Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್ ಆದ ನರ್ಸ್!
ಆಸ್ಪತ್ರೆಯಲ್ಲಿ ನರ್ಸ್ ತನ್ನ ಕೆಲಸ ಮುಗಿಸಿ ಮನೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಳು...
Team Udayavani, Sep 13, 2024, 11:50 AM IST
Representative Image: Pixabay
ಪಾಟ್ನಾ: ನರ್ಸ್(Nurse) ಮೇಲೆ ಸಾಮೂಹಿಕ ಅ*ತ್ಯಾಚಾರ ನಡೆಸಲು ಯತ್ನಿಸಿದ ವೇಳೆ ದಿಢೀರನೆ ಹರಿತವಾದ ಬ್ಲೇಡ್ ನಿಂದ ವೈದ್ಯನ ಖಾಸಗಿ ಅಂಗವನ್ನು ಕತ್ತರಿಸುವ ಮೂಲಕ ಅಪಾಯದಿಂದ ಪಾರಾದ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮಬಂಗಾಳದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆ ಮೇಲಿನ ಅ*ತ್ಯಾಚಾರ ಮತ್ತು ಹ*ತ್ಯೆ ಪ್ರಕರಣ ನಡೆದು ಒಂದು ತಿಂಗಳ ನಂತರ ಬಿಹಾರದಲ್ಲಿ ಈ ಘಟನೆ ನಡೆದಿದೆ.
ಅ*ತ್ಯಾಚಾರ ಪ್ರಕರಣದಲ್ಲಿ ವೈದ್ಯನೊಬ್ಬ ಭಾಗಿಯಾಗಿದ್ದು, ಈತ ಸಮಷ್ಠಿಪುರ್ ಜಿಲ್ಲೆಯ ಆರ್ ಬಿಎಸ್ (RBS) ಹೆಲ್ತ್ ಕೇರ್ ಸಂಟರ್ ನ ಅಡ್ಮಿನಿಸ್ಟ್ರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಆಸ್ಪತ್ರೆಯಲ್ಲಿ ನರ್ಸ್ ತನ್ನ ಕೆಲಸ ಮುಗಿಸಿ ಮನೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಕುಡಿದ ಅಮಲಿನಲ್ಲಿದ್ದ ಡಾ.ಸಂಜಯ್ ಕುಮಾರ್ ಮತ್ತು ಅತನ ಇಬ್ಬರು ಸಹಾಯಕ ವೈದ್ಯರು ಆಕೆಯ ಮೇಲೆ ಅ*ತ್ಯಾಚಾರ ಎಸಗಲು ಮುಂದಾಗಿದ್ದರು. ಆಗ ನರ್ಸ್ ಬ್ಲೇಡ್ ನಿಂದ ವೈದ್ಯನ ಖಾಸಗಿ ಅಂಗವನ್ನು ಕತ್ತರಿಸಿದ ನಂತರ ಕಾಮುಕರ ಕಪಿಮುಷ್ಟಿಯಿಂದ ತಪ್ಪಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಆಸ್ಪತ್ರೆಯಿಂದ ಹೊರ ಬಂದ ನಂತರ ನರ್ಸ್ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಳು. ಅದರಂತೆ ಆಸ್ಪತ್ರೆಗೆ ದೌಡಾಯಿಸಿದ ಪೊಲೀಸರು, ಡಾ. ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮತ್ತಿಬ್ಬರು ಆರೋಪಿಗಳಾದ ಡಾ.ಅವಧೇಶ್ ಕುಮಾರ್ ಮತ್ತು ಡಾ.ಸುನೀಲ್ ಕುಮಾರ್ ಗುಪ್ತಾನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್ ಶಾ ಘೋಷಣೆ
Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ
Bengaluru: ದೇಶದ ಸಿಲಿಕಾನ್ ವ್ಯಾಲಿ ಎಂಬ ಬೆಂಗಳೂರು ಪಟ್ಟಕ್ಕೇ ಕುತ್ತು?
Pune: ಮೂರು ಕಾಲಿನ ಹಸುವಿಗೆ ಕೃತಕ ಕಾಲು ತೊಡಿಸಿದ ಪುಣೆ ಆಸ್ಪತ್ರೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ
BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.