Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…
ಶ್ರೀರಾಮ್ ನಾಯಕ್, Jul 20, 2024, 11:14 AM IST
ಗೋಬಿ, ಪನ್ನೀರ್, ಮಶ್ರೂಮ್ ಮಂಚೂರಿಯನ್ನು ನೀವು ಸವಿದಿರುತ್ತೀರಿ ಆದರೆ ನೀವೆಂದಾದರೂ ಈರುಳ್ಳಿ ಮಂಚೂರಿಯನ್ ತಿಂದಿದ್ದೀರಾ ಇಲ್ಲವಾದರೆ ರುಚಿ-ರುಚಿಯಾದ ಈರುಳ್ಳಿ ಮಂಚೂರಿಯನ್ನು ಮನೆಯಲ್ಲೇ ಮಾಡಬಹುದಾಗಿದ್ದು, ವಿಭಿನ್ನ ರುಚಿಯನ್ನು ಸವಿಯಬಹುದು.
ಈರುಳ್ಳಿ ಮಂಚೂರಿ ಮಾಡುವುದು ಎಷ್ಟು ಸುಲಭವೋ ಅಷ್ಟೇ ರುಚಿಯಾಗಿರುತ್ತದೆ. ಹಾಗಾದ್ರೆ ಇನ್ನೇಕೆ ತಡ, ಬೇಕಾಗಿರುವ ಸಾಮಗ್ರಿಗಳ ಪಟ್ಟಿ, ಮಾಡುವ ವಿಧಾನವು ಈ ಕೆಳಗಿನಂತಿದೆ. ಇಂದು ನಾವು ಈರುಳ್ಳಿ ಮಂಚೂರಿ ಮಾಡುವ ಬನ್ನಿ….
ಬೇಕಾಗುವ ಸಾಮಗ್ರಿಗಳು
ಈರುಳ್ಳಿ-5 (ಸಣ್ಣಗೆ -ಉದ್ದಕ್ಕೆ ಹೆಚ್ಚಿದ್ದು), ಶುಂಠಿ-ಬೆಳ್ಳುಳ್ಳಿ ಪೇಸ್ಟ್-2ಚಮಚ, ಅಚ್ಚಖಾರದ ಪುಡಿ-2ಚಮಚ, ಮೈದಾ ಹಿಟ್ಟು-2 ಚಮಚ, ಕಾರ್ನ್ ಫ್ಲೋರ್-2ಚಮಚ, ಹಸಿಮೆಣಸು-1 (ಸಣ್ಣಗೆ ಹೆಚ್ಚಿದ್ದು), ಟೊಮೆಟೋ ಸಾಸ್-2ಚಮಚ,ಸೋಯಾ ಸಾಸ್-1 ಚಮಚ, ಚಿಲ್ಲಿ ಸಾಸ್-1ಚಮಚ, ವಿನೆಗರ್-1ಚಮಚ, ಈರುಳ್ಳಿ-1(ಸಣ್ಣಗೆ ಹೆಚ್ಚಿದ್ದು), ಶುಂಠಿ-ಬೆಳ್ಳುಳ್ಳಿ-ಸಣ್ಣಗೆ ಹೆಚ್ಚಿದ್ದು ಸ್ವಲ್ಪ, ಸ್ಪ್ರಿಂಗ್ ಆನಿಯನ್-ಸಣ್ಣಗೆ ಹೆಚ್ಚಿದ್ದು ಸ್ವಲ್ಪ, ಕ್ಯಾಪ್ಸಿಕಂ-ಸಣ್ಣಗೆ ಹೆಚ್ಚಿದ್ದು ಸ್ವಲ್ಪ, ಕರಿಯಲು-ಎಣ್ಣೆ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಉಪ್ಪು-ರುಚಿಗೆ ತಕ್ಕಷ್ಟು .
ತಯಾರಿಸುವ ವಿಧಾನ
ಮೊದಲಿಗೆ ಒಂದು ಬೌಲ್ ಗೆ ಸಣ್ಣಗೆ ಉದ್ದಕ್ಕೆ ಹೆಚ್ಚಿದ ಈರುಳ್ಳಿಯನ್ನು ಹಾಕಿ ಅದಕ್ಕೆ ಅಚ್ಚಖಾರದ ಪುಡಿ ಮತ್ತು ಸ್ವಲ್ಪ ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಇದಕ್ಕೆ ಮೈದಾ ಹಿಟ್ಟು, ಕಾರ್ನ್ ಫ್ಲೋರ್ ,ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಸ್ವಲ್ಪ ನೀರನ್ನು ಸೇರಿಸಿ ಪುನಃ ಮಿಶ್ರಣ ಮಾಡಿ ಸಣ್ಣ-ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ.
ತದನಂತರ ಒಲೆಯ ಮೇಲೆ ಒಂದು ಬಾಣಲೆಯಿಟ್ಟು ಎಣ್ಣೆ ಹಾಕಿ, ಕಾದನಂತರ ಮಾಡಿಟ್ಟ ಉಂಡೆಗಳನ್ನು ಹಾಕಿ ಸರಿಯಾಗಿ ಫ್ರೈ ಮಾಡಿರಿ.ಆ ಬಳಿಕ ಸಣ್ಣಗೆ ಹೆಚ್ಚಿದ ಈರುಳ್ಳಿ, ಶುಂಠಿ-ಬೆಳ್ಳುಳ್ಳಿ, ಹಸಿಮೆಣಸು,ಕ್ಯಾಪ್ಸಿಕಂ ಹಾಕಿ ಕಂದು ಬಣ್ಣ ಬರುವವರೆಗೆ ಹುರಿದುಕೊಳ್ಳಿ. ಇದಕ್ಕೆ ಟೊಮೆಟೋ ಸಾಸ್, ಚಿಲ್ಲಿ ಸಾಸ್, ಸೋಯಾ ಸಾಸ್, ವಿನೆಗರ್ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಸರಿಯಾಗಿ ಮಿಶ್ರಣ ಮಾಡಿ.
ನಂತರ ಸ್ವಲ್ಪ ನೀರಿಗೆ ಕಾರ್ನ್ ಫ್ಲೋರ್ ಹಾಕಿ ಈ ಮಿಶ್ರಣಕ್ಕೆ ಸೇರಿಸಿ ಚೆನ್ನಾಗಿ ಕುದಿಯಲು ಬಿಡಿ. ತದನಂತರ ಫ್ರೈ ಮಾಡಿಟ್ಟ ಈರುಳ್ಳಿ ಉಂಡೆಗಳನ್ನು ಹಾಕಿ ಮಿಶ್ರಣ ಮಾಡಿ ಇದಕ್ಕೆ ಸ್ಪ್ರಿಂಗ್ ಆನಿಯನ್ ಮತ್ತು ಕೊತ್ತಂಬರಿ ಸೊಪ್ಪನ್ನು ಹಾಕಿದರೆ ರುಚಿಕರವಾದ ಈರುಳ್ಳಿ ಮಂಚೂರಿಯನ್ ಸವಿಯಲು ಸಿದ್ಧ.
-ಶ್ರೀರಾಮ್ ಜಿ.ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ
Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!
Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್ ಬಳಸಿ
Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ
2025ಕ್ಕೆ ಬಾಲಿವುಡ್ಗೆ ಸೀಕ್ವೆಲ್ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.