Tax:ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್ ವಿರುದ್ಧ ಕಠಿನ ಕ್ರಮ ಇಲ್ಲ: ಸುಪ್ರೀಂಗೆ ಐಟಿ ಇಲಾಖೆ
Team Udayavani, Apr 1, 2024, 4:24 PM IST
ನವದೆಹಲಿ: 2024ರ ಲೋಕಸಭಾ ಚುನಾವಣೆಯ ನಡುವೆ 3,500 ಕೋಟಿ ರೂಪಾಯಿ ತೆರಿಗೆ ಬಾಕಿ ವಸೂಲಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ (ಏ.01) ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಇದನ್ನೂ ಓದಿ:Charlie Dean: ವನಿತಾ ಕ್ರಿಕೆಟ್ ನಲ್ಲಿ ದಾಖಲೆ ಬರೆದ ಇಂಗ್ಲೆಂಡ್ ನ ಚಾರ್ಲಿ ಡೀನ್
ಆದಾಯ ತೆರಿಗೆ ಇಲಾಖೆ ಪರವಾಗಿ ಸುಪ್ರೀಂಗೆ ಆಗಮಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಜೂನ್ ತಿಂಗಳಿಗೆ ವಿಚಾರಣೆಯನ್ನು ಮುಂದೂಡಿದೆ.
ಈ ಅರ್ಜಿಯ ವಿಚಾರಣೆ ಆಗುವವರೆಗೂ ಆದಾಯ ತೆರಿಗೆ ಇಲಾಖೆ ಯಾವುದೇ ಕಠಿನ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಜಸ್ಟೀಸ್ ಬಿ.ವಿ.ನಾಗರತ್ನಮ್ಮ ಮತ್ತು ಜಸ್ಟೀಸ್ ಆಗಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡುವುದು ಬೇಕಾಗಿಲ್ಲ ಎಂಬುದು ಆದಾಯ ತೆರಿಗೆ ಇಲಾಖೆ ಅಭಿಪ್ರಾಯವಾಗಿದೆ ಎಂದು ಮೆಹ್ತಾ ಅವರು ಸುಪ್ರೀಂಗೆ ಮನವರಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.
ಕಾಂಗ್ರೆಸ್ ಪಕ್ಷ ಈಗಾಗಲೇ ಬಾಕಿ ಇರುವ 134 ಕೋಟಿ ರೂಪಾಯಿ ತೆರಿಗೆಯನ್ನು ಪಾವತಿಸಿದ್ದು, ಬಳಿಕ ಆದಾಯ ತೆರಿಗೆ ಇಲಾಖೆ 1,700 ಕೋಟಿ ರೂಪಾಯಿ ಬಾಕಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿತ್ತು ಎಂದು ಮೆಹ್ತಾ ಹೇಳಿದರು.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸುಪ್ರೀಂಕೋರ್ಟ್ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ ಕಾಂಗ್ರೆಸ್ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆ ವೇಳೆ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಂಚು ಇದಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.