ಉಡುಪಿ ಜಿಲ್ಲೆಯಲ್ಲಿ ಆನ್‌ಲೈನ್‌ ವಂಚನೆ: ವರ್ಷಾರಂಭದಲ್ಲೇ 8 ಲ.ರೂ. ಪಂಗನಾಮ


Team Udayavani, Feb 27, 2023, 10:11 AM IST

HACK

ಉಡುಪಿ: ಆನ್‌ಲೈನ್‌ ವ್ಯವಹಾರದಲ್ಲಿ ಅದೆಷ್ಟು ಜಾಗರೂಕರಾಗಿದ್ದರೂ ಖದೀಮರು ವಿಭಿನ್ನ ರೀತಿಯಲ್ಲಿ ಜನರನ್ನು ಯಾಮಾರಿಸುವ ಕಲೆ ಕರಗತ ಮಾಡಿಕೊಂಡಿದ್ದಾರೆ. ಈ ವರ್ಷದ ಜನವರಿಯಿಂದ ಫೆ.26ರ ವರೆಗೆ ಜಿಲ್ಲೆಯಲ್ಲಿ 8 ಪ್ರಕರಣಗಳು ದಾಖಲಾಗಿದ್ದು, 8,55,165 ರೂ. ಮೊತ್ತ ವಂಚಕರ ಪಾಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಅಪರಿಚಿತ ಲಿಂಕ್‌ಗಳನ್ನು ಕಳುಹಿಸಿ ಯಾಮಾರಿಸುವುದು, ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ಕರೆ ಮಾಡಿ ಮಾಹಿತಿ ಸಂಗ್ರಹಿಸುವುದು, ಒಟಿಪಿ ಕಳುಹಿಸಿ ನಂಬರ್‌ ಪಡೆದು ಹಣ ದೋಚುವುದು, ಗಿಫ್ಟ್ ನೆಪದಲ್ಲಿ ವಂಚನೆ, ಆನ್‌ಲೈನ್‌ ಉದ್ಯೋಗದ ಆಮಿಷದ ಮೂಲಕ ಹಣ ವರ್ಗಾಯಿಸಿಕೊಳ್ಳುವುದು, ತಪ್ಪಾಗಿ ಹಣ ವರ್ಗಾಯಿಸಿ ಮತ್ತೆ ಮರುಪಾವತಿಸಲು ತಿಳಿಸುವುದು ಇತ್ಯಾದಿ ತಂತ್ರಗಾರಿಕೆಯನ್ನು ಆನ್‌ಲೈನ್‌ ವಂಚಕರು ಬಳಕೆ ಮಾಡುತ್ತಿರುವುದು ಈ ಪ್ರಕರಣಗಳಲ್ಲಿ ಗೋಚರಕ್ಕೆ ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬ್ಯಾಂಕ್‌ ಖಾತೆಗೆ ಹಣ

ನಮ್ಮ ಬ್ಯಾಂಕ್‌ ಅಕೌಂಟ್‌ನ ಉಳಿತಾಯ ಖಾತೆಗೆ ಅಪರಿಚಿತ ವ್ಯಕ್ತಿಗಳು ನಿರ್ದಿಷ್ಟ ಮೊತ್ತವನ್ನು ಹಾಕುತ್ತಾರೆ. ಅನಂತರ ಫೋನ್‌ ಕರೆ ಮಾಡಿ ನಿಮ್ಮ ತಂದೆಯವರ ಸ್ನೇಹಿತ, ಬಂಧು ಅಥವಾ ಬೇರೆಯವರಿಗೆ ಹಾಕುವ ಹಣವನ್ನು ನಿಮಗೆ ಹಾಕಿದ್ದೇವೆ ದಯವಿಟ್ಟು ಮರುಪಾವತಿಸಿ ಎಂದು ನಮ್ಮನ್ನು ಪುಸಲಾಯಿಸುತ್ತಾರೆ. ಆಗ ಬ್ಯಾಂಕ್‌ ವಿವರ ಪಡೆದು ಒಟಿಪಿ ತಿಳಿಸುವಂತೆ ಹೇಳಿ ವಂಚಿಸುತ್ತಾರೆ. ಅಕೌಂಟ್‌ ಮಾಹಿತಿ ಪಡೆದು ಒಟಿಪಿ ನಂಬರ್‌ ಪಡೆದುಕೊಂಡು ವಂಚಿಸುತ್ತಾರೆ.

