಂದು ಘೋರ ದರ್ಶನವನ್ನು ಮಾಡಿಸಲಿದೆಯಂತೆ.

ಇಂಥದ್ದೊಂದು ವಿಭಿನ್ನ ಪ್ರಯತ್ನದ ಬಗ್ಗೆ ಮಾತನಾಡುವ ನಾಯಕ ಕಂ ನಿರ್ಮಾಪಕ ಪುನೀತ್‌, “ಪ್ರತಿಯೊಬ್ಬರ ಬದುಕಿನಲ್ಲೂ ನಡೆಯುವ ಬಹುತೇಕ ಘಟನೆಗಳನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಇಂಥ ಎಲ್ಲ ಅನಿರೀಕ್ಷಿತ, ಅಚ್ಚರಿ, ಆಘಾತದ ಘಟನೆಗಳೆಲ್ಲದಕ್ಕೂ ಹಿಂದಿನ ಜನ್ಮದ ಕರ್ಮಫ‌ಲ ಕಾರಣ. ನಾವು ಹಿಂದೆ ಏನು ಮಾಡಿರುತ್ತೇವೋ, ಅದನ್ನ ಈ ಜನ್ಮದಲ್ಲಿ ಅನುಭವಿಸಲೇ ಬೇಕು. ಇದೇ ಲೈನ್‌ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಇಡೀ ಸಿನಿಮಾ ಆಡಿಯನ್ಸ್‌ಗೆ ಸಸ್ಪೆನ್ಸ್‌-ಥ್ರಿಲ್ಲರ್‌-ಹಾರರ್‌ ಜೊತೆಗೆ ಬೇರೊಂದು ಅನುಭವ ಕೊಡುತ್ತದೆ’ ಎನ್ನುತ್ತಾರೆ.

“ಕರ್ಮಫ‌ಲ ಯಾರನ್ನೂ ಬಿಡುವುದಿಲ್ಲ. ರಾಮಾಯಣದಲ್ಲಿ ಶ್ರೀರಾಮ ತನಗೇನೂ ತೊಂದರೆ ಮಾಡದಿದ್ದರೂ, ವಾಲಿಯನ್ನು ಬಾಣದಿಂದ ಕೊಲ್ಲುತ್ತಾನೆ. ಅದೇ ವಾಲಿ, ದ್ವಾಪರ ಯುಗದಲ್ಲಿ ಬೇಡನಾಗಿ ಬಂದು ಶ್ರೀರಾಮನ ಮತ್ತೂಂದು ಅವತಾರವಾಗಿರುವ ಶ್ರೀಕೃಷ್ಣನ ಹೆಬ್ಬೆರಳಿಗೆ ಬಾಣದಿಂದ ಹೊಡೆದು ಕೊಲ್ಲುತ್ತಾನೆ. ಅವತಾರ ಪುರುಷರಾಗಿರುವ ದೇವರನ್ನೇ ಕರ್ಮಫ‌ಲಗಳು ಬಿಡದಿರುವಾಗ, ಇನ್ನು ಮನುಷ್ಯರನ್ನು ಬಿಡಲು ಸಾಧ್ಯವೇ?’ ಎಂಬುದು ಚಿತ್ರತಂಡದ ಪ್ರಶ್ನೆ. “ಇಂಥದ್ದೇ ಪ್ರಶ್ನೆ ಮತ್ತು ಅದಕ್ಕೆ ಉತ್ತರ ಹುಡುಕುವ ಪ್ರಯತ್ನ “ಅಘೋರ’ ಸಿನಿಮಾದಲ್ಲಾಗಿದೆ’ ಎಂಬುದು ಚಿತ್ರತಂಡದ ಮಾತು.

“ಅಘೋರ’ ಚಿತ್ರದಲ್ಲಿ ಅವಿನಾಶ್‌, ಪುನೀತ್‌, ಅಶೋಕ್‌, ದ್ರವ್ಯಾ ಶೆಟ್ಟಿ, ರಚನಾ ದಶರಥ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಮೋಕ್ಷ ಸಿನಿಮಾಸ್‌’ ಬ್ಯಾನರ್‌ನಲ್ಲಿ ಪುನೀತ್‌ ಗೌಡ ನಿರ್ಮಿಸಿರುವ “ಅಘೋರ’ ಚಿತ್ರಕ್ಕೆ ಎನ್‌. ಎಸ್‌ ಪ್ರಮೋದ್‌ ರಾಜ್‌ ನಿರ್ದೇಶನವಿದೆ. ಒಟ್ಟಾರೆ ರಿಲೀಸ್‌ಗೂ ಮೊದಲೇ ಒಂದಷ್ಟು ಕುತೂಹಲ ಮೂಡಿಸಿರುವ “ಅಘೋರ’ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಇದೇ ಮಾರ್ಚ್‌ 4ಕ್ಕೆ ಗೊತ್ತಾಗಲಿದೆ.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.