13 ವರ್ಷಗಳಿಂದ ಸವಲತ್ತಿಲ್ಲ ; ಸಂಕಷ್ಟ ಕಾಲದಲ್ಲೂ ನಿರ್ಲಕ್ಷ್ಯ


Team Udayavani, May 30, 2021, 7:15 AM IST

13 ವರ್ಷಗಳಿಂದ ಸವಲತ್ತಿಲ್ಲ ; ಸಂಕಷ್ಟ ಕಾಲದಲ್ಲೂ ನಿರ್ಲಕ್ಷ್ಯ

ಪುತ್ತೂರು : ಹಾಲಿ ಸಂಕಷ್ಟ ಕಾಲದಲ್ಲಿ ಸರಕಾರ ಹಳ್ಳಿ ಹಳ್ಳಿಗೆ ಉಚಿತ ಪಡಿತರ ವಿತರಿಸುವುದಾಗಿ ಹೇಳು ತ್ತಿದ್ದರೂ ಇಲ್ಲಿನ 15 ಬಡ, ದಲಿತ ಕುಟುಂಬಗಳಿಗೆ 13 ವರ್ಷಗಳಿಂದ ಪಡಿತರವೇ ಇಲ್ಲ!

ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರವಾಗಿರುವ ಸುಳ್ಯದ ಅಮರಪಟ್ನೂರು ಗ್ರಾಮದ ಅಕ್ಕೋಜಿಪಾಲ್‌ ಎಂಬಲ್ಲಿರುವ ಪರಿಶಿಷ್ಟ ಜಾತಿಯ ಮಾಯಿಲ ಸಮುದಾಯದ ಕುಟುಂಬಗಳ ವರುಷಾನು ಗಟ್ಟಲೆಯ ಗೋಳಿನ ಕಥೆ ಇದು.

19 ದಲಿತ ಕುಟುಂಬ
ಅಕ್ಕೋಜಿಲ್‌ಪಾಲ್‌ನಲ್ಲಿ ನೂರಕ್ಕೂ ಅಧಿಕ ವರ್ಷಗಳಿಂದ ಮಲೆಯಾಳ ಮಾತೃಭಾಷಿಕ ಮಾಯಿಲ ಕುಟುಂಬಗಳು ನೆಲೆಸಿವೆ. ನಾಲ್ಕೈದು ಮಂದಿಯ ಹೆಸರಿನಲ್ಲಿದ್ದ ಜಾಗವನ್ನು 18 ವರ್ಷಗಳ ಹಿಂದೆ ನವಗ್ರಾಮ ಯೋಜನೆಯಡಿ 21 ಕುಟುಂಬಗಳಿಗೆ ತಲಾ 3 ಸೆಂಟ್ಸ್‌ನಂತೆ ವಿಭಾಗಿಸಿ ನೀಡಿ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗಿತ್ತು. 19 ಮನೆಗಳಲ್ಲಿ 60ಕ್ಕೂ ಅಧಿಕ ಮಂದಿ ಇಲ್ಲಿದ್ದಾರೆ. ವಿಭಜನೆಯ ಬಳಿಕ 5 ಕುಟುಂಬಗಳನ್ನು ಬಿಟ್ಟು 15 ಕುಟುಂಬಗಳಿಗೆ ಪಡಿತರ ಕಾರ್ಡ್‌ ಮರುನೋಂದಣಿ ಮಾಡದ ಕಾರಣ ಪಡಿತರ ಲಭಿಸುತ್ತಿಲ್ಲ. ಯಾವ ಇಲಾಖೆಯೂ ಅವರ ಗೋಳು ಕೇಳುವ ಗೋಜಿಗೆ ಹೋಗಿಲ್ಲ.

ಆಧಾರ್‌ ಕಾರ್ಡ್‌ ಇಲ್ಲ
ಇಲ್ಲಿರುವ 60 ಮಂದಿಯ ಪೈಕಿ 45 ಮಂದಿಗೆ ಆಧಾರ್‌ ಕಾರ್ಡ್‌ ಇಲ್ಲ. “ಸರಕಾರ ಸಮುದಾಯದ ಏಳಿಗೆಗೋಸ್ಕರ ಘೋಷಿಸುವ ಯೋಜನೆಗಳ ಸೌಲಭ್ಯ ಪಡೆಯಲು ಯಾವುದೇ ದಾಖಲೆಗಳು ನಮ್ಮಲ್ಲಿಲ್ಲ. 3 ಸೆಂಟ್ಸ್‌ ಜಾಗ, ಅದರಲ್ಲಿ ಈಗಲೋ ಆಗಲೋ ಎನ್ನುವಂತಿರುವ ಮುರುಕು ಜೋಪಡಿ ವಿನಾ ಬೇರೇನೂ ಇಲ್ಲ. ಕೆಲವು ಮನೆಗಳಲ್ಲಿ ಶೌಚಾಲಯವೂ ಸರಿ ಇಲ್ಲ’ ಎನ್ನುತ್ತಾರೆ ಕಾಲನಿಯ ನಾರಾಯಣ, ಚೆನ್ನು ಮತ್ತು ಮಾದೆ.

ಕಾಡುತ್ತಿದೆ ಅನಾರೋಗ್ಯ
ಕಾಲನಿಯಲ್ಲಿ ಪುಟ್ಟ ಮಕ್ಕಳಿದ್ದಾರೆ. ಕೆಲವು ದಿನಗಳಿಂದ ಜ್ವರ ಸೇರಿದಂತೆ ಅನಾರೋಗ್ಯ ಅವರನ್ನು ಕಾಡುತ್ತಿದೆ. ಅಮರಪಟ್ನೂರು ಗ್ರಾಮಕ್ಕೆ ಪ್ರತ್ಯೇಕ ಆಶಾ ಕಾರ್ಯಕರ್ತೆಯರಿಲ್ಲ; ನೆರೆಯ ಗ್ರಾಮದ ಕಾರ್ಯಕರ್ತೆಗೆ ಇಲ್ಲಿನ ಜವಾಬ್ದಾರಿ. ಆರೋಗ್ಯ ಇಲಾ ಖೆಯ ಅಧಿಕಾರಿಗಳಾಗಲಿ ವೈದ್ಯರಾ ಗಲೀ ಇಲ್ಲಿ ಪರಿಶೀಲನೆಗೆ ಬಂದಿಲ್ಲ.

ಪಡಿತರ ಚೀಟಿ ಇಲ್ಲದಿರುವ ವಿಚಾರ ಗಮನಕ್ಕೆ ಬಂದಿದೆ. ಅವರ ಬಳಿ ಪೂರಕ ದಾಖಲೆಗಳಿಲ್ಲ. ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಪಡಿತರ ಚೀಟಿ ಇತ್ಯಾದಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
– ಅನಿತಾಲಕ್ಷ್ಮೀ, ಸುಳ್ಯ ತಹಶೀಲ್ದಾರ್‌

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.