ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಯಾವುದೇ ರೂಪಾಂತರಿಗೂ ಹೆದರಬೇಕಿಲ್ಲ: ಡಾ| ಜಮೀಲ್‌

Team Udayavani, Dec 1, 2021, 9:55 AM IST

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಹೊಸದಿಲ್ಲಿ: ಒಮಿಕ್ರಾನ್‌ ಸೇರಿದಂತೆ ಕೊರೊನಾದ ಯಾವುದೇ ರೂಪಾಂತರಿ ಬಂದರೂ ಬಹುತೇಕ ಭಾರತೀಯರು ಸುರಕ್ಷಿತವಾಗಿರಲಿದ್ದಾರೆ. ಹಾಗಾಗಿ ಹೊಸ ರೂಪಾಂತರದ ಬಗ್ಗೆ ಭಯಪಡಬೇಕಾಗಿಲ್ಲ.

ಹೀಗೆಂದು ಹೇಳಿದ್ದು ದೇಶದ ಪ್ರಮುಖ ವೈರಾಲಜಿಸ್ಟ್‌ ಹಾಗೂ ಕೋವಿಡ್‌ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಡಾ| ಶಾಹಿದ್‌ ಜಮೀಲ್‌. ಇಡೀ ದೇಶವೇ ಒಮಿಕ್ರಾನ್‌ ಭೀತಿಯಲ್ಲಿರುವಾಗ ಜಮೀಲ್‌ ಅವರು ಈ ಹೇಳಿಕೆ ನೀಡುವ ಮೂಲಕ ಭಾರತೀಯರಿಗೆ ರಿಲೀಫ್ ನೀಡಿದ್ದಾರೆ.

ಎಲ್ಲರೂ ಎಚ್ಚರಿಕೆಯಿಂದಿರಬೇಕು. ಆದರೆ ಭೀತಿ ಪಡಬೇಕಾಗಿಲ್ಲ. ಡೆಲ್ಟಾ ರೂಪಾಂತರಿಯಿಂದ ಭಾರತದಲ್ಲಿ ಎದ್ದ ಎರಡನೇ ಅಲೆಯ ವೇಳೆ ಸಾಕಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ದೇಶದ ಶೇ.67ರಷ್ಟು ಮಂದಿಯ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿದೆ. ಹೀಗಾಗಿ ಯಾವುದೇ ರೂಪಾಂತರಿ ಬಂದರೂ ಭಾರತೀಯರು ಸುರಕ್ಷಿತವಾಗಿರಲಿದ್ದಾರೆ ಎಂದು ಡಾ| ಜಮೀಲ್‌ ಅಭಿಪ್ರಾಯಪಟ್ಟಿದ್ದಾರೆ.

ಒಮಿಕ್ರಾನ್‌ ದೃಢಪಟ್ಟಿಲ್ಲ: ದೇಶದಲ್ಲಿ ಒಮಿಕ್ರಾನ್‌ ಪತ್ತೆಯಾಗಿಲ್ಲ. ಅದನ್ನು ದೇಶದೊಳಕ್ಕೆ ಆಗಮಿಸಲು ಅವಕಾಶ ನೀಡುವುದೇ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.

ಶಾಲೆ ಆರಂಭ ತಡ: ಒಮಿಕ್ರಾನ್‌ ಭೀತಿ ಹಿನ್ನೆಲೆಯಲ್ಲಿ ಮುಂಬಯಿಯಲ್ಲಿ ಶಾಲೆಗಳ ಪುನರಾರಂಭವನ್ನು ಡಿ.15ಕ್ಕೆ ಮುಂದೂಡಲಾಗಿದೆ ಎಂದು ಬೃಹನ್ಮುಂಬಯಿ ನಗರ ಪಾಲಿಕೆ ಹೇಳಿದೆ. ಡಿ.1ರಂದು ಶಾಲಾರಂಭ ಮಾಡಲು ಈ ಮೊದಲು ನಿರ್ಧರಿಸಲಾಗಿತ್ತು. ಈ ನಡುವೆ, ಆಫ್ರಿಕಾ ರಾಷ್ಟ್ರಗಳಿಂದ ಕಳೆದ 15 ದಿನಗಳಲ್ಲಿ ಒಂದು ಸಾವಿರ ಮಂದಿ ಮುಂಬಯಿಗೆ ಬಂದಿಳಿದಿದ್ದಾರೆ. ಆದರೆ ಈ ಪೈಕಿ ಕೇವಲ 466 ಮಂದಿಯ ಮಾಹಿತಿಯಷ್ಟೇ ಸಿಕ್ಕಿದೆ ಎಂದು ಬಿಎಂಸಿ ತಿಳಿಸಿದೆ. ಜಪಾನ್‌ನಲ್ಲಿ ಒಮಿಕ್ರಾನ್‌ನ ಮೊದಲ ಪ್ರಕರಣ ಮಂಗಳವಾರ ಪತ್ತೆಯಾಗಿದೆ.

