IOC member: ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸದಸ್ಯೆಯಾಗಿ ನೀತಾ ಅಂಬಾನಿ ಮರು ಆಯ್ಕೆ
ಐಒಸಿ ಮಂಡಳಿಗೆ ಸೇರಿದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
Team Udayavani, Jul 25, 2024, 11:15 AM IST
ಪ್ಯಾರಿಸ್: 33ನೇ ಆವೃತ್ತಿಯ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜುಲೈ 26ರಂದು ಸಿಟಿ ಆಫ್ ಲವ್ ಎಂದೇ ಖ್ಯಾತಿ ಪಡೆದಿರುವ ಪ್ಯಾರಿಸ್ ನಲ್ಲಿ ವರ್ಣರಂಜಿತ ಚಾಲನೆ ದೊರಕಲಿದೆ. ಏತನ್ಮಧ್ಯೆ ಒಲಿಂಪಿಕ್ಸ್ ಉದ್ಘಾಟನೆಗೂ ಮುನ್ನ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ರಿಲಯನ್ಸ್ ಫೌಂಡೇಶನ್ ನ ಸಂಸ್ಥಾಪಕಿ ನೀತಾ ಅಂಬಾನಿ ಅವರನ್ನು ಒಲಿಂಪಿಕ್ಸ್ ಸಮಿತಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ಇಲ್ಲಿ ನಡೆದ 142ನೇ ಸೆಷನ್ ನಲ್ಲಿ ನೀತಾ ಅಂಬಾನಿ ಶೇ.100ರಷ್ಟು ಮತ ಪಡೆದುಕೊಳ್ಳುವುದರೊಂದಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಐಒಸಿ ಸದಸ್ಯೆಯಾಗಿ ನನ್ನ ಮರು ಆಯ್ಕೆ ಮಾಡಿರುವುದು ನನಗೆ ದೊರೆತ ದೊಡ್ಡ ಗೌರವವಾಗಿದೆ. ನನ್ನ ಮೇಲೆ ಇಟ್ಟ ನಂಬಿಕೆ ಮತ್ತು ವಿಶ್ವಾಸಕ್ಕಾಗಿ ಐಒಸಿ ಅಧ್ಯಕ್ಷರಿಗೆ (ಥಾಮಸ್) ಮತ್ತು ಎಲ್ಲಾ ನನ್ನ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ನೀತಾ ಅಂಬಾನಿ ತಿಳಿಸಿದ್ದಾರೆ.
ಈ ಮರು ಆಯ್ಕೆ ಕೇವಲ ವೈಯಕ್ತಿಕ ಮೈಲಿಗಲ್ಲು ಮಾತ್ರವಲ್ಲ, ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವದ ಮನ್ನಣೆಯಾಗಿದೆ. ನಾನು ಈ ಸಂತೋಷ ಮತ್ತು ಹೆಮ್ಮೆಯ ಕ್ಷಣವನ್ನು ಪ್ರತಿಯೊಬ್ಬ ಭಾರತೀಯರೊಂದಿಗೆ ಹಂಚಿಕೊಳ್ಳುತ್ತೇನೆ ಮತ್ತು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಒಲಿಂಪಿಕ್ ಆಂದೋಲನವನ್ನು ಬಲಪಡಿಸುವ ನಮ್ಮ ಪ್ರಯತ್ನಗಳನ್ನು ಮುಂದುವರಿಸಲು ಎದುರು ನೋಡುತ್ತಿದ್ದೇನೆ ಎಂದು ನೀತಾ ಅಂಬಾನಿ ಸಂತಸ ಹಂಚಿಕೊಂಡಿದ್ದಾರೆ.
ನೀತಾ ಅಂಬಾನಿ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಗೆ 2016ರಲ್ಲಿ ಮೊದಲ ಬಾರಿಗೆ ನೇಮಕ ಮಾಡಲಾಗಿತ್ತು. ಐಒಸಿ ಮಂಡಳಿಗೆ ಸೇರಿದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೀತಾ ಅಂಬಾನಿ ಅವರ ನೇತೃತ್ವದಲ್ಲಿ ಐಒಸಿ ವಾರ್ಷಿಕ ಸಭೆಯ ಆತಿಥ್ಯವನ್ನು ಭಾರತ ಪಡೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ
MUST WATCH
ಹೊಸ ಸೇರ್ಪಡೆ
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 15ನೇ ರೀಲ್ಸ್ ಪ್ರಸಾರ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Ganesh Chaturthi: ಬಾಲ್ಯದಲ್ಲಿ ಗೌರಿ-ಗಣೇಶನ ಆಗಮನದ ತಯಾರಿಯೇ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.