NDA: 3ನೇ ಅವಧಿಯಲ್ಲೇ ಒಂದು ದೇಶ-ಒಂದು ಚುನಾವಣೆ ಜಾರಿಯಾಗಲಿದೆ…ಮೈತ್ರಿ ಬೆಂಬಲವಿದೆಯೇ?
ರೈತರ ಮೂಲಭೂತ ಸೌಕರ್ಯಕ್ಕಾಗಿ ವಾರ್ಷಿಕ 11 ಲಕ್ಷ ಕೋಟಿ ವ್ಯಯಿಸಲಾಗುತ್ತಿದೆ
Team Udayavani, Sep 16, 2024, 1:22 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 3ನೇ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿದೆ. ಏತನ್ಮಧ್ಯೆ ಬಿಜೆಪಿ ಬಹುಮತ ಪಡೆಯದಿದ್ದರೂ ಕೂಡಾ ಎನ್ ಡಿಎ ಸರ್ಕಾರದ ಈ ಅವಧಿಯಲ್ಲೇ “ಒಂದು ದೇಶ- ಒಂದು ಚುನಾವಣೆ” ಯನ್ನು ಜಾರಿಗೊಳಿಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
60 ವರ್ಷಗಳ ನಂತರ 3ನೇ ಅವಧಿಗೆ ಅಸ್ತಿತ್ವಕ್ಕೆ ಬಂದಿರುವ ಎನ್ ಡಿಎ ಸರ್ಕಾರದ ನೀತಿ-ನಿಯಮದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ನಮ್ಮ ಸರ್ಕಾರದ ಆಶಯಗಳೆಲ್ಲವೂ ಈಡೇರಲಿದೆ ಎಂದು ಮೂಲಗಳು ತಿಳಿಸಿವೆ.
ಎನ್ ಡಿಎ ಸರ್ಕಾರದ 3ನೇ ಅವಧಿ ಭಾನುವಾರ (ಸೆ.15) ನೂರು ದಿನಗಳನ್ನು ಪೂರೈಸಿದೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ನಿರ್ಧರಿಸಿದ್ದ ನೀತಿಯನ್ನು ಮುಂದುವರಿಸಿದ್ದು, ಅದು ರಕ್ಷಣಾ ಕ್ಷೇತ್ರವಾಗಲಿ, ಬಾಹ್ಯಾಕಾಶ, ವಿದೇಶಾಂಗ, ಗೃಹ ವ್ಯವಹಾರ, ಶಿಕ್ಷಣ, ಡಿಜಿಟಲ್ ಇಂಡಿಯಾ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರು, ಯುವಕರು, ಬಡವರು ಮತ್ತು ರೈತರ ಮೂಲಭೂತ ಸೌಕರ್ಯಕ್ಕಾಗಿ ವಾರ್ಷಿಕ 11 ಲಕ್ಷ ಕೋಟಿ ವ್ಯಯಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
2014ರಿಂದ ಈವರೆಗೂ ನಮ್ಮ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅದರಲ್ಲೂ ನಮ್ಮ ವಿದೇಶ ನೀತಿ ಬೆನ್ನುಲುಬಾಗಿ ನಿಂತಿದೆ. ಇದು ಈ ಹಿಂದಿನ ಯಾವುದೇ ಸರ್ಕಾರದಲ್ಲಿ ಸಮರ್ಪಕವಾಗಿ ನಡೆದಿಲ್ಲ ಎಂದು ವರದಿ ತಿಳಿಸಿದೆ.
ಮುಂದಿನ ನಡೆ ಏನು?
ಒಂದು ದೇಶ, ಒಂದು ಚುನಾವಣೆಗಾಗಿ ಸಂವಿಧಾನದ ತಿದ್ದುಪಡಿ ಅಗತ್ಯವಿದೆ. ಆದರೆ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ಒಟ್ಟಾಗಿ ನಡೆಸುವುದಾಗಿದೆ. ಈ ವಿಷಯದಲ್ಲಿನ ತಿದ್ದುಪಡಿಗಾಗಿ ರಾಜ್ಯಗಳ ಪಾತ್ರದ ಅಗತ್ಯವಿಲ್ಲ. ಒಂದು ಬಾರಿ ಲೋಕಸಭೆಯಲ್ಲಿ ತಿದ್ದುಪಡಿ ಅಂಗೀಕಾರವಾದರೆ ಸಾಕು. ಎರಡನೇ ಹಂತವಾಗಿ ಲೋಕಸಭೆ-ವಿಧಾನಸಭೆ ಚುನಾವಣೆ ನಡೆಯುವ 100 ದಿನದೊಳಗೆ ನಗರಪಾಲಿಕೆ ಮತ್ತು ಪಂಚಾಯತ್ ಚುನಾವಣೆಯನ್ನು ಕೂಡ ನಡೆಸುವ ಇಚ್ಛೆ ಹೊಂದಿರುವುದಾಗಿ ಎನ್ ಡಿಎ ಮೂಲಗಳು ತಿಳಿಸಿವೆ. ಈ ಬದಲಾವಣೆಗೆ ಒಟ್ಟು ರಾಜ್ಯಗಳಲ್ಲಿ ಶೇ.50ರಷ್ಟು ರಾಜ್ಯಗಳ ಅನುಮೋದನೆ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನಗಣತಿ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಜಾತಿ ಕಲಂ ಸೇರಿಸುವ ಬಗ್ಗೆ ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಬೇಕಿದೆ. ಈ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ. ಕೋವಿಡ್ 19 ಕಾರಣದಿಂದ 2020ರಲ್ಲಿ ಜನಗಣತಿ ನಡೆದಿರಲಿಲ್ಲ ಎಂದು ವರದಿ ಹೇಳಿದೆ.
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳಲ್ಲಿ ಜಯಗಳಿಸಿತ್ತು. ಮೈತ್ರಿ ಪಕ್ಷವಾ ಟಿಡಿಪಿ, ಜೆಡಿಯು, ಲೋಕ ಜನಶಕ್ತಿ ಪಕ್ಷ ಜತೆಗೂಡಿ ಬಹುಮತ ಪಡೆದಿತ್ತು. ಏತನ್ಮಧ್ಯೆ ಒಂದು ದೇಶ, ಒಂದು ಚುನಾವಣೆಗೆ ಮೈತ್ರಿ ಬೆಂಬಲ ಸಿಗುವುದೇ ಎಂಬುದು ಪ್ರಶ್ನೆಯಾಗಿದೆ. ಆದರೆ ಬಿಜೆಪಿ ಮುಖಂಡರ ಪ್ರಕಾರ, ಈ ಬಗ್ಗೆ ಮೈತ್ರಿ ಪಕ್ಷವು ಜತೆಗಿದ್ದು, ಎಲ್ಲವೂ ಅಂಕೆ-ಸಂಖ್ಯೆಯ ಮೇಲೆ ನಿರ್ಧಾರವಾಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.