ಮಾತಲ್ಲಷ್ಟೇ ಅಲ್ಲ, ಕೃತಿಯಲ್ಲೂ ಪರಿಸರ ರಕ್ಷಣೆಯ ಕೆಲಸವಾಗಬೇಕು


Team Udayavani, Jun 5, 2021, 7:00 AM IST

Not only the work, but the work must also be the work of environmental protection

ಇಂದು(ಶನಿವಾರ) ವಿಶ್ವ ಪರಿಸರ ದಿನ. ಜಾಗತಿಕವಾಗಿ ವಿಶ್ವಸಂಸ್ಥೆ ಕಡೆಯಿಂದಲೇ ಪರಿಸರ ದಿನವನ್ನು ಆಚರಿಸಲಾಗುತ್ತಿದ್ದು, ಪರಿಸರ ವ್ಯವಸ್ಥೆಯ ಪುನರ್‌ ನಿರ್ಮಾಣ ಸಾರವನ್ನು ತೆಗೆದುಕೊಳ್ಳಲಾಗಿದೆ. ಇದು ಮುಂದಿನ 10 ವರ್ಷಗಳ ಯೋಜನೆಯಾಗಿದ್ದು, ಜಗತ್ತಿನಾದ್ಯಂತ ಅರಣ್ಯ ಬೆಳೆಸಲು ಪ್ರೋತ್ಸಾಹಿಸಲಾಗುತ್ತದೆ. ಅಷ್ಟೇ ಅಲ್ಲ, ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಕುರಿತಂತೆಯೂ ಈ 10 ವರ್ಷ ಅರಿವು ಮೂಡಿಸಲಾಗುತ್ತದೆ.

ವಿಶ್ವ ಪರಿಸರ ದಿನವನ್ನು 1972ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಜಗತ್ತಿನಲ್ಲಿ ಅರಣ್ಯದ ವಿನಾಶ ಹೆಚ್ಚುತ್ತಿರುವುದನ್ನು ಮನಗಂಡ ವಿಶ್ವ ಸಂಸ್ಥೆಯು ಪರಿಸರವನ್ನು ಉಳಿಸಲು ಪ್ರತೀ ವರ್ಷದ ಜೂ.5ರಂದು ಪರಿಸರ ದಿನವನ್ನು ಆಚರಿಸುತ್ತಿದೆ. ಹಾಗೆಯೇ ಪ್ರತೀ ವರ್ಷವೂ ಒಂದೊಂದು ದೇಶ ಇದನ್ನು ಆಚರಿಸುವ ಹೊಣೆ ಹೊತ್ತುಕೊಳ್ಳುತ್ತಿದ್ದು, ಈ ವರ್ಷ ಪಾಕಿಸ್ಥಾನ ಆತಿಥ್ಯ ವಹಿಸಿಕೊಂಡಿದೆ.

ಪ್ರತಿಯೊಂದು ದೇಶವು ಪರಿಸರ ರಕ್ಷಣೆಗೆ ಪಣ ತೊಡಬೇಕಿದ್ದು, ಮಾಲಿನ್ಯಕ್ಕೊಳಗಾಗುತ್ತಿರುವ ನಮ್ಮ ನಗರಗಳು, ಕರಾವಳಿಗಳ ಮೇಲೆ ಹಾವಳಿ ಮತ್ತು ಅರಣ್ಯ ನಾಶವನ್ನು ತಡೆಗಟ್ಟಬೇಕಾಗಿದೆ ಎಂದು ವಿಶ್ವಸಂಸ್ಥೆ ಈ ವರ್ಷದ ಸಂದೇಶದಲ್ಲಿ ತಿಳಿಸಿದೆ. ಒಂದು ವೇಳೆ ನಾವು ಇವುಗಳ ರಕ್ಷಣೆ ಮಾಡಿದಲ್ಲಿ ಬಡತನ ನಿರ್ಮೂಲನೆ ಮಾಡಬಹುದಾಗಿದ್ದು, ಹಸಿವು, ನಿರಾಶ್ರಿತ ಸಮಸ್ಯೆ ಮತ್ತು ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದೂ ಹೇಳಿದೆ.

