Order to Insurence: ಪರವಾನಗಿ ಇಲ್ಲದಿದ್ದರೂ ಅಪಘಾತ ವಿಮೆ ಪಾವತಿಸಿ: ಹೈಕೋರ್ಟ್‌

ಪರಿಹಾರ ಮೊತ್ತ ವಾಹನ ಮಾಲಕರಿಂದ ವಿಮಾ ಕಂಪೆನಿ ವಸೂಲಿ ಮಾಡಿಕೊಳ್ಳಬಹುದು,  ಮಹತ್ವದ ಆದೇಶ

Team Udayavani, Oct 9, 2024, 7:15 AM IST

High-Court

ಬೆಂಗಳೂರು: ಅಪಘಾತ ಸಂಭವಿಸಿದ ಸಂದರ್ಭದಲ್ಲಿ ವಾಹನಕ್ಕೆ ಪರವಾನಗಿ  ಮತ್ತು ಫಿಟ್‌ನೆಸ್‌ ಸರ್ಟಿಫಿಕೇಟ್‌ (ಕ್ಷಮತಾ ಪ್ರಮಾಣಪತ್ರ) ಇಲ್ಲದಿದ್ದರೂ ವಿಮಾ ಕಂಪೆನಿ ಘಟನೆಯಿಂದ ನೊಂದವರಿಗೆ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ ಪರಿಹಾರದ ಮೊತ್ತವನ್ನು ವಾಹನ ಮಾಲಕರಿಂದ ವಿಮಾ ಕಂಪೆನಿ ವಸೂಲಿ ಮಾಡಿಕೊಳ್ಳಬಹುದು ಎಂದೂ ಹೇಳಿದೆ.

ಅಪಘಾತಕ್ಕೊಳಗಾದ ವಾಹನಕ್ಕೆ ಫಿಟ್‌ನೆಸ್‌ ಸರ್ಟಿಫಿಕೇಟ್‌ ಇಲ್ಲದಿದ್ದರೂ ಪರಿಹಾರಕ್ಕೆ ಸೂಚಿಸಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ಶ್ರೀರಾಮ ಜನರಲ್‌ ಇನ್ಶೂರೆನ್ಸ್‌ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ಹಾಗೂ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಮೃತ ವ್ಯಕ್ತಿಯ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಎರಡೂ ಮೇಲ್ಮನವಿಗಳನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠ, ವಿಮಾ ಕಂಪೆನಿ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ ವಿಮಾ ಕಂಪೆನಿಯೇ ಪರಿಹಾರ ನೀಡಬೇಕು. ಆ ಪರಿಹಾರದ ಮೊತ್ತವನ್ನು ಸಂಬಂಧಪಟ್ಟ ವಾಹನ ಮಾಲೀಕರಿಂದ ವಸೂಲಿ ಮಾಡಬಹುದು ಎಂದು ಆದೇಶಿಸಿದೆ. ಅದೇ ರೀತಿ ಪರಿಹಾರ ಮೊತ್ತ ಹೆಚ್ಚಳ ಮಾಡುವ ಮೃತ ವ್ಯಕ್ತಿಯ ಪತ್ನಿ ಸಲ್ಲಿಸಿದ ಮೇಲ್ಮನವಿಯಲ್ಲಿ ಪರಿಹಾರ ಮೊತ್ತವನ್ನು 13.44 ಲಕ್ಷದಿಂದ 13.88 ಲಕ್ಷ ರೂ.ಗೆ ಹೆಚ್ಚಳ ಮಾಡಿ, ಶೇ.6ರಷ್ಟು ವಾರ್ಷಿಕ ಬಡ್ಡಿ ಸೇರಿಸಿ ಪಾವತಿಸಲು ಆದೇಶಿಸಿದೆ.

ವಾಹನ ಮಾಲೀಕರು ತನ್ನ ವಾಹನವನ್ನು ರಸ್ತೆಗಿಳಿಸುವ ವೇಳೆ ಪರವಾನಗಿ ಮತ್ತು ಫಿಟ್‌ನೆಸ್‌ ಸರ್ಟಿಫಿಕೇಟ್‌ (ಕ್ಷಮತಾ ಪ್ರಮಾಣಪತ್ರ) ಹೊಂದಿಲ್ಲ. ಇದು ವಾಹನ ಮಾಲಕರ ಮೂಲಭೂತ ಉಲ್ಲಂಘನೆ. ಈ ಪ್ರಕ್ರಿಯೆಯಲ್ಲಿ ವಾಹನ ಮಾಲಕರ ತಪ್ಪೂ ಇದೆ. ಹೀಗಾಗಿ ವಿಮಾ ಕಂಪೆನಿಗಳಿಗೆ ಸಂಪೂರ್ಣ ಜವಾಬ್ದಾರಿಯಿಂದ ವಿನಾಯಿತಿ ನೀಡಬೇಕು. ಮಾಲಕರೇ ಪರಿಹಾರ ಪಾವತಿಸಬೇಕು ಎಂಬ ವಿಮಾ ಕಂಪೆನಿಯ ವಾದವನ್ನು ನ್ಯಾಯಪೀಠ ತಿರಸ್ಕರಿಸಿದೆ.

ಚಿಕ್ಕತಿರುಪತಿ ಪ್ರಕರಣ
ಹೊಸಕೋಟೆ- ಚಿಕ್ಕತಿರುಪತಿ ಮಾರ್ಗದಲ್ಲಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನಂದೀಶಪ್ಪ ಅವರಿಗೆ ಗೂಡ್ಸ್‌ ವಾಹನ ಢಿಕ್ಕಿ ಹೊಡೆದಿತ್ತು. ಇದರಿಂದ ತಲೆಗೆ ತೀವ್ರತರದ ಪೆಟ್ಟಾಗಿದ್ದು, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ 13.88 ಲಕ್ಷ ರೂ.ಗಳ ಪರಿಹಾರ ನೀಡಲು ಆದೇಶಿಸಿತ್ತು. ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಹಾಗೂ ನ್ಯಾಯಾಧಿಕರಣದ ಆದೇಶ ರದ್ದು ಕೋರಿ ವಿಮಾ ಕಂಪೆನಿಗಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

ಟಾಪ್ ನ್ಯೂಸ್

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

Ramanagar

Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.