ಪ್ರಮುಖ ಬ್ರಾಂಡ್‍ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ‘ನಥಿಂಗ್‍’ ನ ಹೊಸ ಫೋನ್‍


Team Udayavani, Mar 26, 2022, 7:42 PM IST

ಪ್ರಮುಖ ಬ್ರಾಂಡ್‍ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ನಥಿಂಗ್‍ನ ಹೊಸ ಫೋನ್‍

ಬೆಂಗಳೂರು: ಒನ್‍ ಪ್ಲಸ್‍ ಕಂಪೆನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪೆನಿ ಶೀಘ್ರವೇ ತನ್ನ ಮೊಟ್ಟ ಮೊದಲ ಸ್ಮಾರ್ಟ್ ಫೋನ್‍ ಅನ್ನು ಹೊರತರಲಿದ್ದು, ಸ್ಮಾರ್ಟ್‍ ಫೋನ್‍ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಎರಡು ವರ್ಷಗಳ ಹಿಂದೆ ಅದರಿಂದ ಹೊರ ಬಂದಿದ್ದ ಕಾರ್ಲ್ ಪೇ ಬಳಿಕ ನಥಿಂಗ್‍ ಎಂಬ ಹೊಸ ಕಂಪೆನಿ ಹುಟ್ಟುಹಾಕಿದ್ದರು. ಆ ಬಳಿಕ ಒಂದೇ ವರ್ಷದಲ್ಲಿ ನಥಿಂಗ್‍ ನ ಮೊದಲ ಉತ್ಪನ್ನವಾಗಿ ಟ್ರೂ ವೈರ್ ಲೆಸ್‍ ಇಯರ್ ಬಡ್‍  (1) ಅನ್ನು 2021ರ ಜುಲೈ ತಿಂಗಳಲ್ಲಿ ಹೊರ ತಂದಿದ್ದರು.

ಗ್ಯಾಜೆಟ್‍ ಪ್ರೇಮಿಗಳು ನಥಿಂಗ್ ಒಂದು ಆಡಿಯೋ ಕಂಪೆನಿ ಎಂದೇ ತಿಳಿದಿದ್ದರು. ಕೆಲ ತಿಂಗಳ ಹಿಂದೆ ಸ್ಮಾರ್ಟ್‍ ಫೋನ್‍ ಹೊರತರುವ ಸಣ್ಣದೊಂದು ಕ್ಲೂ ನೀಡಿದ್ದ ಸಿಇಓ ಕಾರ್ಲ್ ಇದೀಗ ನೂತನ ಫೋನ್‍ ಹೊರತರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಲಂಡನ್ ನಿಂದ ವರ್ಚುವಲ್‍ ಕಾರ್ಯಕ್ರಮದ ಮೂಲಕ ಮಾತನಾಡಿದ ಅವರು, ಕ್ವಾಲ್‍ ಕಾಂ ಸ್ನಾಪ್‍ಡ್ರಾಗನ್‍ ಸಹಭಾಗಿತ್ವದಲ್ಲಿ ಮುಂಬರುವ ಬೇಸಿಗೆಯೊಳಗೆ ಫೋನ್‍ (1) ಎಂಬ ಹೊಸ ಸ್ಮಾರ್ಟ್ ಫೋನ್‍ ಹೊರತರುತ್ತಿರುವುದಾಗಿ ಪ್ರಕಟಿಸಿದರು. ನಥಿಂಗ್‍ ಆಡಿಯೋ ಕಂಪೆನಿಯಲ್ಲ ಎಂದು ಹೇಳುವ ಮೂಲಕ, ಅದು ಆಡಿಯೋಗೆ ಸೀಮಿತವಾದ ಕಂಪೆನಿ ಎಂದು ತಿಳಿದಿದ್ದವರಿಗೆ ತಿರುಗೇಟು ನೀಡಿದರು.

ನಥಿಂಗ್‍ ಫೋನ್‍ (1)ನ ಕೆಲ ವೈಶಿಷ್ಟ್ಯಗಳು:
1. ಇದು ಆಂಡ್ರಾಯ್ಡ್ ಫೋನ್‍ ಆಗಿದ್ದು, ನಥಿಂಗ್‍ ಆಪರೇಟಿಂಗ್‍ ಸಿಸ್ಟಂ (ಓಎಸ್‍) ಹೊಂದಿರುತ್ತದೆ.
2. ಇದು ತನ್ನದೇ ಆದ ಹೊಸ ರೀತಿಯ ವಿನ್ಯಾಸ ಹೊಂದಿರಲಿದೆ. ಅಂದರೆ ನಥಿಂಗ್‍ ಇಯರ್ ಬಡ್‍ ರೀತಿ ಪಾರದರ್ಶಕ ವಿನ್ಯಾಸ ಹೊಂದಿರಲಿದೆ.
3. ಆಂಡ್ರಾಯ್ಡ್ ಸ್ಮಾರ್ಟ್ ಫೋನ್‍ ಪ್ರಿಯರು ಬಯಸುವ ಕ್ವಾಲ್‍ ಕಾಂ ಸ್ನಾಪ್‍ ಡ್ರಾಗನ್‍ ಪ್ರೊಸೆಸರ್ ಹೊಂದಿರುತ್ತದೆ. ನಥಿಂಗ್‍ಗೆ ಕ್ವಾಲ್‍ ಕಾಂ ಕೂಡ ಹೂಡಿಕೆದಾರ ಎಂಬುದು ವಿಶೇಷ.
4. ನಥಿಂಗ್‍ ಓಎಸ್‍ ಅತ್ಯಂತ ವೇಗವಾಗಿ ಕೆಲಸ ನಿರ್ವಹಿಸಲಿದೆ. ಈ ಫೋನಿಗೆ 3 ವರ್ಷಗಳ ಸಾಫ್ಟ್ ವೇರ್ ಅಪ್‍ ಡೇಟ್‍ ಮತ್ತು 4 ವರ್ಷಗಳ ಸೆಕ್ಯುರಿಟಿ ಅಪ್ ಡೇಟ್‍ ದೊರಕಲಿದೆ.
ಇದರ ದರದ ಬಗ್ಗೆ ಯಾವುದೇ ಮಾಹಿತಿಯನ್ನೂ ಕಂಪೆನಿ ನೀಡಿಲ್ಲ. ಈ ಫೋನು ಸ್ಯಾಮ್‍ ಸಂಗ್‍ ಗೆಲಾಕ್ಸಿ ಎಸ್‍ 22 ಹಾಗೂ ಒನ್‍ ಪ್ಲಸ್‍ 10 ಪ್ರೊ ಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಪ್ರಮುಖ ಗ್ಯಾಜೆಟ್‍ ವಿಮರ್ಶಕರು ಊಹಿಸಿದ್ದಾರೆ.

– ಕೆ.ಎಸ್. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.