ಇಂದಿನ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ ಜಾಗತಿಕವಾಗಿ ಚಿಂತಿಸಬೇಕಾದ ವಿಷಯವೇ. ಆದರೆ ಭಾರತದ ವಿಚಾರಕ್ಕೆ ಬಂದರೆ ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡುವ ಅಗತ್ಯವಿದೆ. ಜಾಗತಿಕ ಹವಾಮಾನ ಬದಲಾವಣೆ ವಿಚಾರದಲ್ಲಿ ಭಾರತ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹೊಸದಿಲ್ಲಿಯೂ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಮಿತಿ ಮೀರಿದ ಮಾಲಿನ್ಯವಿದೆ. ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಪರಿಸರ ಸಂರಕ್ಷಣೆ ವಿಚಾರದಲ್ಲಿ ನಮ್ಮ ನಿಷ್ಕಾಳಜಿ ಹೆಚ್ಚು ಮಾಲಿನ್ಯ ಸೃಷ್ಟಿಗೆ ಕಾರಣವಾಗುತ್ತಿದೆ. ಅಂತೆಯೇ ಕೈಗಾರಿಕೆಗಳ ಕಲ್ಮಶ ನೀರನ್ನು ಎಗ್ಗಿಲ್ಲದೇ ನದಿ, ಕೆರೆಗಳಿಗೆ ಸೇರಿಸುತ್ತಿದ್ದೇವೆ. ಕರಾವಳಿಯಲ್ಲಿ ಸಮುದ್ರ ಕೊರೆತ ಹೆಚ್ಚಾಗುತ್ತಿದೆ. ತಾಪಮಾನ ಏರಿಕೆ ಕಾರಣದಿಂದಾಗಿ ಸಮುದ್ರ ಮಟ್ಟವೂ ಏರಿಕೆಯಾಗುತ್ತಿದೆ.

ಇದಿಷ್ಟೇ ಅಲ್ಲ, ನೈಸರ್ಗಿಕ ವಿಕೋಪಗಳಿಗೂ ಪರೋಕ್ಷವಾಗಿ ಜಾಗತಿಕ ತಾಪಮಾನ ಬದಲಾವಣೆಯೂ ಕಾರಣವಾಗಿದೆ. 2011ರಿಂದ 2020ರ ವರೆಗೆ ದೇಶ 33 ಚಂಡಮಾರುತಗಳನ್ನು ಕಂಡಿದೆ. ಪ್ರವಾಹ, ಬಿರುಗಾಳಿ, ಚಂಡಮಾರುತಗಳ ಅಬ್ಬರ ಜೋರಾಗಿಯೇ ಇದೆ. 2008ರಿಂದ 2020ರ ವರೆಗೆ ಸುಮಾರು 37 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. ಭಾರತದಲ್ಲಿ ಮುಂಗಾರು ಕಾಲದಲ್ಲೇ ಹೆಚ್ಚು ಪ್ರವಾಹದಂಥ ಸ್ಥಿತಿ ತಲೆದೋರಿದೆ.

ಇನ್ನು ಕೃಷಿ ಚಟುವಟಿಕೆಗಳ ಮೇಲೂ ಈ ನೈಸರ್ಗಿಕ ವಿಕೋಪಗಳ ಪರಿಣಾಮವಾಗಿದೆ. ತಾಪಮಾನ ಬದಲಾವಣೆಯಿಂದಾಗಿಯೇ ಕಾಲ ಕಾಲಕ್ಕೆ ಸರಿಯಾಗಿ ಮಳೆಯಾಗುತ್ತಿಲ್ಲ. ಇದು ರೈತನ ಜೀವನದ ಮೇಲೆ ಅಡ್ಡಪರಿಣಾಮ ಬೀರಿದೆ. ಹೀಗಾಗಿ ಸರಕಾರಗಳ ಜತೆಗೆ ಜನರೂ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇ ಕಾಗಿರುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.