ಕೆಲವು ಬಾರಿ ಕಣ್ತಪ್ಪಿನಿಂದ ಗೂಗಲ್‌ ಪೇ ಅಥವಾ ಫೋನ್‌ ಪೇನಲ್ಲಿ ಬೇರೆಯವರಿಗೆ ಹಣ ಹೋಗುವುದಿದೆ. ಅದನ್ನು ಕೂಡಲೇ ಅದೇ ಮಾರ್ಗದಲ್ಲಿ ಫೋನ್‌ ಸಂಖ್ಯೆಯ ಮೂಲಕ ಹಿಂದಕ್ಕೆ ಪಡೆದುಕೊಳ್ಳಬಹುದು ಅಥವಾ ಹಿಂದಿರುಗಿಸಬಹುದು. ಯಾವುದೇ ಕಾರಣಕ್ಕೂ ಬ್ಯಾಂಕ್‌ ವಿವರ, ಎಡಿಎಂ ವಿವರ, ಒಟಿಪಿ ಮಾಹಿತಿಯನ್ನು ವಾಟ್ಸಾಪ್‌, ಎಸ್‌ಎಂಎಸ್‌, ಜಿಮೈಲ್‌, ಟೆಲಿಗ್ರಾಂ ಆ್ಯಪ್‌ಗ್ಳ ಮೂಲಕ ಬರುವ ಲಿಂಕ್‌ಗಳನ್ನು ಕ್ಲಿಕ್ಕಿಸುವುದು, ಹಂಚುವುದನ್ನು ಮಾಡದಿರುವುದೇ ಒಳಿತು ಎನ್ನುತ್ತಾರೆ ಸೈಬರ್‌ ಪರಿಣಿತರು.

ದೂರು ನೀಡಲು ಹಿಂಜರಿಕೆ ಬೇಡ

ವಿದ್ಯಾವಂತರು, ಶೇ.20-30ರಷ್ಟು ಹಿರಿಯ ನಾಗರಿಕರು ಸೈಬರ್‌ ವಂಚನೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೆಚ್ಚಿನವರು ತಮ್ಮ ಘನತೆಗೆ ಅಂಜಿ ದೂರು ನೀಡಲು ಹಿಂದೇಟು ಹಾಕುತ್ತಾರೆ. ಯಾರೇ ಆದರೂ ಆನ್‌ಲೈನ್‌ ವ್ಯವಹಾರ ಮಾಡುವಾಗ ಎಚ್ಚರ ವಹಿಸುವುದು ಅತೀ ಅಗತ್ಯ. ಅಪರಿಚಿತರೊಂದಿಗೆ ಆನ್‌ಲೈನ್‌ನಲ್ಲಿ ಹಣಕಾಸಿನ ವ್ಯವಹಾರ ಮಾಡುವ ನಿಟ್ಟಿನಲ್ಲಿ ಹೆಚ್ಚು ಎಚ್ಚರ ವಹಿಸಬೇಕು.

ಎಚ್ಚರವಹಿಸಿದಷ್ಟು ಉತ್ತಮ
ಅತೀ ಶೀಘ್ರ(ಗೋಲ್ಡನ್‌ ಹವರ್‌)ದಲ್ಲಿ ದೂರು ನೀಡಿದ ಸಂದರ್ಭದಲ್ಲಿ ಆ ಹಣವನ್ನು ತಡೆಹಿಡಿದು ಹಿಂತಿರುಗಿಸುವ ಕೆಲಸ ಮಾಡಲಾಗಿದೆ. ಅನಾಮಧೇಯ ಸಂದೇಶ, ಲಿಂಕ್‌ಗಳನ್ನು ಆದಷ್ಟು ನಿರ್ಲಕ್ಷಿಸಿದರೆ ಉತ್ತಮ. ಯಾವುದೇ ಆತಂಕಕ್ಕೊಳಗಾಗದೆ ದೂರು ನೀಡಬೇಕು.
-ಹಾಕೆ ಅಕ್ಷಯ್‌ ಮಚ್ಚೀಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಗೋಲ್ಡರ್‌ ಹವರ್‌
ಶೇ.90ರಷ್ಟು ಪ್ರಕರಣಗಳಲ್ಲಿ ವಂಚನೆಗೊಳಗಾದ ಹಣ ಹಿಂದಕ್ಕೆ ಸಿಗುವುದೇ ಇಲ್ಲ. ಆನ್‌ಲೈನ್‌ ವಂಚನೆ ತಡೆಗಿರುವ ಏಕೈಕ ಮಾರ್ಗವೆಂದರೆ ಗೋಲ್ಡನ್‌
ಹವರ್‌ನ ಸದುಪಯೋಗ. ಇದಕ್ಕೆ ನಿರ್ದಿಷ್ಟ ಕಾಲಮಿತಿ ಎಂಬುವುದಿಲ್ಲ. ಘಟನೆ ನಡೆದ ತತ್‌ಕ್ಷಣ ಸಮೀಪದ ಪೊಲೀಸ್‌ ಠಾಣೆ ಅಥವಾ ಸೈಬರ್‌ ಠಾಣೆಗೆ ದೂರು ನೀಡಿ ಆದ ಘಟನೆಯನ್ನು ವಿವರಿಸಿದರೆ ಅಕೌಂಟ್‌ ಟ್ರ್ಯಾಕ್‌ ಮಾಡಿ ತಡೆಹಿಡಿಯಲು ಸಾಧ್ಯವಿದೆ. ದೂರು ನೀಡಲು ವಿಳಂಬ ಮಾಡಿದಷ್ಟು ಪ್ರಕರಣ ಜಟಿಲವಾಗುತ್ತದೆ ಎಂಬುವುದು ಸೈಬರ್‌ ಪೊಲೀಸರ ಅಭಿಪ್ರಾಯ.

ಇದನ್ನೂ ಓದಿ: ಅಸಹಾಯಕರಿಗೆ “ವಾತ್ಸಲ್ಯ’: ಡಾ| ಹೇಮಾವತಿ ಹೆಗ್ಗಡೆ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.