Olympics: ಲಾಸ್‌ ಏಂಜಲೀಸ್‌ ಹಾಕಿಯಲ್ಲಿ ಬಂಗಾರ ಗೆಲ್ಲಲು ಪೂರ್ತಿ ನೆರವು: ಕ್ರೀಡಾ ಸಚಿವ

ಅಗತ್ಯವಿರುವ ಎಲ್ಲ ಬೆಂಬಲ ನೀಡಲು ಸರಕಾರ ಸಿದ್ಧವಿದೆ: ಮನ್‌ಸುಖ್‌ ಮಾಂಡವೀಯ

Team Udayavani, Aug 13, 2024, 10:58 PM IST

Hockey-team

ಹೊಸದಿಲ್ಲಿ: ಭಾರತೀಯ ಹಾಕಿಯ ಭವಿಷ್ಯದ ಯೋಜನೆ ಹಾಗೂ 2028ರ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಯಾವ ರೀತಿಯ ತಯಾರಿ ಅಗತ್ಯ ಎಂಬುದರ ಕುರಿತು ಚರ್ಚಿಸಲು ತಾನು ಸೆ. 10ರ ಒಳಗೆ ಹಾಕಿ ತಂಡವನ್ನು ಭೇಟಿ ಮಾಡುವುದಾಗಿ ಕೇಂದ್ರ ಕ್ರೀಡಾ ಸಚಿವ ಮನ್‌ಸುಖ್‌ ಮಾಂಡವೀಯ ಹೇಳಿದ್ದಾರೆ.

ಪ್ಯಾರಿಸ್‌ನಲ್ಲಿ ಕಂಚು ಗೆದ್ದು ತವರಿಗೆ ಆಗಮಿಸಿದ ಹಾಕಿ ತಂಡದ ದ್ವಿತೀಯ ಬ್ಯಾಚ್‌ನ ಸದಸ್ಯರನ್ನು ಮಂಗಳವಾರ ಸಮ್ಮಾನಿಸಿದ ಸಂದರ್ಭದಲ್ಲಿ ಕ್ರೀಡಾ ಸಚಿವರು ತಮ್ಮ ಯೋಜನೆ ಕುರಿತು ಹೇಳಿದರು. ಸಮ್ಮಾನಿತರಲ್ಲಿ ಗೋಲ್‌ಕೀಪರ್‌ ಶ್ರೀಜೇಶ್‌ ಕೂಡ ಸೇರಿದ್ದರು.

“ನಿಮ್ಮ ಸಾಧನೆ ಅದ್ಭುತ. ನಾವು ಚಿನ್ನ ಗೆಲ್ಲಲಿಲ್ಲ, ಆದರೆ ಇದನ್ನು ಸಮೀಪಿಸಿದೆವು. ಸೆಮಿಫೈನಲ್‌ ಸೋಲಿನ ಬಳಿಕ ತಂಡ ಸ್ಫೂರ್ತಿದಾಯಕವಾಗಿ ಆಡಿ ಕಂಚನ್ನು ಉಳಿಸಿಕೊಂಡಿತು. ಆದರೆ ಹಾದಿ ಇಲ್ಲಿಗೇ ಮುಗಿದಿಲ್ಲ. ನಾನು ಸೆ. 10ರ ಒಳಗೆ ನಿಮ್ಮ ಜತೆ ಕುಳಿತು ಭವಿಷ್ಯದ ಯೋಜನೆ ಕುರಿತು ಚರ್ಚಿಸಲಿದ್ದೇನೆ. ಲಾಸ್‌ ಏಂಜಲೀಸ್‌ನಲ್ಲಿ ಚಿನ್ನದ ಪದಕವೇ ನಮ್ಮ ಅಂತಿಮ ಗುರಿ ಆಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಬೆಂಬಲ ನೀಡಲು ಸರಕಾರ ಸಿದ್ಧವಿದೆ’ ಎಂಬುದಾಗಿ ಮಾಂಡವೀಯ ಹೇಳಿದರು.

ಪ್ಯಾರಿಸ್‌ ಸಾಧನೆ ತೃಪ್ತಿಕರ
“ಪ್ಯಾರಿಸ್‌ನಲ್ಲಿ ನಮ್ಮವರ ಸಾಧನೆ ಬಗ್ಗೆ ತೃಪ್ತಿ ಇದೆ. ಟೋಕಿಯೊದಲ್ಲಿ ನಾವು 7 ಪದಕ ಜಯಿಸಿದ್ದೆವು, ಪ್ಯಾರಿಸ್‌ನಲ್ಲಿ ಲಭಿಸಿದ್ದು ಆರೇ ಪದಕ. ಆದರೆ 4ನೇ ಸ್ಥಾನಕ್ಕೆ ಇಳಿದು 7 ಪದಕಗಳನ್ನು ಕಳೆದುಕೊಳ್ಳಬೇಕಾಯಿತು. ಒಟ್ಟಾರೆಯಾಗಿ ಇದೊಂದು ಉತ್ತಮ ಸಾಧನೆ’ ಎಂದರು.

ಹಾಕಿ ತಂಡದ ಮೊದಲ ಬ್ಯಾಚ್‌ನ ಆಟಗಾರರನ್ನು ಸಚಿವರು ಈ ಮೊದಲು ಸಮ್ಮಾನಿಸಿದ್ದರು. ಪಿ.ಆರ್‌. ಶ್ರೀಜೇಶ್‌ ಸೇರಿದಂತೆ ಬಹುತೇಕ ಆಟಗಾರರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಕಾರಣ ಮಂಗಳವಾರವಷ್ಟೇ ಭಾರತಕ್ಕೆ ಆಗಮಿಸಿದ್ದರು.

ಕೆಂಪುಕೋಟೆಯಲ್ಲಿ ಒಲಿಂಪಿಕ್ಸ್‌  ಕ್ರೀಡಾಳುಗಳು
ಹೊಸದಿಲ್ಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಭಾರತದ ಕ್ರೀಡಾಪಟುಗಳೆಲ್ಲ ಈಗಾಗಲೇ ತವರಿಗೆ ವಾಪಸಾಗಿದ್ದಾರೆ. ಒಟ್ಟು 117 ಕ್ರೀಡಾಳುಗಳು ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು. ಇವರೆಲ್ಲರಿಗೂ ಆ. 15ರ ಸ್ವಾತಂತ್ರ್ಯ ದಿನದಂದು ಹೊಸದಿಲ್ಲಿಯ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಅನಂತರ ಇವರೆಲ್ಲರನ್ನೂ ಪ್ರಧಾನಿ ನರೇಂದ್ರ ಮೋದಿಯವರು ಅಪರಾಹ್ನ ಒಂದು ಗಂಟೆಗೆ ಭೇಟಿ ಯಾಗಿ ಮಾತುಕತೆ ನಡೆಸಲಿದ್ದಾರೆ. ಪದಕ ವಿಜೇತ ಕ್ರೀಡಾಪಟುಗಳನ್ನು ಪ್ರಧಾನಿಯವರು ಈ ಮೊದಲೇ ಕರೆ ಮಾಡಿ ಅಭಿನಂದಿಸಿದ್ದರು.
ಭಾರತಕ್ಕೆ ಬೆಳ್ಳಿ ಪದಕ ತಂದಿತ್ತ ನೀರಜ್‌ ಚೋಪ್ರಾ ಜರ್ಮನಿಗೆ ತೆರಳಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.