![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Jun 20, 2020, 12:47 PM IST
ಬೆಂಗಳೂರು ; ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಪಡಿಸಬೇಕೆಂದು ಎನ್ಎಸ್ ಯುಐ ಸಂಘಟನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಮನೆಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕೋವಿಡ್ ಸೋಂಕಿನಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಪಡಿಸಬೇಕೆಂದು ಸಂಘಟನೆಯ ಸದಸ್ಯರು ಬಸವೇಶ್ವರ ನಗರದಲ್ಲಿರುವ ಶಿಕ್ಷಣ ಸಚಿವರ ಮನೆ ಮುಂದೆ ಧರಣಿ ನಡೆಸಿದ್ದು ಕೂಡಲೇ ಪೊಲೀಸರು ಧರಣಿ ನಿರತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೋವಿಡ್ ಸೋಂಕಿಗೆ ಸಂಬಂಧಿಸಿ ಅನ್ಯ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ರದ್ದು ಪಡಿಸಿದ ಸಂದರ್ಭ ನಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪರೀಕ್ಷೆ ನಿಲ್ಲಿಸುವ ಪ್ರಶ್ನೆ ಇಲ್ಲ ಪರೀಕ್ಷೆ ನಡೆದೇ ನಡೆಯುತ್ತೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದರು, ಆ ಬಳಿಕ ಬೆಳಗಾವಿಯ ಮಹಿಳೆಯೊಬ್ಬರು ಪರೀಕ್ಷೆ ರದ್ದು ಪಡಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು ಆದರೆ ಕೋರ್ಟ್ ಮೇಲ್ಮನವಿಯನ್ನು ತಿರಸ್ಕರಿಸಿತ್ತು.
You seem to have an Ad Blocker on.
To continue reading, please turn it off or whitelist Udayavani.