ಲಸಿಕೆಗೆ 18 ವರ್ಷ ಮೇಲ್ಪಟ್ಟವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ


Team Udayavani, May 25, 2021, 7:35 AM IST

ಲಸಿಕೆಗೆ 18+ ನವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ

ಹೊಸದಿಲ್ಲಿ: ನೀವು 18ರಿಂದ 44ರ ವಯೋಮಾನದವರಾ? ನಿಮ್ಮಲ್ಲಿ ಸ್ಮಾರ್ಟ್‌ ಫೋನ್‌ ಅಥವಾ ಇಂಟರ್ನೆಟ್‌ ಸಂಪರ್ಕ ಇಲ್ಲವೇ? ಹಾಗಿದ್ದರೆ ಲಸಿಕೆ ಪಡೆಯಲು ಕೋವಿನ್‌ ವೆಬ್‌ ಪೋರ್ಟಲ್‌ ನಲ್ಲಿ ನೋಂದಣಿ ಮಾಡಲೇಬೇಕೆಂದೇನೂ ಇಲ್ಲ. ನೇರವಾಗಿ ಸರಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಅಲ್ಲೇ ನೋಂದಣಿ ಮಾಡಿಕೊಳ್ಳಬಹುದು.

ಇಂಥದ್ದೊಂದು ಅವಕಾಶವನ್ನು ಕೇಂದ್ರ ಸರಕಾರ ಕಲ್ಪಿಸಿದೆ. ಮುಂಚಿತವಾಗಿಯೇ ಕೋವಿನ್‌ ನಲ್ಲಿ ನೋಂದಣಿ ಮಾಡಿಕೊಂಡವರಿಗೆ(18-44 ವಯೋಮಾನದವರು) ಲಸಿಕೆ ವಿತರಣೆ ಕೇಂದ್ರದಲ್ಲಿ ಮೊದಲಿಗೆ ಲಸಿಕೆ ವಿತರಿಸಲಾಗುತ್ತದೆ. ದಿನದ ಅಂತ್ಯದಲ್ಲಿ ಇನ್ನೂ ಲಸಿಕೆಯ ಡೋಸ್‌ಗಳು ಉಳಿದಿದ್ದರೆ ಅದನ್ನು “ನೋಂದಣಿ ಮಾಡದೇ ಬಂದವರಿಗೆ’ ನೀಡಲಾಗುತ್ತದೆ. ಇದರಿಂದ ಲಸಿಕೆ ಪೋಲಾಗುವುದನ್ನು ತಪ್ಪಿಸಿದಂತಾಗುತ್ತದೆ ಎಂದು ಕೇಂದ್ರ ಸರಕಾರ ಹೇಳಿದೆ.

ಹೀಗಿದ್ದರೂ, ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ನಿರ್ಧಾರವನ್ನು ಆಯಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಟ್ಟು ಬಿಡಲಾಗಿದೆ. ಜತೆಗೆ ಸದ್ಯಕ್ಕೆ ಸರಕಾರಿ ಲಸಿಕಾ ಕೇಂದ್ರಗಳಲ್ಲಿ ಮಾತ್ರವೇ ಈ ಸೌಲಭ್ಯವಿದ್ದು, ಖಾಸಗಿಯಲ್ಲಿ ಇರುವುದಿಲ್ಲ ಎಂದೂ ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. 45 ವರ್ಷ ದಾಟಿದವರಿಗೆ ಈಗಲೂ ಸ್ಥಳದಲ್ಲೇ ನೋಂದಣಿ ಮಾಡುವ ಅವಕಾಶವಿದೆ.

ಸ್ಪುಟ್ನಿಕ್‌ ವಿ ಲಸಿಕೆ ಉತ್ಪಾದನೆ ಶುರು
ಹೊಸದಿಲ್ಲಿ: ರಷ್ಯಾ ಸರಕಾರದ ರಷ್ಯನ್‌ ಡೈರೆಕ್ಟ್ ಇನ್ವೆಸ್ಟ್‌ಮೆಂಟ್‌ ಫ‌ಂಡ್‌ (ಆರ್‌ಡಿಐಎಫ್) ಮತ್ತು ದೇಶದ ಪ್ರಮುಖ ಔಷಧೋದ್ಯಮ ಸಂಸ್ಥೆ ಪನಾಸಿಯಾ ಬಯೋಟೆಕ್‌ ಸಹಭಾಗಿತ್ವದಲ್ಲಿ “ಸ್ಪುಟ್ನಿಕ್‌-ವಿ’ ಲಸಿಕೆಯ ಉತ್ಪಾದನೆ ಸೋಮವಾರ ಆರಂಭವಾಗಿದೆ. ಪ್ರತಿ ವರ್ಷ 10 ಕೋಟಿ ಡೋಸ್‌ಗಳನ್ನು ಹಿಮಾಚಲ ಪ್ರದೇಶದಲ್ಲಿ ರುವ ಪನೇಸಿಯಾ ಬಯೋಟೆಕ್‌ನ ಘಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಈ ಬಗ್ಗೆ ಹೊಸದಿಲ್ಲಿಯಲ್ಲಿ ಸೋಮವಾರ 2 ಸಂಸ್ಥೆಗಳು ಘೋಷಣೆ ಮಾಡಿವೆ. ಅಲ್ಲಿ ಉತ್ಪಾದನೆ ಮಾಡಲಾಗುವ ಲಸಿಕೆಗಳನ್ನು ಗುಣಮಟ್ಟ ಪರೀಕ್ಷೆಗಾಗಿ ರಷ್ಯಾದ ಗಮಾಲೆಯಾ ಕೇಂದ್ರಕ್ಕೆ ರವಾನಿಸಲಾಗುತ್ತದೆ. ಕಳೆದ ತಿಂಗಳು ಈ ಬಗ್ಗೆ ಎರಡೂ ಸಂಸ್ಥೆಗಳೂ ಒಪ್ಪಂದ ಮಾಡಿಕೊಂಡಿದ್ದವು. ಇದಲ್ಲದೆ ಹೈದರಾಬಾದ್‌ನ ಡಾ|ರೆಡ್ಡೀಸ್‌ ಲ್ಯಾಬೊರೇಟರಿ ಮತ್ತು ರಾಯಚೂರಿನ ಶಿಲ್ಪಾ ಮೆಡಿ ಕೇರ್‌ “ಸ್ಪುಟ್ನಿಕ್‌-ವಿ’ ಉತ್ಪಾದಿಸುವ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಿದ್ದವು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.