![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-415x229.jpg)
VHP ಮುಖಂಡನ ಬರ್ಬರ ಹತ್ಯೆ ಪ್ರಕರಣ: ಹಂತಕರ ಸುಳಿವು ಕೊಟ್ಟರೆ 10 ಲಕ್ಷ ರೂ. ಬಹುಮಾನ: NIA
ಗುಂಡು ಹಾರಿಸಿದ ನಂತರ ಆರೋಪಿಗಳು ಪರಾರಿಯಾಗಿದ್ದರು.
Team Udayavani, Jun 26, 2024, 1:50 PM IST
![VHP ಮುಖಂಡನ ಬರ್ಬರ ಹತ್ಯೆ ಪ್ರಕರಣ: ಹಂತಕರ ಸುಳಿವು ಕೊಟ್ಟರೆ 10 ಲಕ್ಷ ರೂ. ಬಹುಮಾನ: NIA](https://www.udayavani.com/wp-content/uploads/2024/06/Accused-620x349.jpg)
ನವದೆಹಲಿ: ಪಂಜಾಬ್ ನಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ವಿಕಾಸ್ ಪ್ರಭಾಕರ್ ಅವರನ್ನು ಹತ್ಯೆಗೈದ ಇಬ್ಬರು ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ.
ಇದನ್ನೂ ಓದಿ:Anegundi; ಕೆಂಪೇಗೌಡರನ್ನು ಬಂಧನದಲ್ಲಿಟ್ಟಿದ್ದ ಆನೆಗೊಂದಿ ಸೆರೆಮನೆ ಪತ್ತೆ
ಕೊಲೆ ಪ್ರಕರಣದಲ್ಲಿ ಪಂಜಾಬ್ ನ ನವಾನ್ ಶಹರ್ ನ ಗರ್ ಪಧಾನ್ ಗ್ರಾಮದ ನಿವಾಸಿ ಹರ್ಜಿತ್ ಸಿಂಗ್ ಅಲಿಯಾಸ್ ಲಡ್ಡಿ ಹಾಗೂ ಯಮುನಾ ನಗರ ನಿವಾಸಿ ಸುಖ್ ವಿಂದರ್ ಸಿಂಗ್ ಪುತ್ರ ಕುಲ್ಬೀರ್ ಸಿಂಗ್ ಅಲಿಯಾಸ್ ಸಿಧು ವಿರುದ್ಧ ಹರ್ಯಾಣದ ಸದಾರ್ ಜಗಧಾರಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ (FIR) ದಾಖಲಾಗಿದೆ ಎಂದು ಎನ್ ಐಎ ಪ್ರಕಟನೆ ತಿಳಿಸಿದೆ.
ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ ಜತೆಗೆ ಎನ್ ಐಎ ಇಬ್ಬರ ಫೋಟೋಗಳನ್ನು ಬಿಡುಗಡೆ ಮಾಡಿದೆ. ನಂಗಾಲ್ ಘಟಕದ ವಿಎಚ್ ಪಿ (VHP) ಅಧ್ಯಕ್ಷರಾಗಿದ್ದ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಅವರ ಮೇಲೆ 2024ರ ಏಪ್ರಿಲ್ 13ರಂದು ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು.
ಗುಂಡು ಹಾರಿಸಿದ ನಂತರ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣದ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಎನ್ ಐಎಗೆ ಶಿಫಾರಸು ಮಾಡಿತ್ತು.
ಇಬ್ಬರು ಆರೋಪಿಗಳ ಬಗ್ಗೆ ಚಂಡೀಗಢ ಕಚೇರಿ ಅಥವಾ ಎನ್ ಐಎ ಪ್ರಧಾನ ಕಚೇರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದು, ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್ ಐಎ ತಿಳಿಸಿದೆ.
ಟಾಪ್ ನ್ಯೂಸ್
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-150x100.jpg)
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.