ಇದನ್ನೂ ಓದಿ:ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಆರ್‌ಟಿ-ಪಿಸಿಆರ್‌ನಿಂದ ಒಮಿಕ್ರಾನ್‌ ಪತ್ತೆ ಸಾಧ್ಯಲಸಿಕೆ ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ!
ಲಸಿಕೆ ಪಡೆಯದವರು, ಕೊರೊನಾ ಮುನ್ನೆಚ್ಚರಿಕ ಕ್ರಮಗಳಿಗೆ ಸಹಕಾರ ನೀಡದವರಿಗೆ ಸೋಂಕು ತಗಲಿದರೆ ಸರಕಾರ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಆರೋಗ್ಯ ಸಮಸ್ಯೆಯಿರುವ ಕಾರಣಕ್ಕೆ ಅಥವಾ ಅಲರ್ಜಿ ಇರುವ ಕಾರಣಕ್ಕೆ ಲಸಿಕೆ ಪಡೆಯದವರು ಅದಕ್ಕೆ ಸಂಬಂಧಿಸಿ ಸರಕಾರಿ ವೈದ್ಯರಿಂದ ಪ್ರಮಾಣಪತ್ರ ತರಬೇಕು ಎಂದೂ ಸೂಚಿಸಿದ್ದಾರೆ.

“ಒಮಿಕ್ರಾನ್‌ ಅನ್ನು ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ (ಆರ್‌ಎಟಿ), ಆರ್‌ಟಿ-ಪಿಸಿಆರ್‌ ಟೆಸ್ಟ್‌ ಮೂಲಕ ಪತ್ತೆ ಹಚ್ಚಲು ಸಾಧ್ಯವಿದೆ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಹೇಳಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಶೇಷವಾಗಿ, ಸೋಂಕಿನಿಂದಾಗಿ ಅಪಾಯಕಾರಿ ಎಂದು ಪರಿಗಣಿಸಲಾಗಿರುವ ದೇಶಗಳಿಂದ (ಹೈರಿಸ್ಕ್) ಬಂದಿರುವವರ ಮೇಲೆ ನಿಗಾ ಇರಿಸಬೇಕು. ಹೋಮ್‌ ಐಸೊಲೇಶನ್‌ಗೆ ಶಿಫಾರಸು ಮಾಡಲಾದ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕು ಎಂದಿದ್ದಾರೆ. ವಿದೇಶಗಳಿಂದ ಬಂದವರ ಮನೆಗೆ ಖುದ್ದಾಗಿ ಭೇಟಿ ನೀಡಬೇಕು. 8ನೇ ದಿನದ ಪರೀಕ್ಷೆಯ ಅನಂತರವೂ ಅವರ ಮೇಲೆ ನಿಗಾ ಇರಿಸಬೇಕು ಎಂದಿದ್ದಾರೆ. ಇದೇ ವೇಳೆ ಹೈರಿಸ್ಕ್ ದೇಶಗಳಿಂದ ಬಂದವರಿಗೆ ಕಟ್ಟು ನಿಟ್ಟಿನ ನಿಯಮ ಮಂಗಳವಾರ ರಾತ್ರಿಯಿಂದಲೇ ಜಾರಿಯಾಗಿದೆ.

 

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.