Israel War: ಯಾರೂ ಕೂಡಾ ಕಾನೂನಿಗಿಂತ ಮಿಗಿಲಲ್ಲ: ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆ ಕಿಡಿ
ಗ್ಯುಟೆರಸ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ...
Team Udayavani, Oct 25, 2023, 12:34 PM IST
ವಿಶ್ವಸಂಸ್ಥೆ: ಹಮಾಸ್ ನಿಯಂತ್ರಣದಲ್ಲಿರುವ ಗಾಜಾಪಟ್ಟಿ ಮೇಲೆ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್ ಪಡೆಯ ನಡೆಯ ಬಗ್ಗೆ ಕಿಡಿಕಾರಿರುವ ವಿಶ್ವಸಂಸ್ಥೆ ಮುಖ್ಯಸ್ಥ ಆ್ಯಂಟನಿಯೋ ಗ್ಯುಟೆರಸ್, ಇನ್ನೂ ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಯುದ್ಧದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Tiger Claw: ಹುಲಿ ಉಗುರು ಪ್ರಕರಣ… ಯಾರೇ ಇರಲಿ ಕಾನೂನಿನಂತೆ ಕ್ರಮ: ಈಶ್ವರ ಖಂಡ್ರೆ
ಬ್ರೆಜಿಲ್ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಭದ್ರತಾ ಮಂಡಳಿಯ ಸಚಿವರ ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್, ಇಸ್ರೇಲ್ ವಿದೇಶಾಂಗ ವ್ಯವಹಾರಗಳ ಸಚಿವ ಎಲಿ ಕೋಹೆನ್, ಪ್ಯಾಲೇಸ್ತೇನ್ ವಿದೇಶಾಂಗ ಸಚಿವ ರಿಯಾದ್ ಅಲ್ ಮಲಿಕಿ, ಬ್ರೆಜಿಲ್ ವಿದೇಶಾಂಗ ಸಚಿವ ಮೌರೊ ವಿಯೇರಾ, ಫ್ರಾನ್ಸ್ ನ ಯುರೋಪ್ ವಿದೇಶಾಂಗ ಸಚಿವೆ ಕ್ಯಾಥರಿನ್ ಕೋಲೊನ್ನಾ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.
ಇಸ್ರೇಲ್ ಪಡೆ ಗಾಜಾದಲ್ಲಿ ಬಾಂಬ್ ದಾಳಿಯಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದು, ಇದು ಅಂತಾರಾಷ್ಟ್ರೀಯ ಮಾನವೀಯತೆ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದೊಂದು ಕಳವಳಕಾರಿ ವಿಷಯವಾಗಿದೆ ಎಂದು ಗ್ಯುಟೆರಸ್ ತಿಳಿಸಿದ್ದಾರೆ.
ಶಸ್ತ್ರಾಸ್ತ್ರ ಯುದ್ಧದಲ್ಲಿ ಯಾರೂ ಕೂಡ ಅಂತಾರಾಷ್ಟ್ರೀಯ ಮಾನವೀಯತೆ ಕಾಯ್ದೆಗಿಂತ ಮೇಲಲ್ಲ. ಕಾನೂನಿನಿಗಿಂತ ಯಾರೂ ಮಿಗಿಲಲ್ಲ ಎಂದು ಗ್ಯುಟೆರಸ್ ಇಸ್ರೇಲ್ ಗೆ ಸಂದೇಶ ರವಾನಿಸಿದ್ದಾರೆ.
ವಿಶ್ವಸಂಸ್ಥೆಯ ಹೇಳಿಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಇಸ್ರೇಲ್ ನ ವಿಶ್ವಸಂಸ್ಥೆ ರಾಯಭಾರಿ ಗಿಲಾಡ್ ಎರ್ಡಾನ್, ಗ್ಯುಟೆರಸ್ ಹೇಳಿಕೆ ಆಘಾತಕಾರಿಯಾಗಿದೆ. ಇಂತಹ ಸಂದೇಶ ರವಾನಿಸಿರುವ ಗ್ಯುಟೆರಸ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ತಿರುಗೇಟು ನೀಡಿರುವುದಾಗಿ ರಾಯ್ಟಿರ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಚಾಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.